Homeಕರೋನಾ ತಲ್ಲಣಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

- Advertisement -
- Advertisement -

ಕೊರೊನಾ ಜೊತೆ ಜೊತೆಗೆ ಆದ ಆರ್ಥಿಕ ಕುಸಿತದಿಂದಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ, ಕಳೆದೊಂದು ವರ್ಷದಲ್ಲಿ 2.67 ಲಕ್ಷ ಶಿಶುಗಳ ಸಾವಿಗೀಡಾಗಿದ್ದಾರೆ ಎಂದು ವಿಶ್ವ ಬ್ಯಾಂಕ್ ಸಂಶೋಧಕರು ಅಂದಾಜಿಸಿದ್ದಾರೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು ಭಾರತದಲ್ಲಿ ಸಂಭವಿಸಿದೆ ಸಂಶೋಧನೆಯು ತಿಳಿಸಿದೆ.

ಸಂಶೋಧಕರು 128 ದೇಶಗಳಲ್ಲಿ 2,67,208 ಅಧಿಕ ಶಿಶು ಸಾವುಗಳನ್ನು ಅಂದಾಜಿಸಿದ್ದಾರೆ. ಇದು 2020 ರಲ್ಲಿ ನಿರೀಕ್ಷಿತ ಒಟ್ಟು ಶಿಶು ಸಾವಿನ ಸಂಖ್ಯೆಯಲ್ಲಿ 6.8% ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ನಕಾರಾತ್ಮಕ ಆದಾಯದಿಂದಾಗಿ ಇದು ಸಂಭವಿಸಿದೆ ಎಂದು ವಿಶ್ವ ಬ್ಯಾಂಕ್ ಒತ್ತಿ ಹೇಳಿದೆ.

ಭಾರತದಲ್ಲಿ ಕೊರೊನಾ ಪತ್ತೆಯಾಗುವುದಕ್ಕಿಂಲೂ ಮೊದಲೇ ದೇಶದ ಆರ್ಥಿಕತೆಯೂ ಇಳಿಕೆಯ ಹಾದಿಯಲ್ಲೇ ಇದ್ದವು. ಇದರ ಜೊತೆಗೆ ಯಾವುದೇ ಮುನ್ಸೂಚನೆಯಿಲ್ಲದೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

ಇದನ್ನೂ ಓದಿ: ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

“ಕೊರೊನಾ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಕಡೆಗೆ ಪ್ರಯತ್ನಗಳು ಅತ್ಯುನ್ನತವಾಗಿದ್ದರೂ, ಜಾಗತಿಕ ಸಮುದಾಯವು ಸಾಮಾಜಿಕ ಸುರಕ್ಷತಾ ಜಾಲಗಳನ್ನು ಬಲಪಡಿಸಬೇಕು. ಅಗತ್ಯ ಆರೋಗ್ಯ ಸೇವೆಯ ನಿರಂತರತೆಯನ್ನು ಖಾತರಿಪಡಿಸಬೇಕು” ಎಂದು ಸಂಶೋಧಕರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಪ್ರಾರಂಭದ ಮೊದಲ ಆರು ತಿಂಗಳಲ್ಲಿ ಪ್ರಪಂಚವು 2.5 ಲಕ್ಷದಿಂದ 11.5 ಲಕ್ಷ ಚಿಕ್ಕ ಮಕ್ಕಳ ಸಾವುಗಳಾಗುತ್ತದೆ ಎಂದು ಊಹಿಸಲಾಗಿತ್ತು.

ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ವಿಶ್ಲೇಷಣೆಯು ಅಧಿಕ ಶಿಶು ಮರಣದ ಮೂರನೇ ಒಂದು ಭಾಗಕ್ಕಿಂತ ಹೆಚ್ಚು (99, 642) ಭಾರತದಲ್ಲಿ ಆಗಿದೆ ಎಂದು ಅಂದಾಜಿಸಿದೆ.

ಭಾರತವು ಹೆಚ್ಚಿನ ಸಂಖ್ಯೆಯ ವಾರ್ಷಿಕ ಜನನಗಳನ್ನು ಹೊಂದಿದೆ (2,42,38,000) ಹಾಗೂ ನಿರ್ದಿಷ್ಟವಾಗಿ ದೊಡ್ಡ ಯೋಜಿತ ಆರ್ಥಿಕ ಕೊರತೆ (17.3%)ಯನ್ನೂ ಎದುರಿಸಿದೆ ಎಂದು ಸಂಶೋಧನೆ ತಿಳಿಸಿದೆ.

“ಈ ಕಾರಣದಿಂದಾಗಿ, ದಕ್ಷಿಣ ಏಷ್ಯಾವು ಅತಿ ಹೆಚ್ಚು ಶಿಶು ಮರಣವನ್ನು ನಿರೀಕ್ಷಿಸಿದ ಪ್ರದೇಶವಾಗಿದೆ. ಆದರೂ ಎಂಟು ದೇಶಗಳು ಮಾತ್ರ ಈ ವಿಶ್ಲೇಷಣೆಯಲ್ಲಿ ಒಳಗೊಂಡಿವೆ” ಎಂದು ಸಂಶೋಧನಾ ಲೇಖನವು ತಿಳಿಸಿದೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...