Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...