Homeರಾಷ್ಟ್ರೀಯಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

ಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

- Advertisement -
- Advertisement -

ಎನ್‌ಡಿಟಿವಿಯ ಸುಮಾರು 65% ಶೇರುಗಳನ್ನು ಅದಾನಿ ಗ್ರೂಪ್ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ತಿಂಗಳೊಳಗೆ, ಎನ್‌ಡಿಟಿವಿ ಗ್ರೂಪ್‌ನ ಅಧ್ಯಕ್ಷೆ ಸುಪರ್ಣಾ ಸಿಂಗ್ ಸೇರಿದಂತೆ ಅದರ ಕೆಲವು ಹಿರಿಯ ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಬಿಎಸ್‌ಇ (ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್)ಗೆ ಎನ್‌ಡಿಟಿವಿ ಸಲ್ಲಿಸಿದ ವರದಿಯ ಪ್ರಕಾರ, ಎನ್‌ಡಿಟಿವಿಯ ಮುಖ್ಯ ಕಾರ್ಯತಂತ್ರ ಅಧಿಕಾರಿ ಅರಿಜಿತ್ ಚಟರ್ಜಿ ಮತ್ತು ಮುಖ್ಯ ತಂತ್ರಜ್ಞಾನ ಮತ್ತು ಉತ್ಪನ್ನ ಅಧಿಕಾರಿ ಕವಾಲ್‌ಜಿತ್ ಸಿಂಗ್ ಬೇಡಿ ಕೂಡ ಸಂಸ್ಥೆಗೆ ರಾಜೀನಾಮೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿಯ ಮೂಲಕ ಇತ್ತೀಚಿನ ರಾಜೀನಾಮೆಗಳನ್ನು ಪ್ರಕಟಿಸಿದ ಎನ್‌ಡಿಟಿವಿ, “ಕಂಪನಿಯು ಹೊಸ ನಾಯಕತ್ವದ ತಂಡವನ್ನು ರಚಿಸುವ ಪ್ರಕ್ರಿಯೆಯಲ್ಲಿದೆ. ಅದು ಕಂಪನಿಗೆ ಹೊಸ ಕಾರ್ಯತಂತ್ರದ ನಿರ್ದೇಶನ ಮತ್ತು ಗುರಿಗಳನ್ನು ಹೊಂದಿಸುತ್ತದೆ” ಎಂದು ಹೇಳಿದೆ.

ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರು ನವೆಂಬರ್ 29 ರಂದು ಎನ್‌ಡಿಟಿವಿ ಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಮರುದಿನ, ನವೆಂಬರ್ 30 ರಂದು, ಎನ್‌ಡಿಟಿವಿಯ ಜನಪ್ರಿಯ ಮುಖ, ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಕೂಡ ರಾಜೀನಾಮೆ ನೀಡಿದ್ದರು.

ಡಿಸೆಂಬರ್ 23 ರಂದು, ಪ್ರಣಯ್ ಮ್ತು ರಾಧಿಕಾ ರಾಯ್‌ ಅವರು ಕಂಪನಿಯ 5% ರಷ್ಟನ್ನು ಶೇರುಗಳನ್ನು ಹೊರತುಪಡಿಸಿ ಉಳಿದ ಶೇರುಗಳನ್ನು ಅದಾನಿ ಗ್ರೂಪ್‌ಗೆ 647.6 ಕೋಟಿ ರೂ.ಗಳಿಗೆ ಮಾರಾಟ ಮಾಡುವುದಾಗಿ ಘೋಷಿಸಿದ್ದರು.

“ಭಾರತದಲ್ಲಿ ಪತ್ರಿಕೋದ್ಯಮವು ವಿಶ್ವ ದರ್ಜೆಯದ್ದಾಗಿದೆ ಆದರೆ ಅದು ಬೆಳೆಯಲು ಮತ್ತು ಬೆಳಗಲು ಅನುವು ಮಾಡಿಕೊಡುವ ಬಲವಾದ ಮತ್ತು ಪರಿಣಾಮಕಾರಿ ಪ್ರಸಾರ ವೇದಿಕೆಯ ಅಗತ್ಯವಿದೆ ಎಂಬ ನಂಬಿಕೆಯಲ್ಲಿ ನಾವು 1988 ರಲ್ಲಿ ಎನ್‌ಡಿಟಿವಿ ಅನ್ನು ಪ್ರಾರಂಭಿಸಿದ್ದೇವೆ. 34 ವರ್ಷಗಳ ನಂತರ, ಎನ್‌ಡಿಟಿವಿ ನಮ್ಮ ಹಲವಾರು ಆಶಯಗಳು ಮತ್ತು ಆದರ್ಶಗಳನ್ನು ಪೂರೈಸಿದ ಸಂಸ್ಥೆಯಾಗಿದೆ ಎಂದು ನಾವು ನಂಬುತ್ತೇವೆ”

“ಈ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ ಮತ್ತು ಕೃತಜ್ಞರಾಗಿರುತ್ತೇವೆ. ಜಗತ್ತಿನಾದ್ಯಂತ, ಎನ್‌ಡಿಟಿವಿ ಭಾರತ ಮತ್ತು ಏಷ್ಯಾದ ಅತ್ಯಂತ ವಿಶ್ವಾಸಾರ್ಹ ಸುದ್ದಿ ಪ್ರಸಾರಕ ಎಂದು ಗುರುತಿಸಲ್ಪಟ್ಟಿದೆ” ಎಂದು ಸಂಸ್ಥಾಪಕರು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...