Homeಮುಖಪುಟಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಬಂಧನ

ಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಬಂಧನ

- Advertisement -
- Advertisement -

ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಅಚಿಂತ್ಯ ಶಿವಲಿಂಗಂ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.

ಪ್ರಿನ್ಸ್ ಟನ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ಮೂಲದ ವಿದ್ಯಾರ್ಥಿನಿ ಅಚಿಂತ್ಯ ಶಿವಲಿಂಗಂ ಅವರನ್ನು ಬಂಧಿಸಲಾಗಿದ್ದು, ಆಕೆಯನ್ನು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಉಚ್ಛಾಟಿಸಲಾಗಿದೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡದ ವಿರುದ್ಧ ಯುಎಸ್‌ನಾದ್ಯಂತದ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಈ ಬೆಳವಣಿಗೆ ನಡೆದಿದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಹುಟ್ಟಿ ಓಹಿಯೋದ ಕೊಲಂಬಸ್‌ನಲ್ಲಿ ಬೆಳೆದ ಶಿವಲಿಂಗಂ ಮತ್ತು ಇನ್ನೋರ್ವ ಸಹ ವಿದ್ಯಾರ್ಥಿ ಹಸನ್ ಸೈಯದ್ ಅವರನ್ನು ಬಂಧಿಸಲಾಗಿದೆ ಎಂದು ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ ವರದಿ ಮಾಡಿದೆ.

ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು  ಪ್ರಿನ್ಸ್ ಟನ್ ವಿವಿಯ ಮೆಕ್‍ಗೋಶ್ ಅಂಗಳದಲ್ಲಿ  ವಿವಿ ಅಧಿಕಾರಿಗಳ  ಎಚ್ಚರಿಕೆಯ ಹೊರತಾಗಿಯೂ ಪ್ರತಿಭಟನೆಗೆ ಟೆಂಟ್‌ಗಳನ್ನು ಸ್ಥಾಪಿಸಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ  ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಳಿಕ ಪ್ರತಿಭಟನಾಕಾರರು ತಮ್ಮ ಡೇರೆಗಳನ್ನು ತೆರವುಗೊಳಿಸಿದರೂ, ಧರಣಿ ಮುಂದುವರಿಸಲಾಗಿದೆ ಎನ್ನಲಾಗಿದೆ.

ಆರಂಭದಲ್ಲಿ ಸುಮಾರು 110 ಜನರ ಗುಂಪು ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಪ್ರತಿಭಟನಾಕಾರರ ಸಂಖ್ಯೆ 300ಕ್ಕೇರಿತ್ತು. ಭಾರತೀಯ ವಿದ್ಯಾರ್ಥಿಯ ಬಂಧನವನ್ನು ದೃಢಪಡಿಸಿರುವ ವಿವಿ ವಕ್ತಾರರಾದ ಜೆನ್ನಿಫರ್ ಮೊರಿಲ್, ಪ್ರತಿಭಟನೆ ನಿಲ್ಲಿಸಿ ಜಾಗ ತೆರವುಗೊಳಿಸುವಂತೆ ಸಾರ್ವಜನಿಕ ಸುರಕ್ಷಾ ವಿಭಾಗ ಪದೇ ಪದೇ ಎಚ್ಚರಿಕೆ ನೀಡಿದ ಬಳಿಕವೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಅವರನ್ನು ತಕ್ಷಣಕ್ಕೆ ಕಾಲೇಜಿನಿಂದ ವಜಾಗೊಳಿಸಲಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕಿದೆ. ಬಂಧನದ ವೇಳೆ ಸಾರ್ವಜನಿಕ ಸುರಕ್ಷತಾ ಅಧಿಕಾರಿಗಳು ಯಾವುದೇ ಬಲ ಪ್ರಯೋಗವನ್ನು ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ 100ಕ್ಕೂ ಹೆಚ್ಚು ಜನರನ್ನು ಬಂಧಿಸಿದ ನಂತರ ಹಾರ್ವರ್ಡ್ ಮತ್ತು ಯೇಲ್ ಸೇರಿದಂತೆ ಯುಎಸ್‌ನಾದ್ಯಂತದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ರಾಯಿಟರ್ಸ್ ಸುದ್ದಿ ಸಂಸ್ಥೆಯ ಲೆಕ್ಕಾಚಾರದ ಪ್ರಕಾರ, ಕಳೆದ ಒಂದು ವಾರದಲ್ಲಿ ಸುಮಾರು 550 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಗುರುವಾರವೊಂದರಲ್ಲೇ ಕನಿಷ್ಠ 61 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...