Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...