Homeಮುಖಪುಟಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

- Advertisement -
- Advertisement -

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

“ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ (ಅಂದರೆ, ಯಾವುದೇ ಹಣದ ಮೊತ್ತವು ಪೂರ್ಣ ಪರಿಹಾರವಾಗಲಾರದು, ಇದು ಬಹಳ ಗಂಭೀರ/ತಪ್ಪು ಕ್ರಮ). ಆದರೂ ಕೂಡ, ಸಾಂಕೇತಿಕವಾಗಿ ಆದಾರಿಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ ಪಾವತಿಸಬೇಕು” ಎಂದು ನ್ಯಾಯಾಲಯ ಆದೇಶಿಸಿರುವುದಾಗಿ ವರದಿ ಉಲ್ಲೇಖಿಸಿದೆ.

“ಎರಡೂ ರಿಟ್ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಮಾರ್ಚ್ 31,2016 ರಂದು ಅರ್ಜಿದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅದರ ಪರಿಣಾಮವಾಗಿ ಬಂದ ಯಾವುದೇ ಆದೇಶ ಅಥವಾ ಕಾರ್ಯವಿಧಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ. ಆದರೂ, ಪ್ರಕರಣವನ್ನು ಸಂಪೂರ್ಣವಾಗಿ ದಂಡವಿಲ್ಲದೆ ಬಿಡಲಾಗದು. ಹಾಗಾಗಿ, ಸಾಂಕೇತಿಕವಾಗಿ ಆದಾಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ (ಒಟ್ಟು 2 ಲಕ್ಷ ರೂ.) ಪಾವತಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ನೋಟಿಸ್‌ಗಳಿಗೆ ಅನುಸಾರವಾಗಿ ಪ್ರಾರಂಭಿಸಲಾದ ಎಲ್ಲಾ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ ಎಂದಿದೆ ಎಂದು ಬಾರ್‌ & ಬೆಂಚ್ ತಿಳಿಸಿದೆ.

ಈ ನೋಟಿಸ್‌ಗಳು ಮುಖ್ಯವಾಗಿ ಆರ್‌ಆರ್‌ಪಿಆರ್‌ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದ ಆರೋಪಗಳ ಮೇಲೆ ಆಧಾರಿತವಾಗಿದ್ದವು. ಇದರಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್‌) ಎಂಬ ಕಂಪನಿಯಿಂದ ಆರ್‌ಆರ್‌ಪಿಆರ್‌ಗೆ ಸುಮಾರು 403.85 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಲಾಗಿತ್ತು, ಮತ್ತು ಇದರೊಂದಿಗೆ ಎನ್‌ಡಿಟಿವಿಯ ಷೇರುಗಳ ಒತ್ತೆ, ಷೇರು ವರ್ಗಾವಣೆಗಳು ಮತ್ತು ಇತರ ಸಂಕೀರ್ಣ ವಹಿವಾಟುಗಳಿದ್ದವು. ಆದಾಯ ತೆರಿಗೆ ಇಲಾಖೆಯು ಇದನ್ನು ತೆರಿಗೆ ತಪ್ಪಿಸುವಿಕೆ ಅಥವಾ ಆದಾಯ ಮರೆಮಾಚುವಿಕೆ ಎಂದು ಆರೋಪಿಸಿ, 2009-10ರ ಅಸೆಸ್‌ಮೆಂಟ್ ಇಯರ್‌ಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನ ಮಾಡಲು ಪ್ರಯತ್ನಿಸಿತ್ತು.

ಒಂದು ವರ್ಷಕ್ಕೆ ಎರಡನೇ ಬಾರಿಗೆ ಮರುಮೌಲ್ಯ ಮಾಪನ ಎಂದು ವಾದಿಸಿ, ಆದಾಯ ತೆರಿಗೆ ನೋಟಿಸ್‌ಗಳ ವಿರುದ್ಧ ಪ್ರಣಯ್ ಮತ್ತು ರಾಧಿಕಾ ರಾಯ್ ನವೆಂಬರ್ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದಾಯ ಇಲಾಖೆಯು ಈ ಹಿಂದೆ ಜುಲೈ 2011ರಲ್ಲಿ ಮರು ಮೌಲ್ಯಮಾಪನ ಮಾಡಿತ್ತು. ಆ ಪ್ರಕ್ರಿಯೆಗಳಲ್ಲಿ ಅದೇ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಿತ್ತು ಮತ್ತು ಅದು ಮಾರ್ಚ್ 2013ರಲ್ಲಿ ಮರುಮೌಲ್ಯಮಾಪನ ಆದೇಶದೊಂದಿಗೆ ಮುಕ್ತಾಯಗೊಂಡಿತು ಎಂದು ಹೇಳಿದ್ದರು.

ಮೌಲ್ಯಮಾಪನ ಅಧಿಕಾರಿ ಹೇಳಿಂತೆ ಹಿಂದಿನ ಮರು-ಮೌಲ್ಯಮಾಪನ ಕೇವಲ ಸೀಮಿತ ವ್ಯಾಪ್ತಿಯದ್ದು ಎಂಬ ಅಭಿಪ್ರಾಯವನ್ನು ಅವರು ಪ್ರಶ್ನಿಸಿದ್ದರು. ಒಮ್ಮೆ ಮರುಮೌಲ್ಯಮಾಪನ ಪ್ರಾರಂಭವಾದ ನಂತರ, ಸಂಪೂರ್ಣ ಕಡಿಮೆ ಅಂದಾಜು ಮಾಡಲಾದ ಆದಾಯವನ್ನು ಪರಿಶೀಲಿಸಬಹುದು ಎಂದು ವಾದಿಸಿದ್ದರು. ಅದೇ ವಿಷಯವನ್ನು ಮತ್ತೆ ತೆರೆಯುವುದು ‘ಅಭಿಪ್ರಾಯದ ಬದಲಾವಣೆ’, ಇದು ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದರು.

ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಇದೇ ರೀತಿಯ ಮರುಮೌಲ್ಯಮಾಪನ ಪ್ರಕ್ರಿಯೆಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅಲ್ಲಿ ಅಂತಿಮ ಆದೇಶಗಳ ಮೇಲಿನ ತಡೆಯಾಜ್ಞೆ ಜಾರಿಯಲ್ಲಿದೆ. ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್‌ನ ಪ್ರತ್ಯೇಕ ಪೀಠವು ಆರ್‌ಆರ್‌ಪಿಆರ್‌ಗೆ ನೀಡಲಾದ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ಹೇಳಲಾಗಿತ್ತು.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪರ ವಕೀಲರಾದ ವಿಯುಷ್ಟಿ ರಾವತ್, ದೇವಾಂಶ್ ಜೈನ್ ಮತ್ತು ಸಾರ್ಥಕ್ ಅಬ್ರೋಲ್ ಅವರೊಂದಿಗೆ ಹಿರಿಯ ವಕೀಲ ಸಚಿತ್ ಜಾಲಿ ವಾದ ಮಂಡಿಸಿದ್ದರು.

ಆದಾಯ ತೆರಿಗೆ ಇಲಾಖೆಯನ್ನು ವಕೀಲರಾದ ಎನ್.ಪಿ. ಸಾಹ್ನಿ, ಇಂದ್ರಜ್ ಸಿಂಗ್ ರೈ, ಸಂಜೀವ್ ಮೆನನ್, ರಾಹುಲ್ ಸಿಂಗ್ ಮತ್ತು ಗೌರವ್ ಕುಮಾರ್ ಪ್ರತಿನಿಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...