Homeಕರೋನಾ ತಲ್ಲಣಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

- Advertisement -
- Advertisement -

ಕೊರೊನಾ ಜೊತೆ ಜೊತೆಗೆ ಆದ ಆರ್ಥಿಕ ಕುಸಿತದಿಂದಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ, ಕಳೆದೊಂದು ವರ್ಷದಲ್ಲಿ 2.67 ಲಕ್ಷ ಶಿಶುಗಳ ಸಾವಿಗೀಡಾಗಿದ್ದಾರೆ ಎಂದು ವಿಶ್ವ ಬ್ಯಾಂಕ್ ಸಂಶೋಧಕರು ಅಂದಾಜಿಸಿದ್ದಾರೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು ಭಾರತದಲ್ಲಿ ಸಂಭವಿಸಿದೆ ಸಂಶೋಧನೆಯು ತಿಳಿಸಿದೆ.

ಸಂಶೋಧಕರು 128 ದೇಶಗಳಲ್ಲಿ 2,67,208 ಅಧಿಕ ಶಿಶು ಸಾವುಗಳನ್ನು ಅಂದಾಜಿಸಿದ್ದಾರೆ. ಇದು 2020 ರಲ್ಲಿ ನಿರೀಕ್ಷಿತ ಒಟ್ಟು ಶಿಶು ಸಾವಿನ ಸಂಖ್ಯೆಯಲ್ಲಿ 6.8% ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ನಕಾರಾತ್ಮಕ ಆದಾಯದಿಂದಾಗಿ ಇದು ಸಂಭವಿಸಿದೆ ಎಂದು ವಿಶ್ವ ಬ್ಯಾಂಕ್ ಒತ್ತಿ ಹೇಳಿದೆ.

ಭಾರತದಲ್ಲಿ ಕೊರೊನಾ ಪತ್ತೆಯಾಗುವುದಕ್ಕಿಂಲೂ ಮೊದಲೇ ದೇಶದ ಆರ್ಥಿಕತೆಯೂ ಇಳಿಕೆಯ ಹಾದಿಯಲ್ಲೇ ಇದ್ದವು. ಇದರ ಜೊತೆಗೆ ಯಾವುದೇ ಮುನ್ಸೂಚನೆಯಿಲ್ಲದೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

ಇದನ್ನೂ ಓದಿ: ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

“ಕೊರೊನಾ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಕಡೆಗೆ ಪ್ರಯತ್ನಗಳು ಅತ್ಯುನ್ನತವಾಗಿದ್ದರೂ, ಜಾಗತಿಕ ಸಮುದಾಯವು ಸಾಮಾಜಿಕ ಸುರಕ್ಷತಾ ಜಾಲಗಳನ್ನು ಬಲಪಡಿಸಬೇಕು. ಅಗತ್ಯ ಆರೋಗ್ಯ ಸೇವೆಯ ನಿರಂತರತೆಯನ್ನು ಖಾತರಿಪಡಿಸಬೇಕು” ಎಂದು ಸಂಶೋಧಕರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಪ್ರಾರಂಭದ ಮೊದಲ ಆರು ತಿಂಗಳಲ್ಲಿ ಪ್ರಪಂಚವು 2.5 ಲಕ್ಷದಿಂದ 11.5 ಲಕ್ಷ ಚಿಕ್ಕ ಮಕ್ಕಳ ಸಾವುಗಳಾಗುತ್ತದೆ ಎಂದು ಊಹಿಸಲಾಗಿತ್ತು.

ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ವಿಶ್ಲೇಷಣೆಯು ಅಧಿಕ ಶಿಶು ಮರಣದ ಮೂರನೇ ಒಂದು ಭಾಗಕ್ಕಿಂತ ಹೆಚ್ಚು (99, 642) ಭಾರತದಲ್ಲಿ ಆಗಿದೆ ಎಂದು ಅಂದಾಜಿಸಿದೆ.

ಭಾರತವು ಹೆಚ್ಚಿನ ಸಂಖ್ಯೆಯ ವಾರ್ಷಿಕ ಜನನಗಳನ್ನು ಹೊಂದಿದೆ (2,42,38,000) ಹಾಗೂ ನಿರ್ದಿಷ್ಟವಾಗಿ ದೊಡ್ಡ ಯೋಜಿತ ಆರ್ಥಿಕ ಕೊರತೆ (17.3%)ಯನ್ನೂ ಎದುರಿಸಿದೆ ಎಂದು ಸಂಶೋಧನೆ ತಿಳಿಸಿದೆ.

“ಈ ಕಾರಣದಿಂದಾಗಿ, ದಕ್ಷಿಣ ಏಷ್ಯಾವು ಅತಿ ಹೆಚ್ಚು ಶಿಶು ಮರಣವನ್ನು ನಿರೀಕ್ಷಿಸಿದ ಪ್ರದೇಶವಾಗಿದೆ. ಆದರೂ ಎಂಟು ದೇಶಗಳು ಮಾತ್ರ ಈ ವಿಶ್ಲೇಷಣೆಯಲ್ಲಿ ಒಳಗೊಂಡಿವೆ” ಎಂದು ಸಂಶೋಧನಾ ಲೇಖನವು ತಿಳಿಸಿದೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...