Homeಮುಖಪುಟಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

ಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

- Advertisement -
- Advertisement -

ಪತ್ರಕರ್ತೆ ನಿಧಿ ರಾಝ್‌ದನ್ ಎನ್‌ಡಿಟಿವಿ ತೊರೆಯಲು ನಿರ್ಧರಿಸಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ.

‘ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ಪ್ರಶಸ್ತಿ’ ಪಡೆದ ಪತ್ರಕರ್ತೆ ನಿಧಿ ರಾಝ್‌ದನ್ 21 ವರ್ಷಗಳ ಕಾಲ ಎನ್‌ಡಿಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ರಾಜಕೀಯ ಮತ್ತು ರಾಜಕೀಯೇತರ ಜಾಗತಿಕ ಸುದ್ದಿಗಳ ವರದಿಗಾರಿಕೆಯಲ್ಲಿ ಅನುಭವ ಹೊಂದಿದ್ದಾರೆ.

“ನಾನು ಎನ್‌ಡಿಟಿವಿಯಲ್ಲಿ 21 ವರ್ಷಗಳ ಅನುಭವದ ನಂತರ ನನ್ನ ವೃತ್ತಿಯ ದಿಕ್ಕನ್ನು ಬದಲಾಯಿಸಿ ಮುಂದುವರಿಯುತ್ತಿದ್ದೇನೆ. ಈ ವರ್ಷದ ನಂತರ ಹಾರ್ವರ್ಡ್ ವಿಶ್ವವಿದ್ಯಾಲಯದ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಪತ್ರಿಕೋದ್ಯಮವನ್ನು ಬೋಧಿಸುವ ಸಹಾಯಕ ಪ್ರಾಧ್ಯಾಪಕಳಾಗಿ ಹೊಸ ವೃತ್ತಿಯನ್ನು ಪ್ರಾರಂಭಿಸುತ್ತೇನೆ” ಎಂದು ನಿಧಿ ರಾಝ್‌ದನ್‌ ಹೇಳಿದ್ದಾರೆ.

“ಎನ್‌ಡಿಟಿವಿ ನನ್ನ ಮನೆಯಾಗಿದೆ. ಅದು ನನಗೆ ಎಲ್ಲವನ್ನೂ ಕಲಿಸಿದೆ. ನಾವು ಮಾಡುವ ಕೆಲಸ, ನಾವು ಒಳಗೊಳ್ಳುವ ಸುದ್ದಿಗಳು, ನಾವು ನಿಂತಿರುವ ಮೌಲ್ಯಗಳು, ಅದರಲ್ಲೂ ಎನ್‌ಡಿಟಿವಿಯ ವಸ್ತುನಿಷ್ಠತೆಯ ಬಗೆಗೆ ನಾನು ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಎಡ ಬಲ ಮತ್ತು ಮಧ್ಯದ ಆಯಾಮಗಳಲ್ಲಿ ವರದಿಯನ್ನು ಮಾಡಿದ್ದಾರೆ. ಪ್ಯಾನಲ್ ಚರ್ಚೆಗಳನ್ನು ನಡೆಸಿರುವ ಇವರು, ಜಮ್ಮು ಕಾಶ್ಮೀರದಲ್ಲಿನ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ಮಾಡಿದ ವರದಿಗಾರಿಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತೀಯ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ “ನಮ್ಮಲ್ಲಿ ಪತ್ರಕರ್ತರಾಗಿ ನಮ್ಮ ಕೆಲಸ ಮಾಡುವವರನ್ನು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ದುಃಖದ ಸಂಗತಿಯೆಂದರೆ, ಕೆಲವೇ ಕೆಲವರು ಸತ್ಯವನ್ನು ಮಾತನಾಡಲು ಸಿದ್ಧರಿದ್ದಾರೆ. ಉಳಿದಂತೆ ಪ್ರಭುತ್ವವನ್ನು ಪ್ರಶ್ನೆ ಮಾಡುವುದನ್ನು ಮಾಧ್ಯಮಗಳು ಮರೆತಿವೆ. ಬದಲಾಗಿ, ಸರ್ಕಾರದ ಕರಪತ್ರಗಳನ್ನು ಪುನರುತ್ಪಾದಿಸಲು ಮತ್ತು ಅದನ್ನು ಸುದ್ದಿಯಾಗಿ ರವಾನಿಸಲು ಆದ್ಯತೆ ನೀಡುತ್ತಿವೆ” ಎಂದು ನಿಧಿ ಹೇಳಿದ್ದರು.

ಎಡ, ಬಲ ಮತ್ತು ಮಧ್ಯಮ ಪಂಥೀಯ ವಾದಕ್ಕೆ ಸಂಬಂಧಿಸಿದ ಜುಲೈ 2017 ರಲ್ಲಿ ಪ್ರಕಟವಾದ ‘ದಿ ಐಡಿಯಾ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಸಹ ಇವರು ಬರೆದಿದ್ದಾರೆ. ಈಜಿಪ್ಟಿನ ಕ್ರಾಂತಿ ಮತ್ತು ಇನ್ನೂ ಅನೇಕ ಪ್ರಮುಖ ವರದಿ ಮಾಡಿದವರಲ್ಲಿ ಭಾರತದ ನಿಧಿ ರಾಝ್‌ದನ್‌ ಮುಂಚೂಣಿಯಲ್ಲಿದ್ದರು.


ಓದಿ: ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...