Homeಮುಖಪುಟಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

- Advertisement -
- Advertisement -

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

“ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ (ಅಂದರೆ, ಯಾವುದೇ ಹಣದ ಮೊತ್ತವು ಪೂರ್ಣ ಪರಿಹಾರವಾಗಲಾರದು, ಇದು ಬಹಳ ಗಂಭೀರ/ತಪ್ಪು ಕ್ರಮ). ಆದರೂ ಕೂಡ, ಸಾಂಕೇತಿಕವಾಗಿ ಆದಾರಿಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ ಪಾವತಿಸಬೇಕು” ಎಂದು ನ್ಯಾಯಾಲಯ ಆದೇಶಿಸಿರುವುದಾಗಿ ವರದಿ ಉಲ್ಲೇಖಿಸಿದೆ.

“ಎರಡೂ ರಿಟ್ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಮಾರ್ಚ್ 31,2016 ರಂದು ಅರ್ಜಿದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅದರ ಪರಿಣಾಮವಾಗಿ ಬಂದ ಯಾವುದೇ ಆದೇಶ ಅಥವಾ ಕಾರ್ಯವಿಧಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ. ಆದರೂ, ಪ್ರಕರಣವನ್ನು ಸಂಪೂರ್ಣವಾಗಿ ದಂಡವಿಲ್ಲದೆ ಬಿಡಲಾಗದು. ಹಾಗಾಗಿ, ಸಾಂಕೇತಿಕವಾಗಿ ಆದಾಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ (ಒಟ್ಟು 2 ಲಕ್ಷ ರೂ.) ಪಾವತಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ನೋಟಿಸ್‌ಗಳಿಗೆ ಅನುಸಾರವಾಗಿ ಪ್ರಾರಂಭಿಸಲಾದ ಎಲ್ಲಾ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ ಎಂದಿದೆ ಎಂದು ಬಾರ್‌ & ಬೆಂಚ್ ತಿಳಿಸಿದೆ.

ಈ ನೋಟಿಸ್‌ಗಳು ಮುಖ್ಯವಾಗಿ ಆರ್‌ಆರ್‌ಪಿಆರ್‌ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದ ಆರೋಪಗಳ ಮೇಲೆ ಆಧಾರಿತವಾಗಿದ್ದವು. ಇದರಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್‌) ಎಂಬ ಕಂಪನಿಯಿಂದ ಆರ್‌ಆರ್‌ಪಿಆರ್‌ಗೆ ಸುಮಾರು 403.85 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಲಾಗಿತ್ತು, ಮತ್ತು ಇದರೊಂದಿಗೆ ಎನ್‌ಡಿಟಿವಿಯ ಷೇರುಗಳ ಒತ್ತೆ, ಷೇರು ವರ್ಗಾವಣೆಗಳು ಮತ್ತು ಇತರ ಸಂಕೀರ್ಣ ವಹಿವಾಟುಗಳಿದ್ದವು. ಆದಾಯ ತೆರಿಗೆ ಇಲಾಖೆಯು ಇದನ್ನು ತೆರಿಗೆ ತಪ್ಪಿಸುವಿಕೆ ಅಥವಾ ಆದಾಯ ಮರೆಮಾಚುವಿಕೆ ಎಂದು ಆರೋಪಿಸಿ, 2009-10ರ ಅಸೆಸ್‌ಮೆಂಟ್ ಇಯರ್‌ಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನ ಮಾಡಲು ಪ್ರಯತ್ನಿಸಿತ್ತು.

ಒಂದು ವರ್ಷಕ್ಕೆ ಎರಡನೇ ಬಾರಿಗೆ ಮರುಮೌಲ್ಯ ಮಾಪನ ಎಂದು ವಾದಿಸಿ, ಆದಾಯ ತೆರಿಗೆ ನೋಟಿಸ್‌ಗಳ ವಿರುದ್ಧ ಪ್ರಣಯ್ ಮತ್ತು ರಾಧಿಕಾ ರಾಯ್ ನವೆಂಬರ್ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದಾಯ ಇಲಾಖೆಯು ಈ ಹಿಂದೆ ಜುಲೈ 2011ರಲ್ಲಿ ಮರು ಮೌಲ್ಯಮಾಪನ ಮಾಡಿತ್ತು. ಆ ಪ್ರಕ್ರಿಯೆಗಳಲ್ಲಿ ಅದೇ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಿತ್ತು ಮತ್ತು ಅದು ಮಾರ್ಚ್ 2013ರಲ್ಲಿ ಮರುಮೌಲ್ಯಮಾಪನ ಆದೇಶದೊಂದಿಗೆ ಮುಕ್ತಾಯಗೊಂಡಿತು ಎಂದು ಹೇಳಿದ್ದರು.

ಮೌಲ್ಯಮಾಪನ ಅಧಿಕಾರಿ ಹೇಳಿಂತೆ ಹಿಂದಿನ ಮರು-ಮೌಲ್ಯಮಾಪನ ಕೇವಲ ಸೀಮಿತ ವ್ಯಾಪ್ತಿಯದ್ದು ಎಂಬ ಅಭಿಪ್ರಾಯವನ್ನು ಅವರು ಪ್ರಶ್ನಿಸಿದ್ದರು. ಒಮ್ಮೆ ಮರುಮೌಲ್ಯಮಾಪನ ಪ್ರಾರಂಭವಾದ ನಂತರ, ಸಂಪೂರ್ಣ ಕಡಿಮೆ ಅಂದಾಜು ಮಾಡಲಾದ ಆದಾಯವನ್ನು ಪರಿಶೀಲಿಸಬಹುದು ಎಂದು ವಾದಿಸಿದ್ದರು. ಅದೇ ವಿಷಯವನ್ನು ಮತ್ತೆ ತೆರೆಯುವುದು ‘ಅಭಿಪ್ರಾಯದ ಬದಲಾವಣೆ’, ಇದು ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದರು.

ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಇದೇ ರೀತಿಯ ಮರುಮೌಲ್ಯಮಾಪನ ಪ್ರಕ್ರಿಯೆಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅಲ್ಲಿ ಅಂತಿಮ ಆದೇಶಗಳ ಮೇಲಿನ ತಡೆಯಾಜ್ಞೆ ಜಾರಿಯಲ್ಲಿದೆ. ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್‌ನ ಪ್ರತ್ಯೇಕ ಪೀಠವು ಆರ್‌ಆರ್‌ಪಿಆರ್‌ಗೆ ನೀಡಲಾದ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ಹೇಳಲಾಗಿತ್ತು.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪರ ವಕೀಲರಾದ ವಿಯುಷ್ಟಿ ರಾವತ್, ದೇವಾಂಶ್ ಜೈನ್ ಮತ್ತು ಸಾರ್ಥಕ್ ಅಬ್ರೋಲ್ ಅವರೊಂದಿಗೆ ಹಿರಿಯ ವಕೀಲ ಸಚಿತ್ ಜಾಲಿ ವಾದ ಮಂಡಿಸಿದ್ದರು.

ಆದಾಯ ತೆರಿಗೆ ಇಲಾಖೆಯನ್ನು ವಕೀಲರಾದ ಎನ್.ಪಿ. ಸಾಹ್ನಿ, ಇಂದ್ರಜ್ ಸಿಂಗ್ ರೈ, ಸಂಜೀವ್ ಮೆನನ್, ರಾಹುಲ್ ಸಿಂಗ್ ಮತ್ತು ಗೌರವ್ ಕುಮಾರ್ ಪ್ರತಿನಿಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...