Homeಮುಖಪುಟಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

ಹಾರ್ವರ್ಡ್‌ ವಿವಿಯಲ್ಲಿ ಕೆಲಸ ನೀಡುವುದಾಗಿ ವಂಚನೆ: ಎನ್‌ಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ಆರೋಪ

2020 ರ ಜೂನ್‌ ತಿಂಗಳಿನಲ್ಲಿ "ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಲು ಮುಂದುವರಿಯಲಿದ್ದೇನೆ” ಎಂದು ನಿಧಿ ಟ್ವೀಟ್‌ ಮಾಡಿದ್ದರು.

- Advertisement -
- Advertisement -

ಅಮೆರಿಕಾದ ಪ್ರತಿಷ್ಠಿತ ಹಾರ್ವರ್ಡ್‌ ವಿವಿಯಲ್ಲಿ ಸಹ ಪ್ರಾಧ್ಯಾಪಕಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಎನ್‌ʼಡಿಟಿವಿಯ ಹಿರಿಯ ಮಾಜಿ ಪತ್ರಕರ್ತೆ ನಿಧಿ ರಾಜ್ದನ್‌ ಅವರನ್ನು ವಂಚಿಸಲಾಗಿದೆ. ಈ ವಿಷಯವನ್ನು ಸ್ವತಃ ನಿಧಿ ರಾಝ್ದಾನ್ ಅವರೇ ಟ್ವೀಟ್ ಮಾಡಿದ್ದಾರೆ.

2020 ರ ಜೂನ್‌ ತಿಂಗಳಿನಲ್ಲಿ “ಎನ್‌ʼಡಿಟಿವಿಯಲ್ಲಿನ 21 ವರ್ಷಗಳ ಕಾಲ ದೀರ್ಘ ವೃತ್ತಿ ಜೀವನದ ಬಳಿಕ ನಾನು ಹಾರ್ವರ್ಡ್‌ ವಿವಿಯಲ್ಲಿ ಪತ್ರಿಕೋದ್ಯಮ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಾ ಮುಂದುವರಿಯಲಿದ್ದೇನೆ” ಎಂದು ಟ್ವೀಟ್‌ ಮಾಡಿದ್ದರು.

ಈಗ, “ನಾನು ಸೆಪ್ಟೆಂಬರ್‌ 2020ರ ವೇಳೆಗೆ ಹಾರ್ವರ್ಡ್‌ ವಿವಿಗೆ ಸೇರ್ಪಡೆಗೊಳ್ಳುತ್ತೇನೆ ಎಂದು ನಂಬಿದ್ದೆ. ಆದರೆ ಕೊರೊನಾ ಕಾರಣದಿಂದ ಅದು ಜನವರಿ 2021ಕ್ಕೆ ಮುಂದೂಡಲ್ಪಟ್ಟಿತ್ತು. ಆ ವೇಳೆ ಈ ಹೊಸ ಯೋಜನೆಯ ಕುರಿತು ತಯಾರಿ ನಡೆಸುತ್ತಿರುವಾಗ ಕೆಲವು ಆಡಳಿತಾತ್ಮಕ ವೈಪರೀತ್ಯಗಳನ್ನು ಗಮನಿಸಿದೆ. ಕೊರೊನಾ ಕಾರಣದಿಂದಾಗಿ ತಡವಾಗುತ್ತಿರಬಹುದೆಂದು ಅಂದಾಜಿಸಿದರೂ ಬಳಿಕ ಇದರ ಕುರಿತು ಅನುಮಾನಗಳು ಹೆಚ್ಚಾದವು. ನಂತರ ನಾನು ಹಾರ್ವರ್ಡ್‌ ವಿವಿಯ ಅಧಿಕೃತರನ್ನು ಸಂಪರ್ಕಿಸಿದೆ. ಈ ವೇಳೆ ಇದು ಮೋಸದ ಜಾಲ ಎಂದು ನನಗೆ ತಿಳಿದು ಬಂದಿದ್ದು, ಎಲ್ಲಾ ವಿಚಾರಗಳನ್ನೂ ಅವರಿಗೆ ವಿವರಿಸಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜನವರಿ 20ರಂದು ರಾಜಭವನ ಮುತ್ತಿಗೆ: ಕಾಂಗ್ರೆಸ್ ಮುಖಂಡ ಸುದರ್ಶನ್

“ವಂಚಕರು ನಂಬಲರ್ಹ ರೀತಿಯಲ್ಲಿ ಕುಶಲತೆಯಿಂದ ವ್ಯವಹರಿಸಿ ನನ್ನ ಹಲವಾರು ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ನನ್ನ ಲ್ಯಾಪ್ ಟಾಪ್‌, ಇಮೈಲ್‌ ಮತ್ತು ಮೊಬೈಲ್‌ಗಳಲ್ಲಿನ ಮಾಹಿತಿಗಳನ್ನೂ ಸಂಗ್ರಹಿಸಿದ್ದಾರೆ.  ಈ ಕುರಿತು ನಾನು ಪೊಲೀಸ್‌ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ಈ ಕುರಿತು ಸಮರ್ಪಕ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುತ್ತಾರೆಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ಈ ಕುರಿತು ನಿಧಿಯವರೇ ಟ್ವೀಟ್ ಮಾಡಿದ್ದಾರೆ. “ನಾನು ತುಂಬಾ ಗಂಭೀರವಾದ ವಂಚನೆಯ ಬಲಿಪಶುವಾಗಿದ್ದೇನೆ. ನನಗೆ ಏನಾಗಿದೆ ಎಂಬುದರ ಕುರಿತು ತಿಳಿಸಲು ದಾಖಲೆ ಸಮೇತ ಈ ಹೇಳಿಕೆಯನ್ನು ಹಂಚಿಕೊಳ್ಳುತ್ತಿದ್ದೇನೆ. ನಾನು ಈ ವಿಷಯವನ್ನು ಇನ್ನು ಮುಂದೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ…

ಮತ್ತೊಂದು ಟ್ವೀಟ್‌ನಲ್ಲಿ, “ನನ್ನನ್ನು ಬೆಂಬಲಿಸಲು ಅನೇಕ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ತಕ್ಷಣವೇ ಬರೆಯಲಾಗದಿರುವುದಕ್ಕೆ ಕ್ಷಮೆಯಾಚಿಸುತ್ತೇನೆ. ಸಾಮಾಜಿಕ ಮಾಧ್ಯಮಗಳಿಂದ ಕೆಲಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ. ಎಲ್ಲರೂ ಎಚ್ಚರಿಕೆಯಿಂದಿರಿ” ಎಂದು ಬರೆದುಕೊಂಡಿದ್ದಾರೆ.

 


ಇದನ್ನೂ ಓದಿ: ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...