Homeಮುಖಪುಟಎನ್‌ಡಿಟಿವಿ ವಿಡಿಯೊ ಬಿಡುಗಡೆ: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳಿದೆಯೆ?

ಎನ್‌ಡಿಟಿವಿ ವಿಡಿಯೊ ಬಿಡುಗಡೆ: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳಿದೆಯೆ?

ತಾನಿನ್ನೂ ಶ್ರೀನಗರದಲ್ಲಿರುವ ತನ್ನ ಮನೆಯಲ್ಲಿ ಗೃಹಬಂಧನಲ್ಲಿದ್ದೇನೆ, ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಹೇಳಿದ್ದಾರೆ.

- Advertisement -
- Advertisement -

ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಝ್, ತಾನಿನ್ನೂ  ಶ್ರೀನಗರದಲ್ಲಿರುವ ತನ್ನ ಮನೆಯಲ್ಲಿ ಗೃಹಬಂಧನಲ್ಲಿದ್ದೇನೆ, ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಹೇಳಿದ್ದಾರೆ.

ಸೈಫುದ್ದೀನ್ ಸೋಝ್‌‌ರನ್ನು ಬಿಡುಗಡೆಗೊಳಿಸಬೇಕು ಎಂದು ಕೋರಿ ಅವರ ಪತ್ನಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೇಂದ್ರ ಸರ್ಕಾರ, ಸೈಫುದ್ದೀನ್ ಸೋಝ್ ಗೃಹಬಂಧನದಲ್ಲಿಲ್ಲ ಎಂದು ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿತ್ತು.

“ಸೈಫುದ್ದೀನ್ ಯಾವ ಪ್ರದೇಶಕ್ಕೆ ಬೇಕಾದರೂ ಹೋಗಬಹುದು. ಅವರಿಗೆ ಯಾವುದೇ ನಿರ್ಬಂಧಗಳಿಲ್ಲ. ಅವರನ್ನು ಬಂಧನದಲ್ಲಿರಿಸಿಲ್ಲ” ಎಂದು ಜಮ್ಮು ಕಾಶ್ಮೀರ ಗೃಹ ಇಲಾಖೆ ಹೇಳಿತ್ತು.

ಆದರೆ ಎನ್‌‌ಡಿಟಿವಿ ಸೈಫುದ್ದೀನ್‌ರನ್ನು ಮಾತನಾಡಿಸಲು ಅವರ ಮನೆಗೆ ತೆರಳಿದಾಗ ಅವರಿಗೆ ಮಾತನಾಡಲು ಅವಕಾಶ ನೀಡದ್ದರಿಂದ, ಮುಚ್ಚಿದ ಗೇಟಿನ ಒಳಗಿನಿಂದ ಎನ್‌ಡಿಟಿವಿಯೊಂದಿಗೆ ಅವರು ಮಾತನಾಡಿದ್ದಾರೆ.

“ನಾನು ಎಲ್ಲಿಗೆ ಬೇಕಾದರೂ ಹೋಗಲು ಅವಕಾಶವಿದೆ ಎಂದು ಆಡಳಿತವು ತಿಳಿಸಿದೆ. ಆದರೆ ಈ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ನಾನು ಹೊರಹೋಗಲು ಬಿಡುತ್ತಿಲ್ಲ. ಇದು ಪೊಲೀಸ್ ರಾಜ್ಯವಾಗಿದೆ” ಎಂದು ಅವರು ಹೇಳಿರುವುದನ್ನು ಎನ್‌ಡಿಟಿವಿ ಪ್ರಸಾರ ಮಾಡಿದೆ.


ಓದಿ: ಜಮ್ಮುಕಾಶ್ಮೀರ ಕೇಂದ್ರಾಡಳಿತವಾಗಿ ಇರುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಶಿವಸೇನೆಯನ್ನು ವಿಭಜಿಸಿ, ಇಲ್ಲವೇ ಬಂಧನ ಎದುರಿಸಿ ಎಂದು ಏಕನಾಥ್ ಶಿಂದೆಗೆ ಕೇಂದ್ರ ಸರ್ಕಾರ ಬೆದರಿಕೆ...

0
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಏಕನಾಥ್ ಶಿಂದೆ ಸಚಿವರಾಗಿದ್ದಾಗ, ಅವರನ್ನು ಬಂಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜಿಸಿತ್ತು ಎಂದು ಮಂಗಳವಾರ ಶಿವಸೇನೆ (ಯುಬಿಟಿ) ನಾಯಕ...