Homeಮುಖಪುಟಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

ಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

- Advertisement -
- Advertisement -

ಪತ್ರಕರ್ತೆ ನಿಧಿ ರಾಝ್‌ದನ್ ಎನ್‌ಡಿಟಿವಿ ತೊರೆಯಲು ನಿರ್ಧರಿಸಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ.

‘ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ಪ್ರಶಸ್ತಿ’ ಪಡೆದ ಪತ್ರಕರ್ತೆ ನಿಧಿ ರಾಝ್‌ದನ್ 21 ವರ್ಷಗಳ ಕಾಲ ಎನ್‌ಡಿಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ರಾಜಕೀಯ ಮತ್ತು ರಾಜಕೀಯೇತರ ಜಾಗತಿಕ ಸುದ್ದಿಗಳ ವರದಿಗಾರಿಕೆಯಲ್ಲಿ ಅನುಭವ ಹೊಂದಿದ್ದಾರೆ.

“ನಾನು ಎನ್‌ಡಿಟಿವಿಯಲ್ಲಿ 21 ವರ್ಷಗಳ ಅನುಭವದ ನಂತರ ನನ್ನ ವೃತ್ತಿಯ ದಿಕ್ಕನ್ನು ಬದಲಾಯಿಸಿ ಮುಂದುವರಿಯುತ್ತಿದ್ದೇನೆ. ಈ ವರ್ಷದ ನಂತರ ಹಾರ್ವರ್ಡ್ ವಿಶ್ವವಿದ್ಯಾಲಯದ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಪತ್ರಿಕೋದ್ಯಮವನ್ನು ಬೋಧಿಸುವ ಸಹಾಯಕ ಪ್ರಾಧ್ಯಾಪಕಳಾಗಿ ಹೊಸ ವೃತ್ತಿಯನ್ನು ಪ್ರಾರಂಭಿಸುತ್ತೇನೆ” ಎಂದು ನಿಧಿ ರಾಝ್‌ದನ್‌ ಹೇಳಿದ್ದಾರೆ.

“ಎನ್‌ಡಿಟಿವಿ ನನ್ನ ಮನೆಯಾಗಿದೆ. ಅದು ನನಗೆ ಎಲ್ಲವನ್ನೂ ಕಲಿಸಿದೆ. ನಾವು ಮಾಡುವ ಕೆಲಸ, ನಾವು ಒಳಗೊಳ್ಳುವ ಸುದ್ದಿಗಳು, ನಾವು ನಿಂತಿರುವ ಮೌಲ್ಯಗಳು, ಅದರಲ್ಲೂ ಎನ್‌ಡಿಟಿವಿಯ ವಸ್ತುನಿಷ್ಠತೆಯ ಬಗೆಗೆ ನಾನು ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಎಡ ಬಲ ಮತ್ತು ಮಧ್ಯದ ಆಯಾಮಗಳಲ್ಲಿ ವರದಿಯನ್ನು ಮಾಡಿದ್ದಾರೆ. ಪ್ಯಾನಲ್ ಚರ್ಚೆಗಳನ್ನು ನಡೆಸಿರುವ ಇವರು, ಜಮ್ಮು ಕಾಶ್ಮೀರದಲ್ಲಿನ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ಮಾಡಿದ ವರದಿಗಾರಿಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತೀಯ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ “ನಮ್ಮಲ್ಲಿ ಪತ್ರಕರ್ತರಾಗಿ ನಮ್ಮ ಕೆಲಸ ಮಾಡುವವರನ್ನು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ದುಃಖದ ಸಂಗತಿಯೆಂದರೆ, ಕೆಲವೇ ಕೆಲವರು ಸತ್ಯವನ್ನು ಮಾತನಾಡಲು ಸಿದ್ಧರಿದ್ದಾರೆ. ಉಳಿದಂತೆ ಪ್ರಭುತ್ವವನ್ನು ಪ್ರಶ್ನೆ ಮಾಡುವುದನ್ನು ಮಾಧ್ಯಮಗಳು ಮರೆತಿವೆ. ಬದಲಾಗಿ, ಸರ್ಕಾರದ ಕರಪತ್ರಗಳನ್ನು ಪುನರುತ್ಪಾದಿಸಲು ಮತ್ತು ಅದನ್ನು ಸುದ್ದಿಯಾಗಿ ರವಾನಿಸಲು ಆದ್ಯತೆ ನೀಡುತ್ತಿವೆ” ಎಂದು ನಿಧಿ ಹೇಳಿದ್ದರು.

ಎಡ, ಬಲ ಮತ್ತು ಮಧ್ಯಮ ಪಂಥೀಯ ವಾದಕ್ಕೆ ಸಂಬಂಧಿಸಿದ ಜುಲೈ 2017 ರಲ್ಲಿ ಪ್ರಕಟವಾದ ‘ದಿ ಐಡಿಯಾ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಸಹ ಇವರು ಬರೆದಿದ್ದಾರೆ. ಈಜಿಪ್ಟಿನ ಕ್ರಾಂತಿ ಮತ್ತು ಇನ್ನೂ ಅನೇಕ ಪ್ರಮುಖ ವರದಿ ಮಾಡಿದವರಲ್ಲಿ ಭಾರತದ ನಿಧಿ ರಾಝ್‌ದನ್‌ ಮುಂಚೂಣಿಯಲ್ಲಿದ್ದರು.


ಓದಿ: ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...