Homeಮುಖಪುಟಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

ಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

2020 ರ ಜೂನ್‌ ತಿಂಗಳಿನಲ್ಲಿ "ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಲು ಮುಂದುವರಿಯಲಿದ್ದೇನೆ” ಎಂದು ನಿಧಿ ಟ್ವೀಟ್‌ ಮಾಡಿದ್ದರು.

- Advertisement -
- Advertisement -

ಅಮೆರಿಕಾದ ಪ್ರತಿಷ್ಠಿತ ಹಾರ್ವರ್ಡ್‌ ವಿವಿಯಲ್ಲಿ ಸಹ ಪ್ರಾಧ್ಯಾಪಕಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಎನ್‌ʼಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ನಿಧಿ ರಾಜ್ದನ್‌ ಅವರನ್ನು ವಂಚಿಸಲಾಗಿದೆ. ಈ ವಿಷಯವನ್ನು ಸ್ವತಃ ನಿಧಿ ರಾಝ್ದಾನ್ ಅವರೇ ಟ್ವೀಟ್ ಮಾಡಿದ್ದಾರೆ.

2020 ರ ಜೂನ್‌ ತಿಂಗಳಿನಲ್ಲಿ “ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಾ ಮುಂದುವರಿಯಲಿದ್ದೇನೆ” ಎಂದು ಟ್ವೀಟ್‌ ಮಾಡಿದ್ದರು.

ಈಗ, “ನಾನು ಸೆಪ್ಟೆಂಬರ್‌ 2020ರ ವೇಳೆಗೆ ಹಾರ್ವರ್ಡ್‌ ವಿವಿಗೆ ಸೇರ್ಪಡೆಗೊಳ್ಳುತ್ತೇನೆ ಎಂದು ನಂಬಿದ್ದೆ. ಆದರೆ ಕೊರೊನಾ ಕಾರಣದಿಂದ ಅದು ಜನವರಿ 2021ಕ್ಕೆ ಮುಂದೂಡಲ್ಪಟ್ಟಿತ್ತು. ಆ ವೇಳೆ ಈ ಹೊಸ ಯೋಜನೆಯ ಕುರಿತು ತಯಾರಿ ನಡೆಸುತ್ತಿರುವಾಗ ಕೆಲವು ಆಡಳಿತಾತ್ಮಕ ವೈಪರೀತ್ಯಗಳನ್ನು ಗಮನಿಸಿದೆ. ಕೊರೊನಾ ಕಾರಣದಿಂದಾಗಿ ತಡವಾಗುತ್ತಿರಬಹುದೆಂದು ಅಂದಾಜಿಸಿದರೂ ಬಳಿಕ ಇದರ ಕುರಿತು ಅನುಮಾನಗಳು ಹೆಚ್ಚಾದವು. ನಂತರ ನಾನು ಹಾರ್ವರ್ಡ್‌ ವಿವಿಯ ಅಧಿಕೃತರನ್ನು ಸಂಪರ್ಕಿಸಿದೆ. ಈ ವೇಳೆ ಇದು ಮೋಸದ ಜಾಲ ಎಂದು ನನಗೆ ತಿಳಿದು ಬಂದಿದ್ದು, ಎಲ್ಲಾ ವಿಚಾರಗಳನ್ನೂ ಅವರಿಗೆ ವಿವರಿಸಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

“ವಂಚಕರು ನಂಬಲರ್ಹ ರೀತಿಯಲ್ಲಿ ಕುಶಲತೆಯಿಂದ ವ್ಯವಹರಿಸಿ ನನ್ನ ಹಲವಾರು ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ನನ್ನ ಲ್ಯಾಪ್ ಟಾಪ್‌, ಇಮೈಲ್‌ ಮತ್ತು ಮೊಬೈಲ್‌ಗಳಲ್ಲಿನ ಮಾಹಿತಿಗಳನ್ನೂ ಸಂಗ್ರಹಿಸಿದ್ದಾರೆ.  ಈ ಕುರಿತು ನಾನು ಪೊಲೀಸ್‌ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ಈ ಕುರಿತು ಸಮರ್ಪಕ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುತ್ತಾರೆಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ಈ ಕುರಿತು ನಿಧಿಯವರೇ ಟ್ವೀಟ್ ಮಾಡಿದ್ದಾರೆ. “ನಾನು ತುಂಬಾ ಗಂಭೀರವಾದ ವಂಚನೆಯ ಬಲಿಪಶುವಾಗಿದ್ದೇನೆ. ನನಗೆ ಏನಾಗಿದೆ ಎಂಬುದರ ಕುರಿತು ತಿಳಿಸಲು ದಾಖಲೆ ಸಮೇತ ಈ ಹೇಳಿಕೆಯನ್ನು ಹಂಚಿಕೊಳ್ಳುತ್ತಿದ್ದೇನೆ. ನಾನು ಈ ವಿಷಯವನ್ನು ಇನ್ನು ಮುಂದೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ…

ಮತ್ತೊಂದು ಟ್ವೀಟ್‌ನಲ್ಲಿ, “ನನ್ನನ್ನು ಬೆಂಬಲಿಸಲು ಅನೇಕ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ತಕ್ಷಣವೇ ಬರೆಯಲಾಗದಿರುವುದಕ್ಕೆ ಕ್ಷಮೆಯಾಚಿಸುತ್ತೇನೆ. ಸಾಮಾಜಿಕ ಮಾಧ್ಯಮಗಳಿಂದ ಕೆಲಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ. ಎಲ್ಲರೂ ಎಚ್ಚರಿಕೆಯಿಂದಿರಿ” ಎಂದು ಬರೆದುಕೊಂಡಿದ್ದಾರೆ.

 


ಇದನ್ನೂ ಓದಿ: ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...