Homeಕರೋನಾ ತಲ್ಲಣಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

- Advertisement -
- Advertisement -

ಕೊರೊನಾ ಜೊತೆ ಜೊತೆಗೆ ಆದ ಆರ್ಥಿಕ ಕುಸಿತದಿಂದಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ, ಕಳೆದೊಂದು ವರ್ಷದಲ್ಲಿ 2.67 ಲಕ್ಷ ಶಿಶುಗಳ ಸಾವಿಗೀಡಾಗಿದ್ದಾರೆ ಎಂದು ವಿಶ್ವ ಬ್ಯಾಂಕ್ ಸಂಶೋಧಕರು ಅಂದಾಜಿಸಿದ್ದಾರೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು ಭಾರತದಲ್ಲಿ ಸಂಭವಿಸಿದೆ ಸಂಶೋಧನೆಯು ತಿಳಿಸಿದೆ.

ಸಂಶೋಧಕರು 128 ದೇಶಗಳಲ್ಲಿ 2,67,208 ಅಧಿಕ ಶಿಶು ಸಾವುಗಳನ್ನು ಅಂದಾಜಿಸಿದ್ದಾರೆ. ಇದು 2020 ರಲ್ಲಿ ನಿರೀಕ್ಷಿತ ಒಟ್ಟು ಶಿಶು ಸಾವಿನ ಸಂಖ್ಯೆಯಲ್ಲಿ 6.8% ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ನಕಾರಾತ್ಮಕ ಆದಾಯದಿಂದಾಗಿ ಇದು ಸಂಭವಿಸಿದೆ ಎಂದು ವಿಶ್ವ ಬ್ಯಾಂಕ್ ಒತ್ತಿ ಹೇಳಿದೆ.

ಭಾರತದಲ್ಲಿ ಕೊರೊನಾ ಪತ್ತೆಯಾಗುವುದಕ್ಕಿಂಲೂ ಮೊದಲೇ ದೇಶದ ಆರ್ಥಿಕತೆಯೂ ಇಳಿಕೆಯ ಹಾದಿಯಲ್ಲೇ ಇದ್ದವು. ಇದರ ಜೊತೆಗೆ ಯಾವುದೇ ಮುನ್ಸೂಚನೆಯಿಲ್ಲದೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

ಇದನ್ನೂ ಓದಿ: ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

“ಕೊರೊನಾ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಕಡೆಗೆ ಪ್ರಯತ್ನಗಳು ಅತ್ಯುನ್ನತವಾಗಿದ್ದರೂ, ಜಾಗತಿಕ ಸಮುದಾಯವು ಸಾಮಾಜಿಕ ಸುರಕ್ಷತಾ ಜಾಲಗಳನ್ನು ಬಲಪಡಿಸಬೇಕು. ಅಗತ್ಯ ಆರೋಗ್ಯ ಸೇವೆಯ ನಿರಂತರತೆಯನ್ನು ಖಾತರಿಪಡಿಸಬೇಕು” ಎಂದು ಸಂಶೋಧಕರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಪ್ರಾರಂಭದ ಮೊದಲ ಆರು ತಿಂಗಳಲ್ಲಿ ಪ್ರಪಂಚವು 2.5 ಲಕ್ಷದಿಂದ 11.5 ಲಕ್ಷ ಚಿಕ್ಕ ಮಕ್ಕಳ ಸಾವುಗಳಾಗುತ್ತದೆ ಎಂದು ಊಹಿಸಲಾಗಿತ್ತು.

ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ವಿಶ್ಲೇಷಣೆಯು ಅಧಿಕ ಶಿಶು ಮರಣದ ಮೂರನೇ ಒಂದು ಭಾಗಕ್ಕಿಂತ ಹೆಚ್ಚು (99, 642) ಭಾರತದಲ್ಲಿ ಆಗಿದೆ ಎಂದು ಅಂದಾಜಿಸಿದೆ.

ಭಾರತವು ಹೆಚ್ಚಿನ ಸಂಖ್ಯೆಯ ವಾರ್ಷಿಕ ಜನನಗಳನ್ನು ಹೊಂದಿದೆ (2,42,38,000) ಹಾಗೂ ನಿರ್ದಿಷ್ಟವಾಗಿ ದೊಡ್ಡ ಯೋಜಿತ ಆರ್ಥಿಕ ಕೊರತೆ (17.3%)ಯನ್ನೂ ಎದುರಿಸಿದೆ ಎಂದು ಸಂಶೋಧನೆ ತಿಳಿಸಿದೆ.

“ಈ ಕಾರಣದಿಂದಾಗಿ, ದಕ್ಷಿಣ ಏಷ್ಯಾವು ಅತಿ ಹೆಚ್ಚು ಶಿಶು ಮರಣವನ್ನು ನಿರೀಕ್ಷಿಸಿದ ಪ್ರದೇಶವಾಗಿದೆ. ಆದರೂ ಎಂಟು ದೇಶಗಳು ಮಾತ್ರ ಈ ವಿಶ್ಲೇಷಣೆಯಲ್ಲಿ ಒಳಗೊಂಡಿವೆ” ಎಂದು ಸಂಶೋಧನಾ ಲೇಖನವು ತಿಳಿಸಿದೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...