Homeಮುಖಪುಟಸಂವಿಧಾನ ಬದಲಾವಣೆ ಕುರಿತು ಪ್ರಸ್ತಾಪಿಸಿದ ಮತ್ತೋರ್ವ ಬಿಜೆಪಿ ಸಂಸದ

ಸಂವಿಧಾನ ಬದಲಾವಣೆ ಕುರಿತು ಪ್ರಸ್ತಾಪಿಸಿದ ಮತ್ತೋರ್ವ ಬಿಜೆಪಿ ಸಂಸದ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ನಾಯಕರು ಸಂವಿಧಾನ ಬದಲಾವಣೆ ಕುರಿತು ಹೇಳಿಕೆಯನ್ನು ನೀಡುತ್ತಿದ್ದಾರೆ. ಈ ಹಿಂದೆ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಮತ್ತು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆಯನ್ನು ನೀಡಿದ್ದರು. ಇದು ಬಿಜೆಪಿಯ ನೈಜ ಉದ್ದೇಶ ಮತ್ತು ಬಿಜೆಪಿ ಆರೆಸ್ಸೆಸ್‌ನ ಅಂತರಾಳ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರತಿಪಕ್ಷಗಳ ನಾಯಕರು ಇದು ತೋರ್ಪಡೆಗೆ ಮಾತ್ರ, ಬಿಜೆಪಿಯ ನೈಜ ಉದ್ದೇಶ ಸಂವಿಧಾನ ಬದಲಾವಣೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುವುದು ಎಂದು ಟೀಕಿಸಿದ್ದರು.

ಇದೀಗ ಬಿಜೆಪಿಯ ಫೈಜಾಬಾದ್ ಸಂಸದ ಲಲ್ಲು ಸಿಂಗ್ ಅವರು ಸಂವಿಧಾನದ ಬದಲಾವಣೆಗೆ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ ಎಂದು ಹೇಳಿದ್ದು, ಈ ಕುರಿತ ವಿಡಿಯೋ ವೈರಲ್‌ ಆಗಿದೆ. ಎಪ್ರಿಲ್ 13 ರಂದು ಅಯೋಧ್ಯೆಯ ಮಿಲ್ಕಿಪುರ್ ತೆಹಸಿಲ್‌ನಲ್ಲಿ ಮಾತನಾಡಿದ ಲಲ್ಲು ಸಿಂಗ್, ಲೋಕಸಭೆ ಚುನಾವಣೆಯಲ್ಲಿ 272 ಸಂಸದರಿದ್ದರೆ ಸರ್ಕಾರ ರಚಿಸಬಹುದು, ಆದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಅಥವಾ ಹೊಸ ಸಂವಿಧಾನವನ್ನು ಪಡೆಯಬೇಕಿದ್ದರೆ ನಮಗೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೇಳಿದ್ದಾರೆ.

ಈ ಕುರಿತು ವಿವಾದವಾಗುತ್ತಿದ್ದಂತೆ ಪ್ರತಿಕ್ರಿಯಿಸಲು ಲಲ್ಲು ಸಿಂಗ್ ನಿರಾಕರಿಸಿದ್ದಾರೆ. ಫೈಝಾಬಾದ್‌ನ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಲಲ್ಲು ಸಿಂಗ್  ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸರ್ವಾಧಿಕಾರ ವ್ಯವಸ್ಥೆ ಜಾರಿಗೆ ತರಲು ಬಯಸುತ್ತಿರುವ ಬಿಜೆಪಿಯ ಗುಪ್ತ ಅಜೆಂಡಾವನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಯೋಧ್ಯೆ ಜಿಲ್ಲಾ ಬಿಜೆಪಿಯ ಮಾಧ್ಯಮ ಉಸ್ತುವಾರಿ ರಜನೀಶ್ ಸಿಂಗ್, ಅವರು ಯಾವ ಸಂದರ್ಭದಲ್ಲಿ ಮತ್ತು ಯಾವ ದೃಷ್ಟಿಯಲ್ಲಿ ಈ ರೀತಿ ಹೇಳಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ, ಆದರೆ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಪಿಡಿಎ ಬಿಜೆಪಿಯನ್ನು ಸೋಲಿಸುತ್ತದೆ, ಏಕೆಂದರೆ ಹೊಸ ಸಂವಿಧಾನವನ್ನು ಮಾಡುವ ಮೂಲಕ ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಲಾದ ಮೀಸಲಾತಿಯನ್ನು ಕೊನೆಗೊಳಿಸಲು ಬಿಜೆಪಿ ಬಯಸುತ್ತದೆ. ಬಿಜೆಪಿ ಗೆಲ್ಲಲು ಬಯಸುವುದು ಜನರ ಸೇವೆ ಅಥವಾ ಜನರ ಕಲ್ಯಾಣಕ್ಕಾಗಿ ಅಲ್ಲ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರು ರಚಿಸಿದ ಸಂವಿಧಾನವನ್ನು ಬದಲಾಯಿಸುವ ಗುರಿಯಿಂದ ಗೆಲ್ಲಲು ಬಯಸುತ್ತದೆ.
ಚುನಾವಣಾ ಆಯೋಗವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಸಂವಿಧಾನವನ್ನು ಮೂಲಭೂತವಾಗಿ ಬದಲಾಯಿಸುವ ಬಗ್ಗೆ ಮಾತನಾಡುವುದಕ್ಕಿಂತ ದೊಡ್ಡ ಪ್ರಜಾಪ್ರಭುತ್ವದ ಉಲ್ಲಂಘನೆ ಏನಿದೆ. ನಮ್ಮ ಹಕ್ಕುಗಳನ್ನು ಕೊನೆಗಾಣಿಸುವ ಕುರಿತ ಷಡ್ಯಂತ್ರ ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...