Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...