Homeಮುಖಪುಟಸಂವಿಧಾನ ಬದಲಾವಣೆ ಕುರಿತು ಪ್ರಸ್ತಾಪಿಸಿದ ಮತ್ತೋರ್ವ ಬಿಜೆಪಿ ಸಂಸದ

ಸಂವಿಧಾನ ಬದಲಾವಣೆ ಕುರಿತು ಪ್ರಸ್ತಾಪಿಸಿದ ಮತ್ತೋರ್ವ ಬಿಜೆಪಿ ಸಂಸದ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ನಾಯಕರು ಸಂವಿಧಾನ ಬದಲಾವಣೆ ಕುರಿತು ಹೇಳಿಕೆಯನ್ನು ನೀಡುತ್ತಿದ್ದಾರೆ. ಈ ಹಿಂದೆ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಮತ್ತು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆಯನ್ನು ನೀಡಿದ್ದರು. ಇದು ಬಿಜೆಪಿಯ ನೈಜ ಉದ್ದೇಶ ಮತ್ತು ಬಿಜೆಪಿ ಆರೆಸ್ಸೆಸ್‌ನ ಅಂತರಾಳ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರತಿಪಕ್ಷಗಳ ನಾಯಕರು ಇದು ತೋರ್ಪಡೆಗೆ ಮಾತ್ರ, ಬಿಜೆಪಿಯ ನೈಜ ಉದ್ದೇಶ ಸಂವಿಧಾನ ಬದಲಾವಣೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುವುದು ಎಂದು ಟೀಕಿಸಿದ್ದರು.

ಇದೀಗ ಬಿಜೆಪಿಯ ಫೈಜಾಬಾದ್ ಸಂಸದ ಲಲ್ಲು ಸಿಂಗ್ ಅವರು ಸಂವಿಧಾನದ ಬದಲಾವಣೆಗೆ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ ಎಂದು ಹೇಳಿದ್ದು, ಈ ಕುರಿತ ವಿಡಿಯೋ ವೈರಲ್‌ ಆಗಿದೆ. ಎಪ್ರಿಲ್ 13 ರಂದು ಅಯೋಧ್ಯೆಯ ಮಿಲ್ಕಿಪುರ್ ತೆಹಸಿಲ್‌ನಲ್ಲಿ ಮಾತನಾಡಿದ ಲಲ್ಲು ಸಿಂಗ್, ಲೋಕಸಭೆ ಚುನಾವಣೆಯಲ್ಲಿ 272 ಸಂಸದರಿದ್ದರೆ ಸರ್ಕಾರ ರಚಿಸಬಹುದು, ಆದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಅಥವಾ ಹೊಸ ಸಂವಿಧಾನವನ್ನು ಪಡೆಯಬೇಕಿದ್ದರೆ ನಮಗೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೇಳಿದ್ದಾರೆ.

ಈ ಕುರಿತು ವಿವಾದವಾಗುತ್ತಿದ್ದಂತೆ ಪ್ರತಿಕ್ರಿಯಿಸಲು ಲಲ್ಲು ಸಿಂಗ್ ನಿರಾಕರಿಸಿದ್ದಾರೆ. ಫೈಝಾಬಾದ್‌ನ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಲಲ್ಲು ಸಿಂಗ್  ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸರ್ವಾಧಿಕಾರ ವ್ಯವಸ್ಥೆ ಜಾರಿಗೆ ತರಲು ಬಯಸುತ್ತಿರುವ ಬಿಜೆಪಿಯ ಗುಪ್ತ ಅಜೆಂಡಾವನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಯೋಧ್ಯೆ ಜಿಲ್ಲಾ ಬಿಜೆಪಿಯ ಮಾಧ್ಯಮ ಉಸ್ತುವಾರಿ ರಜನೀಶ್ ಸಿಂಗ್, ಅವರು ಯಾವ ಸಂದರ್ಭದಲ್ಲಿ ಮತ್ತು ಯಾವ ದೃಷ್ಟಿಯಲ್ಲಿ ಈ ರೀತಿ ಹೇಳಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ, ಆದರೆ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಪಿಡಿಎ ಬಿಜೆಪಿಯನ್ನು ಸೋಲಿಸುತ್ತದೆ, ಏಕೆಂದರೆ ಹೊಸ ಸಂವಿಧಾನವನ್ನು ಮಾಡುವ ಮೂಲಕ ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಲಾದ ಮೀಸಲಾತಿಯನ್ನು ಕೊನೆಗೊಳಿಸಲು ಬಿಜೆಪಿ ಬಯಸುತ್ತದೆ. ಬಿಜೆಪಿ ಗೆಲ್ಲಲು ಬಯಸುವುದು ಜನರ ಸೇವೆ ಅಥವಾ ಜನರ ಕಲ್ಯಾಣಕ್ಕಾಗಿ ಅಲ್ಲ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರು ರಚಿಸಿದ ಸಂವಿಧಾನವನ್ನು ಬದಲಾಯಿಸುವ ಗುರಿಯಿಂದ ಗೆಲ್ಲಲು ಬಯಸುತ್ತದೆ.
ಚುನಾವಣಾ ಆಯೋಗವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಸಂವಿಧಾನವನ್ನು ಮೂಲಭೂತವಾಗಿ ಬದಲಾಯಿಸುವ ಬಗ್ಗೆ ಮಾತನಾಡುವುದಕ್ಕಿಂತ ದೊಡ್ಡ ಪ್ರಜಾಪ್ರಭುತ್ವದ ಉಲ್ಲಂಘನೆ ಏನಿದೆ. ನಮ್ಮ ಹಕ್ಕುಗಳನ್ನು ಕೊನೆಗಾಣಿಸುವ ಕುರಿತ ಷಡ್ಯಂತ್ರ ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...