Homeರಾಷ್ಟ್ರೀಯಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

ಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

- Advertisement -
- Advertisement -

ಎನ್‌ಡಿಟಿವಿಯ ಸುಮಾರು 65% ಶೇರುಗಳನ್ನು ಅದಾನಿ ಗ್ರೂಪ್ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ತಿಂಗಳೊಳಗೆ, ಎನ್‌ಡಿಟಿವಿ ಗ್ರೂಪ್‌ನ ಅಧ್ಯಕ್ಷೆ ಸುಪರ್ಣಾ ಸಿಂಗ್ ಸೇರಿದಂತೆ ಅದರ ಕೆಲವು ಹಿರಿಯ ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಬಿಎಸ್‌ಇ (ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್)ಗೆ ಎನ್‌ಡಿಟಿವಿ ಸಲ್ಲಿಸಿದ ವರದಿಯ ಪ್ರಕಾರ, ಎನ್‌ಡಿಟಿವಿಯ ಮುಖ್ಯ ಕಾರ್ಯತಂತ್ರ ಅಧಿಕಾರಿ ಅರಿಜಿತ್ ಚಟರ್ಜಿ ಮತ್ತು ಮುಖ್ಯ ತಂತ್ರಜ್ಞಾನ ಮತ್ತು ಉತ್ಪನ್ನ ಅಧಿಕಾರಿ ಕವಾಲ್‌ಜಿತ್ ಸಿಂಗ್ ಬೇಡಿ ಕೂಡ ಸಂಸ್ಥೆಗೆ ರಾಜೀನಾಮೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಮೂಲಕ ಇತ್ತೀಚಿನ ರಾಜೀನಾಮೆಗಳನ್ನು ಪ್ರಕಟಿಸಿದ ಎನ್‌ಡಿಟಿವಿ, “ಕಂಪನಿಯು ಹೊಸ ನಾಯಕತ್ವದ ತಂಡವನ್ನು ರಚಿಸುವ ಪ್ರಕ್ರಿಯೆಯಲ್ಲಿದೆ. ಅದು ಕಂಪನಿಗೆ ಹೊಸ ಕಾರ್ಯತಂತ್ರದ ನಿರ್ದೇಶನ ಮತ್ತು ಗುರಿಗಳನ್ನು ಹೊಂದಿಸುತ್ತದೆ” ಎಂದು ಹೇಳಿದೆ.

ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರು ನವೆಂಬರ್ 29 ರಂದು ಎನ್‌ಡಿಟಿವಿ ಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಮರುದಿನ, ನವೆಂಬರ್ 30 ರಂದು, ಎನ್‌ಡಿಟಿವಿಯ ಜನಪ್ರಿಯ ಮುಖ, ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಕೂಡ ರಾಜೀನಾಮೆ ನೀಡಿದ್ದರು.

ಡಿಸೆಂಬರ್ 23 ರಂದು, ಪ್ರಣಯ್ ಮ್ತು ರಾಧಿಕಾ ರಾಯ್‌ ಅವರು ಕಂಪನಿಯ 5% ರಷ್ಟನ್ನು ಶೇರುಗಳನ್ನು ಹೊರತುಪಡಿಸಿ ಉಳಿದ ಶೇರುಗಳನ್ನು ಅದಾನಿ ಗ್ರೂಪ್‌ಗೆ 647.6 ಕೋಟಿ ರೂ.ಗಳಿಗೆ ಮಾರಾಟ ಮಾಡುವುದಾಗಿ ಘೋಷಿಸಿದ್ದರು.

“ಭಾರತದಲ್ಲಿ ಪತ್ರಿಕೋದ್ಯಮವು ವಿಶ್ವ ದರ್ಜೆಯದ್ದಾಗಿದೆ ಆದರೆ ಅದು ಬೆಳೆಯಲು ಮತ್ತು ಬೆಳಗಲು ಅನುವು ಮಾಡಿಕೊಡುವ ಬಲವಾದ ಮತ್ತು ಪರಿಣಾಮಕಾರಿ ಪ್ರಸಾರ ವೇದಿಕೆಯ ಅಗತ್ಯವಿದೆ ಎಂಬ ನಂಬಿಕೆಯಲ್ಲಿ ನಾವು 1988 ರಲ್ಲಿ ಎನ್‌ಡಿಟಿವಿ ಅನ್ನು ಪ್ರಾರಂಭಿಸಿದ್ದೇವೆ. 34 ವರ್ಷಗಳ ನಂತರ, ಎನ್‌ಡಿಟಿವಿ ನಮ್ಮ ಹಲವಾರು ಆಶಯಗಳು ಮತ್ತು ಆದರ್ಶಗಳನ್ನು ಪೂರೈಸಿದ ಸಂಸ್ಥೆಯಾಗಿದೆ ಎಂದು ನಾವು ನಂಬುತ್ತೇವೆ”

“ಈ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ ಮತ್ತು ಕೃತಜ್ಞರಾಗಿರುತ್ತೇವೆ. ಜಗತ್ತಿನಾದ್ಯಂತ, ಎನ್‌ಡಿಟಿವಿ ಭಾರತ ಮತ್ತು ಏಷ್ಯಾದ ಅತ್ಯಂತ ವಿಶ್ವಾಸಾರ್ಹ ಸುದ್ದಿ ಪ್ರಸಾರಕ ಎಂದು ಗುರುತಿಸಲ್ಪಟ್ಟಿದೆ” ಎಂದು ಸಂಸ್ಥಾಪಕರು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...