Homeಮುಖಪುಟಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

ಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

- Advertisement -
- Advertisement -

ಪತ್ರಕರ್ತೆ ನಿಧಿ ರಾಝ್‌ದನ್ ಎನ್‌ಡಿಟಿವಿ ತೊರೆಯಲು ನಿರ್ಧರಿಸಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ.

‘ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ಪ್ರಶಸ್ತಿ’ ಪಡೆದ ಪತ್ರಕರ್ತೆ ನಿಧಿ ರಾಝ್‌ದನ್ 21 ವರ್ಷಗಳ ಕಾಲ ಎನ್‌ಡಿಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ರಾಜಕೀಯ ಮತ್ತು ರಾಜಕೀಯೇತರ ಜಾಗತಿಕ ಸುದ್ದಿಗಳ ವರದಿಗಾರಿಕೆಯಲ್ಲಿ ಅನುಭವ ಹೊಂದಿದ್ದಾರೆ.

“ನಾನು ಎನ್‌ಡಿಟಿವಿಯಲ್ಲಿ 21 ವರ್ಷಗಳ ಅನುಭವದ ನಂತರ ನನ್ನ ವೃತ್ತಿಯ ದಿಕ್ಕನ್ನು ಬದಲಾಯಿಸಿ ಮುಂದುವರಿಯುತ್ತಿದ್ದೇನೆ. ಈ ವರ್ಷದ ನಂತರ ಹಾರ್ವರ್ಡ್ ವಿಶ್ವವಿದ್ಯಾಲಯದ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಪತ್ರಿಕೋದ್ಯಮವನ್ನು ಬೋಧಿಸುವ ಸಹಾಯಕ ಪ್ರಾಧ್ಯಾಪಕಳಾಗಿ ಹೊಸ ವೃತ್ತಿಯನ್ನು ಪ್ರಾರಂಭಿಸುತ್ತೇನೆ” ಎಂದು ನಿಧಿ ರಾಝ್‌ದನ್‌ ಹೇಳಿದ್ದಾರೆ.

“ಎನ್‌ಡಿಟಿವಿ ನನ್ನ ಮನೆಯಾಗಿದೆ. ಅದು ನನಗೆ ಎಲ್ಲವನ್ನೂ ಕಲಿಸಿದೆ. ನಾವು ಮಾಡುವ ಕೆಲಸ, ನಾವು ಒಳಗೊಳ್ಳುವ ಸುದ್ದಿಗಳು, ನಾವು ನಿಂತಿರುವ ಮೌಲ್ಯಗಳು, ಅದರಲ್ಲೂ ಎನ್‌ಡಿಟಿವಿಯ ವಸ್ತುನಿಷ್ಠತೆಯ ಬಗೆಗೆ ನಾನು ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಎಡ ಬಲ ಮತ್ತು ಮಧ್ಯದ ಆಯಾಮಗಳಲ್ಲಿ ವರದಿಯನ್ನು ಮಾಡಿದ್ದಾರೆ. ಪ್ಯಾನಲ್ ಚರ್ಚೆಗಳನ್ನು ನಡೆಸಿರುವ ಇವರು, ಜಮ್ಮು ಕಾಶ್ಮೀರದಲ್ಲಿನ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ಮಾಡಿದ ವರದಿಗಾರಿಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತೀಯ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ “ನಮ್ಮಲ್ಲಿ ಪತ್ರಕರ್ತರಾಗಿ ನಮ್ಮ ಕೆಲಸ ಮಾಡುವವರನ್ನು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ದುಃಖದ ಸಂಗತಿಯೆಂದರೆ, ಕೆಲವೇ ಕೆಲವರು ಸತ್ಯವನ್ನು ಮಾತನಾಡಲು ಸಿದ್ಧರಿದ್ದಾರೆ. ಉಳಿದಂತೆ ಪ್ರಭುತ್ವವನ್ನು ಪ್ರಶ್ನೆ ಮಾಡುವುದನ್ನು ಮಾಧ್ಯಮಗಳು ಮರೆತಿವೆ. ಬದಲಾಗಿ, ಸರ್ಕಾರದ ಕರಪತ್ರಗಳನ್ನು ಪುನರುತ್ಪಾದಿಸಲು ಮತ್ತು ಅದನ್ನು ಸುದ್ದಿಯಾಗಿ ರವಾನಿಸಲು ಆದ್ಯತೆ ನೀಡುತ್ತಿವೆ” ಎಂದು ನಿಧಿ ಹೇಳಿದ್ದರು.

ಎಡ, ಬಲ ಮತ್ತು ಮಧ್ಯಮ ಪಂಥೀಯ ವಾದಕ್ಕೆ ಸಂಬಂಧಿಸಿದ ಜುಲೈ 2017 ರಲ್ಲಿ ಪ್ರಕಟವಾದ ‘ದಿ ಐಡಿಯಾ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಸಹ ಇವರು ಬರೆದಿದ್ದಾರೆ. ಈಜಿಪ್ಟಿನ ಕ್ರಾಂತಿ ಮತ್ತು ಇನ್ನೂ ಅನೇಕ ಪ್ರಮುಖ ವರದಿ ಮಾಡಿದವರಲ್ಲಿ ಭಾರತದ ನಿಧಿ ರಾಝ್‌ದನ್‌ ಮುಂಚೂಣಿಯಲ್ಲಿದ್ದರು.


ಓದಿ: ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...