Homeಮುಖಪುಟಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

- Advertisement -
- Advertisement -

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

“ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ (ಅಂದರೆ, ಯಾವುದೇ ಹಣದ ಮೊತ್ತವು ಪೂರ್ಣ ಪರಿಹಾರವಾಗಲಾರದು, ಇದು ಬಹಳ ಗಂಭೀರ/ತಪ್ಪು ಕ್ರಮ). ಆದರೂ ಕೂಡ, ಸಾಂಕೇತಿಕವಾಗಿ ಆದಾರಿಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ ಪಾವತಿಸಬೇಕು” ಎಂದು ನ್ಯಾಯಾಲಯ ಆದೇಶಿಸಿರುವುದಾಗಿ ವರದಿ ಉಲ್ಲೇಖಿಸಿದೆ.

“ಎರಡೂ ರಿಟ್ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಮಾರ್ಚ್ 31,2016 ರಂದು ಅರ್ಜಿದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅದರ ಪರಿಣಾಮವಾಗಿ ಬಂದ ಯಾವುದೇ ಆದೇಶ ಅಥವಾ ಕಾರ್ಯವಿಧಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ. ಆದರೂ, ಪ್ರಕರಣವನ್ನು ಸಂಪೂರ್ಣವಾಗಿ ದಂಡವಿಲ್ಲದೆ ಬಿಡಲಾಗದು. ಹಾಗಾಗಿ, ಸಾಂಕೇತಿಕವಾಗಿ ಆದಾಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ (ಒಟ್ಟು 2 ಲಕ್ಷ ರೂ.) ಪಾವತಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ನೋಟಿಸ್‌ಗಳಿಗೆ ಅನುಸಾರವಾಗಿ ಪ್ರಾರಂಭಿಸಲಾದ ಎಲ್ಲಾ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ ಎಂದಿದೆ ಎಂದು ಬಾರ್‌ & ಬೆಂಚ್ ತಿಳಿಸಿದೆ.

ಈ ನೋಟಿಸ್‌ಗಳು ಮುಖ್ಯವಾಗಿ ಆರ್‌ಆರ್‌ಪಿಆರ್‌ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದ ಆರೋಪಗಳ ಮೇಲೆ ಆಧಾರಿತವಾಗಿದ್ದವು. ಇದರಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್‌) ಎಂಬ ಕಂಪನಿಯಿಂದ ಆರ್‌ಆರ್‌ಪಿಆರ್‌ಗೆ ಸುಮಾರು 403.85 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಲಾಗಿತ್ತು, ಮತ್ತು ಇದರೊಂದಿಗೆ ಎನ್‌ಡಿಟಿವಿಯ ಷೇರುಗಳ ಒತ್ತೆ, ಷೇರು ವರ್ಗಾವಣೆಗಳು ಮತ್ತು ಇತರ ಸಂಕೀರ್ಣ ವಹಿವಾಟುಗಳಿದ್ದವು. ಆದಾಯ ತೆರಿಗೆ ಇಲಾಖೆಯು ಇದನ್ನು ತೆರಿಗೆ ತಪ್ಪಿಸುವಿಕೆ ಅಥವಾ ಆದಾಯ ಮರೆಮಾಚುವಿಕೆ ಎಂದು ಆರೋಪಿಸಿ, 2009-10ರ ಅಸೆಸ್‌ಮೆಂಟ್ ಇಯರ್‌ಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನ ಮಾಡಲು ಪ್ರಯತ್ನಿಸಿತ್ತು.

ಒಂದು ವರ್ಷಕ್ಕೆ ಎರಡನೇ ಬಾರಿಗೆ ಮರುಮೌಲ್ಯ ಮಾಪನ ಎಂದು ವಾದಿಸಿ, ಆದಾಯ ತೆರಿಗೆ ನೋಟಿಸ್‌ಗಳ ವಿರುದ್ಧ ಪ್ರಣಯ್ ಮತ್ತು ರಾಧಿಕಾ ರಾಯ್ ನವೆಂಬರ್ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದಾಯ ಇಲಾಖೆಯು ಈ ಹಿಂದೆ ಜುಲೈ 2011ರಲ್ಲಿ ಮರು ಮೌಲ್ಯಮಾಪನ ಮಾಡಿತ್ತು. ಆ ಪ್ರಕ್ರಿಯೆಗಳಲ್ಲಿ ಅದೇ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಿತ್ತು ಮತ್ತು ಅದು ಮಾರ್ಚ್ 2013ರಲ್ಲಿ ಮರುಮೌಲ್ಯಮಾಪನ ಆದೇಶದೊಂದಿಗೆ ಮುಕ್ತಾಯಗೊಂಡಿತು ಎಂದು ಹೇಳಿದ್ದರು.

ಮೌಲ್ಯಮಾಪನ ಅಧಿಕಾರಿ ಹೇಳಿಂತೆ ಹಿಂದಿನ ಮರು-ಮೌಲ್ಯಮಾಪನ ಕೇವಲ ಸೀಮಿತ ವ್ಯಾಪ್ತಿಯದ್ದು ಎಂಬ ಅಭಿಪ್ರಾಯವನ್ನು ಅವರು ಪ್ರಶ್ನಿಸಿದ್ದರು. ಒಮ್ಮೆ ಮರುಮೌಲ್ಯಮಾಪನ ಪ್ರಾರಂಭವಾದ ನಂತರ, ಸಂಪೂರ್ಣ ಕಡಿಮೆ ಅಂದಾಜು ಮಾಡಲಾದ ಆದಾಯವನ್ನು ಪರಿಶೀಲಿಸಬಹುದು ಎಂದು ವಾದಿಸಿದ್ದರು. ಅದೇ ವಿಷಯವನ್ನು ಮತ್ತೆ ತೆರೆಯುವುದು ‘ಅಭಿಪ್ರಾಯದ ಬದಲಾವಣೆ’, ಇದು ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದರು.

ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಇದೇ ರೀತಿಯ ಮರುಮೌಲ್ಯಮಾಪನ ಪ್ರಕ್ರಿಯೆಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅಲ್ಲಿ ಅಂತಿಮ ಆದೇಶಗಳ ಮೇಲಿನ ತಡೆಯಾಜ್ಞೆ ಜಾರಿಯಲ್ಲಿದೆ. ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್‌ನ ಪ್ರತ್ಯೇಕ ಪೀಠವು ಆರ್‌ಆರ್‌ಪಿಆರ್‌ಗೆ ನೀಡಲಾದ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ಹೇಳಲಾಗಿತ್ತು.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪರ ವಕೀಲರಾದ ವಿಯುಷ್ಟಿ ರಾವತ್, ದೇವಾಂಶ್ ಜೈನ್ ಮತ್ತು ಸಾರ್ಥಕ್ ಅಬ್ರೋಲ್ ಅವರೊಂದಿಗೆ ಹಿರಿಯ ವಕೀಲ ಸಚಿತ್ ಜಾಲಿ ವಾದ ಮಂಡಿಸಿದ್ದರು.

ಆದಾಯ ತೆರಿಗೆ ಇಲಾಖೆಯನ್ನು ವಕೀಲರಾದ ಎನ್.ಪಿ. ಸಾಹ್ನಿ, ಇಂದ್ರಜ್ ಸಿಂಗ್ ರೈ, ಸಂಜೀವ್ ಮೆನನ್, ರಾಹುಲ್ ಸಿಂಗ್ ಮತ್ತು ಗೌರವ್ ಕುಮಾರ್ ಪ್ರತಿನಿಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...