Homeಮುಖಪುಟಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

ಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

2020 ರ ಜೂನ್‌ ತಿಂಗಳಿನಲ್ಲಿ "ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಲು ಮುಂದುವರಿಯಲಿದ್ದೇನೆ” ಎಂದು ನಿಧಿ ಟ್ವೀಟ್‌ ಮಾಡಿದ್ದರು.

- Advertisement -
- Advertisement -

ಅಮೆರಿಕಾದ ಪ್ರತಿಷ್ಠಿತ ಹಾರ್ವರ್ಡ್‌ ವಿವಿಯಲ್ಲಿ ಸಹ ಪ್ರಾಧ್ಯಾಪಕಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಎನ್‌ʼಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ನಿಧಿ ರಾಜ್ದನ್‌ ಅವರನ್ನು ವಂಚಿಸಲಾಗಿದೆ. ಈ ವಿಷಯವನ್ನು ಸ್ವತಃ ನಿಧಿ ರಾಝ್ದಾನ್ ಅವರೇ ಟ್ವೀಟ್ ಮಾಡಿದ್ದಾರೆ.

2020 ರ ಜೂನ್‌ ತಿಂಗಳಿನಲ್ಲಿ “ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಾ ಮುಂದುವರಿಯಲಿದ್ದೇನೆ” ಎಂದು ಟ್ವೀಟ್‌ ಮಾಡಿದ್ದರು.

ಈಗ, “ನಾನು ಸೆಪ್ಟೆಂಬರ್‌ 2020ರ ವೇಳೆಗೆ ಹಾರ್ವರ್ಡ್‌ ವಿವಿಗೆ ಸೇರ್ಪಡೆಗೊಳ್ಳುತ್ತೇನೆ ಎಂದು ನಂಬಿದ್ದೆ. ಆದರೆ ಕೊರೊನಾ ಕಾರಣದಿಂದ ಅದು ಜನವರಿ 2021ಕ್ಕೆ ಮುಂದೂಡಲ್ಪಟ್ಟಿತ್ತು. ಆ ವೇಳೆ ಈ ಹೊಸ ಯೋಜನೆಯ ಕುರಿತು ತಯಾರಿ ನಡೆಸುತ್ತಿರುವಾಗ ಕೆಲವು ಆಡಳಿತಾತ್ಮಕ ವೈಪರೀತ್ಯಗಳನ್ನು ಗಮನಿಸಿದೆ. ಕೊರೊನಾ ಕಾರಣದಿಂದಾಗಿ ತಡವಾಗುತ್ತಿರಬಹುದೆಂದು ಅಂದಾಜಿಸಿದರೂ ಬಳಿಕ ಇದರ ಕುರಿತು ಅನುಮಾನಗಳು ಹೆಚ್ಚಾದವು. ನಂತರ ನಾನು ಹಾರ್ವರ್ಡ್‌ ವಿವಿಯ ಅಧಿಕೃತರನ್ನು ಸಂಪರ್ಕಿಸಿದೆ. ಈ ವೇಳೆ ಇದು ಮೋಸದ ಜಾಲ ಎಂದು ನನಗೆ ತಿಳಿದು ಬಂದಿದ್ದು, ಎಲ್ಲಾ ವಿಚಾರಗಳನ್ನೂ ಅವರಿಗೆ ವಿವರಿಸಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

“ವಂಚಕರು ನಂಬಲರ್ಹ ರೀತಿಯಲ್ಲಿ ಕುಶಲತೆಯಿಂದ ವ್ಯವಹರಿಸಿ ನನ್ನ ಹಲವಾರು ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ನನ್ನ ಲ್ಯಾಪ್ ಟಾಪ್‌, ಇಮೈಲ್‌ ಮತ್ತು ಮೊಬೈಲ್‌ಗಳಲ್ಲಿನ ಮಾಹಿತಿಗಳನ್ನೂ ಸಂಗ್ರಹಿಸಿದ್ದಾರೆ.  ಈ ಕುರಿತು ನಾನು ಪೊಲೀಸ್‌ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ಈ ಕುರಿತು ಸಮರ್ಪಕ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುತ್ತಾರೆಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ಈ ಕುರಿತು ನಿಧಿಯವರೇ ಟ್ವೀಟ್ ಮಾಡಿದ್ದಾರೆ. “ನಾನು ತುಂಬಾ ಗಂಭೀರವಾದ ವಂಚನೆಯ ಬಲಿಪಶುವಾಗಿದ್ದೇನೆ. ನನಗೆ ಏನಾಗಿದೆ ಎಂಬುದರ ಕುರಿತು ತಿಳಿಸಲು ದಾಖಲೆ ಸಮೇತ ಈ ಹೇಳಿಕೆಯನ್ನು ಹಂಚಿಕೊಳ್ಳುತ್ತಿದ್ದೇನೆ. ನಾನು ಈ ವಿಷಯವನ್ನು ಇನ್ನು ಮುಂದೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ…

ಮತ್ತೊಂದು ಟ್ವೀಟ್‌ನಲ್ಲಿ, “ನನ್ನನ್ನು ಬೆಂಬಲಿಸಲು ಅನೇಕ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ತಕ್ಷಣವೇ ಬರೆಯಲಾಗದಿರುವುದಕ್ಕೆ ಕ್ಷಮೆಯಾಚಿಸುತ್ತೇನೆ. ಸಾಮಾಜಿಕ ಮಾಧ್ಯಮಗಳಿಂದ ಕೆಲಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ. ಎಲ್ಲರೂ ಎಚ್ಚರಿಕೆಯಿಂದಿರಿ” ಎಂದು ಬರೆದುಕೊಂಡಿದ್ದಾರೆ.

 


ಇದನ್ನೂ ಓದಿ: ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...