Homeರಾಷ್ಟ್ರೀಯಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

ಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

- Advertisement -
- Advertisement -

ಎನ್‌ಡಿಟಿವಿಯ ಸುಮಾರು 65% ಶೇರುಗಳನ್ನು ಅದಾನಿ ಗ್ರೂಪ್ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ತಿಂಗಳೊಳಗೆ, ಎನ್‌ಡಿಟಿವಿ ಗ್ರೂಪ್‌ನ ಅಧ್ಯಕ್ಷೆ ಸುಪರ್ಣಾ ಸಿಂಗ್ ಸೇರಿದಂತೆ ಅದರ ಕೆಲವು ಹಿರಿಯ ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಬಿಎಸ್‌ಇ (ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್)ಗೆ ಎನ್‌ಡಿಟಿವಿ ಸಲ್ಲಿಸಿದ ವರದಿಯ ಪ್ರಕಾರ, ಎನ್‌ಡಿಟಿವಿಯ ಮುಖ್ಯ ಕಾರ್ಯತಂತ್ರ ಅಧಿಕಾರಿ ಅರಿಜಿತ್ ಚಟರ್ಜಿ ಮತ್ತು ಮುಖ್ಯ ತಂತ್ರಜ್ಞಾನ ಮತ್ತು ಉತ್ಪನ್ನ ಅಧಿಕಾರಿ ಕವಾಲ್‌ಜಿತ್ ಸಿಂಗ್ ಬೇಡಿ ಕೂಡ ಸಂಸ್ಥೆಗೆ ರಾಜೀನಾಮೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಮೂಲಕ ಇತ್ತೀಚಿನ ರಾಜೀನಾಮೆಗಳನ್ನು ಪ್ರಕಟಿಸಿದ ಎನ್‌ಡಿಟಿವಿ, “ಕಂಪನಿಯು ಹೊಸ ನಾಯಕತ್ವದ ತಂಡವನ್ನು ರಚಿಸುವ ಪ್ರಕ್ರಿಯೆಯಲ್ಲಿದೆ. ಅದು ಕಂಪನಿಗೆ ಹೊಸ ಕಾರ್ಯತಂತ್ರದ ನಿರ್ದೇಶನ ಮತ್ತು ಗುರಿಗಳನ್ನು ಹೊಂದಿಸುತ್ತದೆ” ಎಂದು ಹೇಳಿದೆ.

ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರು ನವೆಂಬರ್ 29 ರಂದು ಎನ್‌ಡಿಟಿವಿ ಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಮರುದಿನ, ನವೆಂಬರ್ 30 ರಂದು, ಎನ್‌ಡಿಟಿವಿಯ ಜನಪ್ರಿಯ ಮುಖ, ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಕೂಡ ರಾಜೀನಾಮೆ ನೀಡಿದ್ದರು.

ಡಿಸೆಂಬರ್ 23 ರಂದು, ಪ್ರಣಯ್ ಮ್ತು ರಾಧಿಕಾ ರಾಯ್‌ ಅವರು ಕಂಪನಿಯ 5% ರಷ್ಟನ್ನು ಶೇರುಗಳನ್ನು ಹೊರತುಪಡಿಸಿ ಉಳಿದ ಶೇರುಗಳನ್ನು ಅದಾನಿ ಗ್ರೂಪ್‌ಗೆ 647.6 ಕೋಟಿ ರೂ.ಗಳಿಗೆ ಮಾರಾಟ ಮಾಡುವುದಾಗಿ ಘೋಷಿಸಿದ್ದರು.

“ಭಾರತದಲ್ಲಿ ಪತ್ರಿಕೋದ್ಯಮವು ವಿಶ್ವ ದರ್ಜೆಯದ್ದಾಗಿದೆ ಆದರೆ ಅದು ಬೆಳೆಯಲು ಮತ್ತು ಬೆಳಗಲು ಅನುವು ಮಾಡಿಕೊಡುವ ಬಲವಾದ ಮತ್ತು ಪರಿಣಾಮಕಾರಿ ಪ್ರಸಾರ ವೇದಿಕೆಯ ಅಗತ್ಯವಿದೆ ಎಂಬ ನಂಬಿಕೆಯಲ್ಲಿ ನಾವು 1988 ರಲ್ಲಿ ಎನ್‌ಡಿಟಿವಿ ಅನ್ನು ಪ್ರಾರಂಭಿಸಿದ್ದೇವೆ. 34 ವರ್ಷಗಳ ನಂತರ, ಎನ್‌ಡಿಟಿವಿ ನಮ್ಮ ಹಲವಾರು ಆಶಯಗಳು ಮತ್ತು ಆದರ್ಶಗಳನ್ನು ಪೂರೈಸಿದ ಸಂಸ್ಥೆಯಾಗಿದೆ ಎಂದು ನಾವು ನಂಬುತ್ತೇವೆ”

“ಈ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ ಮತ್ತು ಕೃತಜ್ಞರಾಗಿರುತ್ತೇವೆ. ಜಗತ್ತಿನಾದ್ಯಂತ, ಎನ್‌ಡಿಟಿವಿ ಭಾರತ ಮತ್ತು ಏಷ್ಯಾದ ಅತ್ಯಂತ ವಿಶ್ವಾಸಾರ್ಹ ಸುದ್ದಿ ಪ್ರಸಾರಕ ಎಂದು ಗುರುತಿಸಲ್ಪಟ್ಟಿದೆ” ಎಂದು ಸಂಸ್ಥಾಪಕರು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...