Homeಮುಖಪುಟಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

- Advertisement -
- Advertisement -

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

“ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ (ಅಂದರೆ, ಯಾವುದೇ ಹಣದ ಮೊತ್ತವು ಪೂರ್ಣ ಪರಿಹಾರವಾಗಲಾರದು, ಇದು ಬಹಳ ಗಂಭೀರ/ತಪ್ಪು ಕ್ರಮ). ಆದರೂ ಕೂಡ, ಸಾಂಕೇತಿಕವಾಗಿ ಆದಾರಿಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ ಪಾವತಿಸಬೇಕು” ಎಂದು ನ್ಯಾಯಾಲಯ ಆದೇಶಿಸಿರುವುದಾಗಿ ವರದಿ ಉಲ್ಲೇಖಿಸಿದೆ.

“ಎರಡೂ ರಿಟ್ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಮಾರ್ಚ್ 31,2016 ರಂದು ಅರ್ಜಿದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅದರ ಪರಿಣಾಮವಾಗಿ ಬಂದ ಯಾವುದೇ ಆದೇಶ ಅಥವಾ ಕಾರ್ಯವಿಧಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ. ಆದರೂ, ಪ್ರಕರಣವನ್ನು ಸಂಪೂರ್ಣವಾಗಿ ದಂಡವಿಲ್ಲದೆ ಬಿಡಲಾಗದು. ಹಾಗಾಗಿ, ಸಾಂಕೇತಿಕವಾಗಿ ಆದಾಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ (ಒಟ್ಟು 2 ಲಕ್ಷ ರೂ.) ಪಾವತಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ನೋಟಿಸ್‌ಗಳಿಗೆ ಅನುಸಾರವಾಗಿ ಪ್ರಾರಂಭಿಸಲಾದ ಎಲ್ಲಾ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ ಎಂದಿದೆ ಎಂದು ಬಾರ್‌ & ಬೆಂಚ್ ತಿಳಿಸಿದೆ.

ಈ ನೋಟಿಸ್‌ಗಳು ಮುಖ್ಯವಾಗಿ ಆರ್‌ಆರ್‌ಪಿಆರ್‌ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದ ಆರೋಪಗಳ ಮೇಲೆ ಆಧಾರಿತವಾಗಿದ್ದವು. ಇದರಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್‌) ಎಂಬ ಕಂಪನಿಯಿಂದ ಆರ್‌ಆರ್‌ಪಿಆರ್‌ಗೆ ಸುಮಾರು 403.85 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಲಾಗಿತ್ತು, ಮತ್ತು ಇದರೊಂದಿಗೆ ಎನ್‌ಡಿಟಿವಿಯ ಷೇರುಗಳ ಒತ್ತೆ, ಷೇರು ವರ್ಗಾವಣೆಗಳು ಮತ್ತು ಇತರ ಸಂಕೀರ್ಣ ವಹಿವಾಟುಗಳಿದ್ದವು. ಆದಾಯ ತೆರಿಗೆ ಇಲಾಖೆಯು ಇದನ್ನು ತೆರಿಗೆ ತಪ್ಪಿಸುವಿಕೆ ಅಥವಾ ಆದಾಯ ಮರೆಮಾಚುವಿಕೆ ಎಂದು ಆರೋಪಿಸಿ, 2009-10ರ ಅಸೆಸ್‌ಮೆಂಟ್ ಇಯರ್‌ಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನ ಮಾಡಲು ಪ್ರಯತ್ನಿಸಿತ್ತು.

ಒಂದು ವರ್ಷಕ್ಕೆ ಎರಡನೇ ಬಾರಿಗೆ ಮರುಮೌಲ್ಯ ಮಾಪನ ಎಂದು ವಾದಿಸಿ, ಆದಾಯ ತೆರಿಗೆ ನೋಟಿಸ್‌ಗಳ ವಿರುದ್ಧ ಪ್ರಣಯ್ ಮತ್ತು ರಾಧಿಕಾ ರಾಯ್ ನವೆಂಬರ್ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದಾಯ ಇಲಾಖೆಯು ಈ ಹಿಂದೆ ಜುಲೈ 2011ರಲ್ಲಿ ಮರು ಮೌಲ್ಯಮಾಪನ ಮಾಡಿತ್ತು. ಆ ಪ್ರಕ್ರಿಯೆಗಳಲ್ಲಿ ಅದೇ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಿತ್ತು ಮತ್ತು ಅದು ಮಾರ್ಚ್ 2013ರಲ್ಲಿ ಮರುಮೌಲ್ಯಮಾಪನ ಆದೇಶದೊಂದಿಗೆ ಮುಕ್ತಾಯಗೊಂಡಿತು ಎಂದು ಹೇಳಿದ್ದರು.

ಮೌಲ್ಯಮಾಪನ ಅಧಿಕಾರಿ ಹೇಳಿಂತೆ ಹಿಂದಿನ ಮರು-ಮೌಲ್ಯಮಾಪನ ಕೇವಲ ಸೀಮಿತ ವ್ಯಾಪ್ತಿಯದ್ದು ಎಂಬ ಅಭಿಪ್ರಾಯವನ್ನು ಅವರು ಪ್ರಶ್ನಿಸಿದ್ದರು. ಒಮ್ಮೆ ಮರುಮೌಲ್ಯಮಾಪನ ಪ್ರಾರಂಭವಾದ ನಂತರ, ಸಂಪೂರ್ಣ ಕಡಿಮೆ ಅಂದಾಜು ಮಾಡಲಾದ ಆದಾಯವನ್ನು ಪರಿಶೀಲಿಸಬಹುದು ಎಂದು ವಾದಿಸಿದ್ದರು. ಅದೇ ವಿಷಯವನ್ನು ಮತ್ತೆ ತೆರೆಯುವುದು ‘ಅಭಿಪ್ರಾಯದ ಬದಲಾವಣೆ’, ಇದು ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದರು.

ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಇದೇ ರೀತಿಯ ಮರುಮೌಲ್ಯಮಾಪನ ಪ್ರಕ್ರಿಯೆಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅಲ್ಲಿ ಅಂತಿಮ ಆದೇಶಗಳ ಮೇಲಿನ ತಡೆಯಾಜ್ಞೆ ಜಾರಿಯಲ್ಲಿದೆ. ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್‌ನ ಪ್ರತ್ಯೇಕ ಪೀಠವು ಆರ್‌ಆರ್‌ಪಿಆರ್‌ಗೆ ನೀಡಲಾದ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ಹೇಳಲಾಗಿತ್ತು.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪರ ವಕೀಲರಾದ ವಿಯುಷ್ಟಿ ರಾವತ್, ದೇವಾಂಶ್ ಜೈನ್ ಮತ್ತು ಸಾರ್ಥಕ್ ಅಬ್ರೋಲ್ ಅವರೊಂದಿಗೆ ಹಿರಿಯ ವಕೀಲ ಸಚಿತ್ ಜಾಲಿ ವಾದ ಮಂಡಿಸಿದ್ದರು.

ಆದಾಯ ತೆರಿಗೆ ಇಲಾಖೆಯನ್ನು ವಕೀಲರಾದ ಎನ್.ಪಿ. ಸಾಹ್ನಿ, ಇಂದ್ರಜ್ ಸಿಂಗ್ ರೈ, ಸಂಜೀವ್ ಮೆನನ್, ರಾಹುಲ್ ಸಿಂಗ್ ಮತ್ತು ಗೌರವ್ ಕುಮಾರ್ ಪ್ರತಿನಿಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...