Homeಮುಖಪುಟಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

ಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

- Advertisement -
- Advertisement -

ಪತ್ರಕರ್ತೆ ನಿಧಿ ರಾಝ್‌ದನ್ ಎನ್‌ಡಿಟಿವಿ ತೊರೆಯಲು ನಿರ್ಧರಿಸಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ.

‘ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ಪ್ರಶಸ್ತಿ’ ಪಡೆದ ಪತ್ರಕರ್ತೆ ನಿಧಿ ರಾಝ್‌ದನ್ 21 ವರ್ಷಗಳ ಕಾಲ ಎನ್‌ಡಿಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ರಾಜಕೀಯ ಮತ್ತು ರಾಜಕೀಯೇತರ ಜಾಗತಿಕ ಸುದ್ದಿಗಳ ವರದಿಗಾರಿಕೆಯಲ್ಲಿ ಅನುಭವ ಹೊಂದಿದ್ದಾರೆ.

“ನಾನು ಎನ್‌ಡಿಟಿವಿಯಲ್ಲಿ 21 ವರ್ಷಗಳ ಅನುಭವದ ನಂತರ ನನ್ನ ವೃತ್ತಿಯ ದಿಕ್ಕನ್ನು ಬದಲಾಯಿಸಿ ಮುಂದುವರಿಯುತ್ತಿದ್ದೇನೆ. ಈ ವರ್ಷದ ನಂತರ ಹಾರ್ವರ್ಡ್ ವಿಶ್ವವಿದ್ಯಾಲಯದ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಪತ್ರಿಕೋದ್ಯಮವನ್ನು ಬೋಧಿಸುವ ಸಹಾಯಕ ಪ್ರಾಧ್ಯಾಪಕಳಾಗಿ ಹೊಸ ವೃತ್ತಿಯನ್ನು ಪ್ರಾರಂಭಿಸುತ್ತೇನೆ” ಎಂದು ನಿಧಿ ರಾಝ್‌ದನ್‌ ಹೇಳಿದ್ದಾರೆ.

“ಎನ್‌ಡಿಟಿವಿ ನನ್ನ ಮನೆಯಾಗಿದೆ. ಅದು ನನಗೆ ಎಲ್ಲವನ್ನೂ ಕಲಿಸಿದೆ. ನಾವು ಮಾಡುವ ಕೆಲಸ, ನಾವು ಒಳಗೊಳ್ಳುವ ಸುದ್ದಿಗಳು, ನಾವು ನಿಂತಿರುವ ಮೌಲ್ಯಗಳು, ಅದರಲ್ಲೂ ಎನ್‌ಡಿಟಿವಿಯ ವಸ್ತುನಿಷ್ಠತೆಯ ಬಗೆಗೆ ನಾನು ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಎಡ ಬಲ ಮತ್ತು ಮಧ್ಯದ ಆಯಾಮಗಳಲ್ಲಿ ವರದಿಯನ್ನು ಮಾಡಿದ್ದಾರೆ. ಪ್ಯಾನಲ್ ಚರ್ಚೆಗಳನ್ನು ನಡೆಸಿರುವ ಇವರು, ಜಮ್ಮು ಕಾಶ್ಮೀರದಲ್ಲಿನ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ಮಾಡಿದ ವರದಿಗಾರಿಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತೀಯ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ “ನಮ್ಮಲ್ಲಿ ಪತ್ರಕರ್ತರಾಗಿ ನಮ್ಮ ಕೆಲಸ ಮಾಡುವವರನ್ನು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ದುಃಖದ ಸಂಗತಿಯೆಂದರೆ, ಕೆಲವೇ ಕೆಲವರು ಸತ್ಯವನ್ನು ಮಾತನಾಡಲು ಸಿದ್ಧರಿದ್ದಾರೆ. ಉಳಿದಂತೆ ಪ್ರಭುತ್ವವನ್ನು ಪ್ರಶ್ನೆ ಮಾಡುವುದನ್ನು ಮಾಧ್ಯಮಗಳು ಮರೆತಿವೆ. ಬದಲಾಗಿ, ಸರ್ಕಾರದ ಕರಪತ್ರಗಳನ್ನು ಪುನರುತ್ಪಾದಿಸಲು ಮತ್ತು ಅದನ್ನು ಸುದ್ದಿಯಾಗಿ ರವಾನಿಸಲು ಆದ್ಯತೆ ನೀಡುತ್ತಿವೆ” ಎಂದು ನಿಧಿ ಹೇಳಿದ್ದರು.

ಎಡ, ಬಲ ಮತ್ತು ಮಧ್ಯಮ ಪಂಥೀಯ ವಾದಕ್ಕೆ ಸಂಬಂಧಿಸಿದ ಜುಲೈ 2017 ರಲ್ಲಿ ಪ್ರಕಟವಾದ ‘ದಿ ಐಡಿಯಾ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಸಹ ಇವರು ಬರೆದಿದ್ದಾರೆ. ಈಜಿಪ್ಟಿನ ಕ್ರಾಂತಿ ಮತ್ತು ಇನ್ನೂ ಅನೇಕ ಪ್ರಮುಖ ವರದಿ ಮಾಡಿದವರಲ್ಲಿ ಭಾರತದ ನಿಧಿ ರಾಝ್‌ದನ್‌ ಮುಂಚೂಣಿಯಲ್ಲಿದ್ದರು.


ಓದಿ: ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...