Homeಮುಖಪುಟಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

ಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

- Advertisement -
- Advertisement -

ಪತ್ರಕರ್ತೆ ನಿಧಿ ರಾಝ್‌ದನ್ ಎನ್‌ಡಿಟಿವಿ ತೊರೆಯಲು ನಿರ್ಧರಿಸಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ.

‘ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ಪ್ರಶಸ್ತಿ’ ಪಡೆದ ಪತ್ರಕರ್ತೆ ನಿಧಿ ರಾಝ್‌ದನ್ 21 ವರ್ಷಗಳ ಕಾಲ ಎನ್‌ಡಿಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ರಾಜಕೀಯ ಮತ್ತು ರಾಜಕೀಯೇತರ ಜಾಗತಿಕ ಸುದ್ದಿಗಳ ವರದಿಗಾರಿಕೆಯಲ್ಲಿ ಅನುಭವ ಹೊಂದಿದ್ದಾರೆ.

“ನಾನು ಎನ್‌ಡಿಟಿವಿಯಲ್ಲಿ 21 ವರ್ಷಗಳ ಅನುಭವದ ನಂತರ ನನ್ನ ವೃತ್ತಿಯ ದಿಕ್ಕನ್ನು ಬದಲಾಯಿಸಿ ಮುಂದುವರಿಯುತ್ತಿದ್ದೇನೆ. ಈ ವರ್ಷದ ನಂತರ ಹಾರ್ವರ್ಡ್ ವಿಶ್ವವಿದ್ಯಾಲಯದ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಪತ್ರಿಕೋದ್ಯಮವನ್ನು ಬೋಧಿಸುವ ಸಹಾಯಕ ಪ್ರಾಧ್ಯಾಪಕಳಾಗಿ ಹೊಸ ವೃತ್ತಿಯನ್ನು ಪ್ರಾರಂಭಿಸುತ್ತೇನೆ” ಎಂದು ನಿಧಿ ರಾಝ್‌ದನ್‌ ಹೇಳಿದ್ದಾರೆ.

“ಎನ್‌ಡಿಟಿವಿ ನನ್ನ ಮನೆಯಾಗಿದೆ. ಅದು ನನಗೆ ಎಲ್ಲವನ್ನೂ ಕಲಿಸಿದೆ. ನಾವು ಮಾಡುವ ಕೆಲಸ, ನಾವು ಒಳಗೊಳ್ಳುವ ಸುದ್ದಿಗಳು, ನಾವು ನಿಂತಿರುವ ಮೌಲ್ಯಗಳು, ಅದರಲ್ಲೂ ಎನ್‌ಡಿಟಿವಿಯ ವಸ್ತುನಿಷ್ಠತೆಯ ಬಗೆಗೆ ನಾನು ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಎಡ ಬಲ ಮತ್ತು ಮಧ್ಯದ ಆಯಾಮಗಳಲ್ಲಿ ವರದಿಯನ್ನು ಮಾಡಿದ್ದಾರೆ. ಪ್ಯಾನಲ್ ಚರ್ಚೆಗಳನ್ನು ನಡೆಸಿರುವ ಇವರು, ಜಮ್ಮು ಕಾಶ್ಮೀರದಲ್ಲಿನ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ಮಾಡಿದ ವರದಿಗಾರಿಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತೀಯ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ “ನಮ್ಮಲ್ಲಿ ಪತ್ರಕರ್ತರಾಗಿ ನಮ್ಮ ಕೆಲಸ ಮಾಡುವವರನ್ನು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ದುಃಖದ ಸಂಗತಿಯೆಂದರೆ, ಕೆಲವೇ ಕೆಲವರು ಸತ್ಯವನ್ನು ಮಾತನಾಡಲು ಸಿದ್ಧರಿದ್ದಾರೆ. ಉಳಿದಂತೆ ಪ್ರಭುತ್ವವನ್ನು ಪ್ರಶ್ನೆ ಮಾಡುವುದನ್ನು ಮಾಧ್ಯಮಗಳು ಮರೆತಿವೆ. ಬದಲಾಗಿ, ಸರ್ಕಾರದ ಕರಪತ್ರಗಳನ್ನು ಪುನರುತ್ಪಾದಿಸಲು ಮತ್ತು ಅದನ್ನು ಸುದ್ದಿಯಾಗಿ ರವಾನಿಸಲು ಆದ್ಯತೆ ನೀಡುತ್ತಿವೆ” ಎಂದು ನಿಧಿ ಹೇಳಿದ್ದರು.

ಎಡ, ಬಲ ಮತ್ತು ಮಧ್ಯಮ ಪಂಥೀಯ ವಾದಕ್ಕೆ ಸಂಬಂಧಿಸಿದ ಜುಲೈ 2017 ರಲ್ಲಿ ಪ್ರಕಟವಾದ ‘ದಿ ಐಡಿಯಾ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಸಹ ಇವರು ಬರೆದಿದ್ದಾರೆ. ಈಜಿಪ್ಟಿನ ಕ್ರಾಂತಿ ಮತ್ತು ಇನ್ನೂ ಅನೇಕ ಪ್ರಮುಖ ವರದಿ ಮಾಡಿದವರಲ್ಲಿ ಭಾರತದ ನಿಧಿ ರಾಝ್‌ದನ್‌ ಮುಂಚೂಣಿಯಲ್ಲಿದ್ದರು.


ಓದಿ: ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...