Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...