Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...