Homeಮುಖಪುಟಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

ಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

2020 ರ ಜೂನ್‌ ತಿಂಗಳಿನಲ್ಲಿ "ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಲು ಮುಂದುವರಿಯಲಿದ್ದೇನೆ” ಎಂದು ನಿಧಿ ಟ್ವೀಟ್‌ ಮಾಡಿದ್ದರು.

- Advertisement -
- Advertisement -

ಅಮೆರಿಕಾದ ಪ್ರತಿಷ್ಠಿತ ಹಾರ್ವರ್ಡ್‌ ವಿವಿಯಲ್ಲಿ ಸಹ ಪ್ರಾಧ್ಯಾಪಕಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಎನ್‌ʼಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ನಿಧಿ ರಾಜ್ದನ್‌ ಅವರನ್ನು ವಂಚಿಸಲಾಗಿದೆ. ಈ ವಿಷಯವನ್ನು ಸ್ವತಃ ನಿಧಿ ರಾಝ್ದಾನ್ ಅವರೇ ಟ್ವೀಟ್ ಮಾಡಿದ್ದಾರೆ.

2020 ರ ಜೂನ್‌ ತಿಂಗಳಿನಲ್ಲಿ “ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಾ ಮುಂದುವರಿಯಲಿದ್ದೇನೆ” ಎಂದು ಟ್ವೀಟ್‌ ಮಾಡಿದ್ದರು.

ಈಗ, “ನಾನು ಸೆಪ್ಟೆಂಬರ್‌ 2020ರ ವೇಳೆಗೆ ಹಾರ್ವರ್ಡ್‌ ವಿವಿಗೆ ಸೇರ್ಪಡೆಗೊಳ್ಳುತ್ತೇನೆ ಎಂದು ನಂಬಿದ್ದೆ. ಆದರೆ ಕೊರೊನಾ ಕಾರಣದಿಂದ ಅದು ಜನವರಿ 2021ಕ್ಕೆ ಮುಂದೂಡಲ್ಪಟ್ಟಿತ್ತು. ಆ ವೇಳೆ ಈ ಹೊಸ ಯೋಜನೆಯ ಕುರಿತು ತಯಾರಿ ನಡೆಸುತ್ತಿರುವಾಗ ಕೆಲವು ಆಡಳಿತಾತ್ಮಕ ವೈಪರೀತ್ಯಗಳನ್ನು ಗಮನಿಸಿದೆ. ಕೊರೊನಾ ಕಾರಣದಿಂದಾಗಿ ತಡವಾಗುತ್ತಿರಬಹುದೆಂದು ಅಂದಾಜಿಸಿದರೂ ಬಳಿಕ ಇದರ ಕುರಿತು ಅನುಮಾನಗಳು ಹೆಚ್ಚಾದವು. ನಂತರ ನಾನು ಹಾರ್ವರ್ಡ್‌ ವಿವಿಯ ಅಧಿಕೃತರನ್ನು ಸಂಪರ್ಕಿಸಿದೆ. ಈ ವೇಳೆ ಇದು ಮೋಸದ ಜಾಲ ಎಂದು ನನಗೆ ತಿಳಿದು ಬಂದಿದ್ದು, ಎಲ್ಲಾ ವಿಚಾರಗಳನ್ನೂ ಅವರಿಗೆ ವಿವರಿಸಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

“ವಂಚಕರು ನಂಬಲರ್ಹ ರೀತಿಯಲ್ಲಿ ಕುಶಲತೆಯಿಂದ ವ್ಯವಹರಿಸಿ ನನ್ನ ಹಲವಾರು ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ನನ್ನ ಲ್ಯಾಪ್ ಟಾಪ್‌, ಇಮೈಲ್‌ ಮತ್ತು ಮೊಬೈಲ್‌ಗಳಲ್ಲಿನ ಮಾಹಿತಿಗಳನ್ನೂ ಸಂಗ್ರಹಿಸಿದ್ದಾರೆ.  ಈ ಕುರಿತು ನಾನು ಪೊಲೀಸ್‌ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ಈ ಕುರಿತು ಸಮರ್ಪಕ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುತ್ತಾರೆಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ಈ ಕುರಿತು ನಿಧಿಯವರೇ ಟ್ವೀಟ್ ಮಾಡಿದ್ದಾರೆ. “ನಾನು ತುಂಬಾ ಗಂಭೀರವಾದ ವಂಚನೆಯ ಬಲಿಪಶುವಾಗಿದ್ದೇನೆ. ನನಗೆ ಏನಾಗಿದೆ ಎಂಬುದರ ಕುರಿತು ತಿಳಿಸಲು ದಾಖಲೆ ಸಮೇತ ಈ ಹೇಳಿಕೆಯನ್ನು ಹಂಚಿಕೊಳ್ಳುತ್ತಿದ್ದೇನೆ. ನಾನು ಈ ವಿಷಯವನ್ನು ಇನ್ನು ಮುಂದೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ…

ಮತ್ತೊಂದು ಟ್ವೀಟ್‌ನಲ್ಲಿ, “ನನ್ನನ್ನು ಬೆಂಬಲಿಸಲು ಅನೇಕ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ತಕ್ಷಣವೇ ಬರೆಯಲಾಗದಿರುವುದಕ್ಕೆ ಕ್ಷಮೆಯಾಚಿಸುತ್ತೇನೆ. ಸಾಮಾಜಿಕ ಮಾಧ್ಯಮಗಳಿಂದ ಕೆಲಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ. ಎಲ್ಲರೂ ಎಚ್ಚರಿಕೆಯಿಂದಿರಿ” ಎಂದು ಬರೆದುಕೊಂಡಿದ್ದಾರೆ.

 


ಇದನ್ನೂ ಓದಿ: ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...