Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...