Homeಕರೋನಾ ತಲ್ಲಣಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

- Advertisement -
- Advertisement -

ಕೊರೊನಾ ಜೊತೆ ಜೊತೆಗೆ ಆದ ಆರ್ಥಿಕ ಕುಸಿತದಿಂದಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ, ಕಳೆದೊಂದು ವರ್ಷದಲ್ಲಿ 2.67 ಲಕ್ಷ ಶಿಶುಗಳ ಸಾವಿಗೀಡಾಗಿದ್ದಾರೆ ಎಂದು ವಿಶ್ವ ಬ್ಯಾಂಕ್ ಸಂಶೋಧಕರು ಅಂದಾಜಿಸಿದ್ದಾರೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು ಭಾರತದಲ್ಲಿ ಸಂಭವಿಸಿದೆ ಸಂಶೋಧನೆಯು ತಿಳಿಸಿದೆ.

ಸಂಶೋಧಕರು 128 ದೇಶಗಳಲ್ಲಿ 2,67,208 ಅಧಿಕ ಶಿಶು ಸಾವುಗಳನ್ನು ಅಂದಾಜಿಸಿದ್ದಾರೆ. ಇದು 2020 ರಲ್ಲಿ ನಿರೀಕ್ಷಿತ ಒಟ್ಟು ಶಿಶು ಸಾವಿನ ಸಂಖ್ಯೆಯಲ್ಲಿ 6.8% ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ನಕಾರಾತ್ಮಕ ಆದಾಯದಿಂದಾಗಿ ಇದು ಸಂಭವಿಸಿದೆ ಎಂದು ವಿಶ್ವ ಬ್ಯಾಂಕ್ ಒತ್ತಿ ಹೇಳಿದೆ.

ಭಾರತದಲ್ಲಿ ಕೊರೊನಾ ಪತ್ತೆಯಾಗುವುದಕ್ಕಿಂಲೂ ಮೊದಲೇ ದೇಶದ ಆರ್ಥಿಕತೆಯೂ ಇಳಿಕೆಯ ಹಾದಿಯಲ್ಲೇ ಇದ್ದವು. ಇದರ ಜೊತೆಗೆ ಯಾವುದೇ ಮುನ್ಸೂಚನೆಯಿಲ್ಲದೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

ಇದನ್ನೂ ಓದಿ: ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

“ಕೊರೊನಾ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಕಡೆಗೆ ಪ್ರಯತ್ನಗಳು ಅತ್ಯುನ್ನತವಾಗಿದ್ದರೂ, ಜಾಗತಿಕ ಸಮುದಾಯವು ಸಾಮಾಜಿಕ ಸುರಕ್ಷತಾ ಜಾಲಗಳನ್ನು ಬಲಪಡಿಸಬೇಕು. ಅಗತ್ಯ ಆರೋಗ್ಯ ಸೇವೆಯ ನಿರಂತರತೆಯನ್ನು ಖಾತರಿಪಡಿಸಬೇಕು” ಎಂದು ಸಂಶೋಧಕರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಪ್ರಾರಂಭದ ಮೊದಲ ಆರು ತಿಂಗಳಲ್ಲಿ ಪ್ರಪಂಚವು 2.5 ಲಕ್ಷದಿಂದ 11.5 ಲಕ್ಷ ಚಿಕ್ಕ ಮಕ್ಕಳ ಸಾವುಗಳಾಗುತ್ತದೆ ಎಂದು ಊಹಿಸಲಾಗಿತ್ತು.

ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ವಿಶ್ಲೇಷಣೆಯು ಅಧಿಕ ಶಿಶು ಮರಣದ ಮೂರನೇ ಒಂದು ಭಾಗಕ್ಕಿಂತ ಹೆಚ್ಚು (99, 642) ಭಾರತದಲ್ಲಿ ಆಗಿದೆ ಎಂದು ಅಂದಾಜಿಸಿದೆ.

ಭಾರತವು ಹೆಚ್ಚಿನ ಸಂಖ್ಯೆಯ ವಾರ್ಷಿಕ ಜನನಗಳನ್ನು ಹೊಂದಿದೆ (2,42,38,000) ಹಾಗೂ ನಿರ್ದಿಷ್ಟವಾಗಿ ದೊಡ್ಡ ಯೋಜಿತ ಆರ್ಥಿಕ ಕೊರತೆ (17.3%)ಯನ್ನೂ ಎದುರಿಸಿದೆ ಎಂದು ಸಂಶೋಧನೆ ತಿಳಿಸಿದೆ.

“ಈ ಕಾರಣದಿಂದಾಗಿ, ದಕ್ಷಿಣ ಏಷ್ಯಾವು ಅತಿ ಹೆಚ್ಚು ಶಿಶು ಮರಣವನ್ನು ನಿರೀಕ್ಷಿಸಿದ ಪ್ರದೇಶವಾಗಿದೆ. ಆದರೂ ಎಂಟು ದೇಶಗಳು ಮಾತ್ರ ಈ ವಿಶ್ಲೇಷಣೆಯಲ್ಲಿ ಒಳಗೊಂಡಿವೆ” ಎಂದು ಸಂಶೋಧನಾ ಲೇಖನವು ತಿಳಿಸಿದೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...