Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...