Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...