Homeಮುಖಪುಟಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

ಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

2020 ರ ಜೂನ್‌ ತಿಂಗಳಿನಲ್ಲಿ "ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಲು ಮುಂದುವರಿಯಲಿದ್ದೇನೆ” ಎಂದು ನಿಧಿ ಟ್ವೀಟ್‌ ಮಾಡಿದ್ದರು.

- Advertisement -
- Advertisement -

ಅಮೆರಿಕಾದ ಪ್ರತಿಷ್ಠಿತ ಹಾರ್ವರ್ಡ್‌ ವಿವಿಯಲ್ಲಿ ಸಹ ಪ್ರಾಧ್ಯಾಪಕಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಎನ್‌ʼಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ನಿಧಿ ರಾಜ್ದನ್‌ ಅವರನ್ನು ವಂಚಿಸಲಾಗಿದೆ. ಈ ವಿಷಯವನ್ನು ಸ್ವತಃ ನಿಧಿ ರಾಝ್ದಾನ್ ಅವರೇ ಟ್ವೀಟ್ ಮಾಡಿದ್ದಾರೆ.

2020 ರ ಜೂನ್‌ ತಿಂಗಳಿನಲ್ಲಿ “ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಾ ಮುಂದುವರಿಯಲಿದ್ದೇನೆ” ಎಂದು ಟ್ವೀಟ್‌ ಮಾಡಿದ್ದರು.

ಈಗ, “ನಾನು ಸೆಪ್ಟೆಂಬರ್‌ 2020ರ ವೇಳೆಗೆ ಹಾರ್ವರ್ಡ್‌ ವಿವಿಗೆ ಸೇರ್ಪಡೆಗೊಳ್ಳುತ್ತೇನೆ ಎಂದು ನಂಬಿದ್ದೆ. ಆದರೆ ಕೊರೊನಾ ಕಾರಣದಿಂದ ಅದು ಜನವರಿ 2021ಕ್ಕೆ ಮುಂದೂಡಲ್ಪಟ್ಟಿತ್ತು. ಆ ವೇಳೆ ಈ ಹೊಸ ಯೋಜನೆಯ ಕುರಿತು ತಯಾರಿ ನಡೆಸುತ್ತಿರುವಾಗ ಕೆಲವು ಆಡಳಿತಾತ್ಮಕ ವೈಪರೀತ್ಯಗಳನ್ನು ಗಮನಿಸಿದೆ. ಕೊರೊನಾ ಕಾರಣದಿಂದಾಗಿ ತಡವಾಗುತ್ತಿರಬಹುದೆಂದು ಅಂದಾಜಿಸಿದರೂ ಬಳಿಕ ಇದರ ಕುರಿತು ಅನುಮಾನಗಳು ಹೆಚ್ಚಾದವು. ನಂತರ ನಾನು ಹಾರ್ವರ್ಡ್‌ ವಿವಿಯ ಅಧಿಕೃತರನ್ನು ಸಂಪರ್ಕಿಸಿದೆ. ಈ ವೇಳೆ ಇದು ಮೋಸದ ಜಾಲ ಎಂದು ನನಗೆ ತಿಳಿದು ಬಂದಿದ್ದು, ಎಲ್ಲಾ ವಿಚಾರಗಳನ್ನೂ ಅವರಿಗೆ ವಿವರಿಸಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

“ವಂಚಕರು ನಂಬಲರ್ಹ ರೀತಿಯಲ್ಲಿ ಕುಶಲತೆಯಿಂದ ವ್ಯವಹರಿಸಿ ನನ್ನ ಹಲವಾರು ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ನನ್ನ ಲ್ಯಾಪ್ ಟಾಪ್‌, ಇಮೈಲ್‌ ಮತ್ತು ಮೊಬೈಲ್‌ಗಳಲ್ಲಿನ ಮಾಹಿತಿಗಳನ್ನೂ ಸಂಗ್ರಹಿಸಿದ್ದಾರೆ.  ಈ ಕುರಿತು ನಾನು ಪೊಲೀಸ್‌ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ಈ ಕುರಿತು ಸಮರ್ಪಕ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುತ್ತಾರೆಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ಈ ಕುರಿತು ನಿಧಿಯವರೇ ಟ್ವೀಟ್ ಮಾಡಿದ್ದಾರೆ. “ನಾನು ತುಂಬಾ ಗಂಭೀರವಾದ ವಂಚನೆಯ ಬಲಿಪಶುವಾಗಿದ್ದೇನೆ. ನನಗೆ ಏನಾಗಿದೆ ಎಂಬುದರ ಕುರಿತು ತಿಳಿಸಲು ದಾಖಲೆ ಸಮೇತ ಈ ಹೇಳಿಕೆಯನ್ನು ಹಂಚಿಕೊಳ್ಳುತ್ತಿದ್ದೇನೆ. ನಾನು ಈ ವಿಷಯವನ್ನು ಇನ್ನು ಮುಂದೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ…

ಮತ್ತೊಂದು ಟ್ವೀಟ್‌ನಲ್ಲಿ, “ನನ್ನನ್ನು ಬೆಂಬಲಿಸಲು ಅನೇಕ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ತಕ್ಷಣವೇ ಬರೆಯಲಾಗದಿರುವುದಕ್ಕೆ ಕ್ಷಮೆಯಾಚಿಸುತ್ತೇನೆ. ಸಾಮಾಜಿಕ ಮಾಧ್ಯಮಗಳಿಂದ ಕೆಲಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ. ಎಲ್ಲರೂ ಎಚ್ಚರಿಕೆಯಿಂದಿರಿ” ಎಂದು ಬರೆದುಕೊಂಡಿದ್ದಾರೆ.

 


ಇದನ್ನೂ ಓದಿ: ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...