Homeಮುಖಪುಟರಾಹುಲ್‌ ಗಾಂಧಿಯನ್ನು ಆರಿಸಿ ಕೇರಳದ ಜನ ತಪ್ಪು ಮಾಡಿದಿರಿ.. - ರಾಮಚಂದ್ರ ಗುಹಾ

ರಾಹುಲ್‌ ಗಾಂಧಿಯನ್ನು ಆರಿಸಿ ಕೇರಳದ ಜನ ತಪ್ಪು ಮಾಡಿದಿರಿ.. – ರಾಮಚಂದ್ರ ಗುಹಾ

- Advertisement -
- Advertisement -

ಐದನೇ ತಲೆಮಾರಿನ ರಾಜವಂಶದ ರಾಹುಲ್ ಗಾಂಧಿಗೆ ಕಠಿಣ ಪರಿಶ್ರಮ ಮತ್ತು ಸ್ವ-ನಿರ್ಮಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತೀಯ ರಾಜಕೀಯದಲ್ಲಿ ಯಾವುದೇ ಅವಕಾಶವಿಲ್ಲ. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯನ್ನು ಸಂಸತ್ತಿಗೆ ಆಯ್ಕೆ ಮಾಡುವ ಮೂಲಕ ಕೇರಳವು ತಪ್ಪು ಕೆಲಸ ಮಾಡಿದೆ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಅವರು ಕೋಳಿಕೋಡ್‌‌ನಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ದೊಡ್ಡ ಮತ್ತು ಗೌರವಯುತ ಪಕ್ಷವಾಗಿದ್ದ ಕಾಂಗ್ರೆಸ್ ಅನ್ನು ಇಂದು “ಕರುಣಾಜನಕ ಕುಟುಂಬ ಸಂಸ್ಥೆ” ಗೆ ಇಳಿಸಿರುವುದು ಇಂದು ಭಾರತದಲ್ಲಿ ಹಿಂದುತ್ವ ಮತ್ತು ಜಿಂಗೊಯಿಸಂನ ಏರಿಕೆಗೆ ಒಂದು ಕಾರಣವಾಗಿದೆ ಎಂದು ಗುಹಾ ಹೇಳಿದ್ದಾರೆ.

“ವೈಯಕ್ತಿಕವಾಗಿ ರಾಹುಲ್ ಗಾಂಧಿ ವಿರುದ್ಧ ನನಗೆ ಆಕ್ಷೇಪಗಳಿಲ್ಲ. ಅವರು ಉತ್ತಮ ವ್ಯಕ್ತಿತ್ವ ಉಳ್ಳ, ಉತ್ತಮ ನಡತೆ ಹೊಂದಿದ್ದಾರೆ. ಆದರೆ ಯುವ ಭಾರತವು ಐದನೇ ತಲೆಮಾರಿನ ರಾಜವಂಶವನ್ನು ಬಯಸುವುದಿಲ್ಲ. 2024 ರಲ್ಲಿ ರಾಹುಲ್ ಗಾಂಧಿಯನ್ನು ಮರು ಆಯ್ಕೆ ಮಾಡುವ ತಪ್ಪನ್ನು ನೀವು ಮಲಯಾಳಿಗಳು ಮಾಡಿದರೆ, ಅದು ನರೇಂದ್ರ ಮೋದಿಗೆ ಅನುಕೂಲ ಮಾಡಿಕೊಟ್ಟಂತೆ ಎಂದು ಹೇಳಿದ್ದಾರೆ.

ಅವರು ಕೇರಳದಲ್ಲಿ ನಡೆಯುತ್ತಿರುವ ಕೇರಳ ಸಾಹಿತ್ಯ ಉತ್ಸವದ (ಕೆಎಲ್‌ಎಫ್) ಎರಡನೇ ದಿನದಂದು “ದೇಶಪ್ರೇಮ Vs ಜಿಂಗೊಯಿಸಂ” ವಿಷಯದ ಕುರಿತು ಭಾಷಣದಲ್ಲಿ ಈ ವಿಷಯ ಪ್ರಸ್ತಾಪ ಮಾಡಿದರು.

ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, “ಕೇರಳ, ನೀವು ಭಾರತಕ್ಕಾಗಿ ಅನೇಕ ಅದ್ಭುತ ಕಾರ್ಯಗಳನ್ನು ಮಾಡಿದ್ದೀರಿ, ಆದರೆ ನೀವು ಮಾಡಿದ ತಪ್ಪು ಕೆಲಸವೆಂದರೆ ರಾಹುಲ್ ಗಾಂಧಿಯನ್ನು ಸಂಸತ್ತಿಗೆ ಆಯ್ಕೆ ಮಾಡಿರುವುದು” ಎಂದಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶದ ತಮ್ಮ ಕುಟುಂಬ ಭದ್ರಕೋಟೆಯಾದ ಅಮೆಥಿ ಕ್ಷೇತ್ರದಿಂದ ಸೋತ ರಾಹು‌ಲ್‌ ಗಾಂಧಿ, ಕೇರಳದ ವಯನಾಡ್ ಸ್ಥಾನದಿಂದ ಗೆದ್ದಿದ್ದರು.

“ನರೇಂದ್ರ ಮೋದಿಗಿರುವ ದೊಡ್ಡ ಅನುಕೂಲವೆಂದರೆ ಅವರು ರಾಹುಲ್ ಗಾಂಧಿಯಂತೆ ಅಲ್ಲ. ಅವರು ಸ್ವಯಂ ನಿರ್ಮಿತರು. ತಮ್ಮನ್ನು ತಾವು ಅತಿದೊಡ್ಡದಾಗಿ ಪ್ರೊಜೆಕ್ಟ್‌ ಮಾಡಿಕೊಳ್ಳುತ್ತಾರೆ. ಅವರು 15 ವರ್ಷಗಳಿಂದ ರಾಜ್ಯವೊಂದನ್ನು ಆಳಿದ್ದಾರೆ. ಅವರಿಗೆ ಆಡಳಿತಾತ್ಮಕ ಅನುಭವವಿದೆ, ಅವರು ನಂಬಲಾಗದಷ್ಟು ಶ್ರಮಿಸುತ್ತಿದ್ದಾರೆ ಮತ್ತು ಅವರು ಯುರೋಪಿನಲ್ಲಿ ಎಂದಿಗೂ ರಜಾದಿನಗಳನ್ನು ತೆಗೆದುಕೊಳ್ಳುವುದಿಲ್ಲ. ನನ್ನನ್ನು ನಂಬಿರಿ ನಾನು ಈ ಎಲ್ಲವನ್ನೂ ಗಂಭೀರವಾಗಿ ಹೇಳುತ್ತಿದ್ದೇನೆ” ಎಂದು ಅವರು ಹೇಳಿದರು.

ಆದರೆ, ರಾಹುಲ್ ಗಾಂಧಿ “ಹೆಚ್ಚು ಬುದ್ಧಿವಂತ, ಹೆಚ್ಚು ಶ್ರಮಶೀಲ, ಯುರೋಪಿನಲ್ಲಿ ಎಂದಿಗೂ ರಜಾದಿನವನ್ನು ತೆಗೆದುಕೊಳ್ಳಲಿಲ್ಲ, ಐದನೇ ತಲೆಮಾರಿನ ರಾಜವಂಶದವನಾಗಿ ಅವನು ಇನ್ನೂ ಸ್ವಯಂ ನಿರ್ಮಿತ ವ್ಯಕ್ತಿಯ ವಿರುದ್ಧ ಅನಾನುಕೂಲಕ್ಕೆ ಒಳಗಾಗುತ್ತಿದ್ದಾನೆ” ಎಂದು ಗುಹಾ ಹೇಳಿದರು..

“ನೆಹರೂ ಅವರ ವಿಷಯದಲ್ಲಿ, ಇದು ಸತತ ಏಳು ತಲೆಮಾರುಗಳ ಪಾಪಗಳನ್ನು ನೆಹರೂ ಮೇಲೆ ಹಾಕಲಾಗುತ್ತದೆ. ಇಂದು ರಾಷ್ಟ್ರೀಯ ಚರ್ಚೆಯನ್ನು ನೋಡಿ. ನೆಹರೂ ಅವರನ್ನು ಏಕೆ ಪ್ರಚೋದಿಸಲಾಗುತ್ತದೆ? ಮೋದಿ ಯಾವಾಗಲೂ ನೆಹರೂನೆ ಕಾಶ್ಮೀರ ಮೇ ಯೆ ಕಿಯಾ ಎಂದು ಏಕೆ ಹೇಳುತ್ತಾರೆ, ಚೀನಾ ಮೇ ಯೆ ಕಿಯಾ, ಟ್ರಿಪಲ್ ತಲಾಖ್ ಮೇ ಯೆ ಕಿಯಾ … ಏಕೆಂದರೆ ರಾಹುಲ್ ಗಾಂಧಿ ಇದ್ದಾರೆ. ಈಗ ರಾಹುಲ್ ಗಾಂಧಿ ಕಣ್ಮರೆಯಾದರೆ, ಮೋದಿ ತಮ್ಮದೇ ನೀತಿಗಳ ಬಗ್ಗೆ ಮತ್ತು ಅವು ಏಕೆ ವಿಫಲವಾಗಿವೆ ಎಂಬುದರ ಬಗ್ಗೆ  ಮಾತನಾಡಬೇಕಾಗುತ್ತದೆ” ಎಂದು ಅವರು ಹೇಳಿದರು.

ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್, ಕಾದಂಬರಿಕಾರರಾದ ಬೆನ್ಯಾಮಿನ್, ನಮಿತಾ ಗೋಖಲೆ, ಚೇತನ್ ಭಗತ್ ಮತ್ತು ಪತ್ರಕರ್ತರಾದ ಕರಣ್ ಥಾಪರ್ ಮತ್ತು ರಾಜ್‌ದೀಪ್ ಸರ್ದೇಸಾಯಿ ಅವರು ನಾಲ್ಕು ದಿನಗಳ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...