Homeಅಂಕಣಗಳುಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

ಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

- Advertisement -
- Advertisement -

ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆದ ಒಂದು ಘಟನೆಯ ವಿಡಿಯೋ ದೊಡ್ಡಮಟ್ಟದಲ್ಲಿ ಸದ್ದು ಮಾಡಲೇ ಇಲ್ಲ. ಅದು ಜನರ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗದೇ ಇದ್ದರೂ ಒಂದು ಸಣ್ಣ ಅಫರ್ಮೆಟಿವ್ ಆಕ್ಷನ್‌ಗೆ ಎಡೆಮಾಡಿಕೊಟ್ಟಿದೆ. ಮಹಿಳೆಯೊಬ್ಬಳು ತನ್ನ ಮೇಲೆ ಕಲ್ಲು ಎಸೆದಳು ಎಂದು ಆರೋಪಿಸಿದ ಒಬ್ಬ ಟ್ರಾಫಿಕ್ ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್, ಆಕೆಗೆ ಒದೆಯುವ, ಜುಟ್ಟು ಹಿಡಿದು ಎಳೆಯುವ, ಅತಿ ಕೆಟ್ಟ ಬೈಗುಳಗಳನ್ನು ಬಳಸಿ ನಿಂದಿಸುವ ವಿಡಿಯೋ ಅದು. ಆ ಮಹಿಳೆ ಅಂಗವಿಕಲರಾಗಿದ್ದಾರೆ ಎಂಬುದನ್ನು ಕೂಡ ಲಕ್ಷಿಸದೆ ನಡೆಯುವ ಈ ದೌರ್ಜನ್ಯ ನಾಗರಿಕ ಸಮಾಜವೊಂದು ತಲೆತಗ್ಗಿಸಬೇಕಾದ ದುರಂತ ಎಂದೇ ಹೇಳಬಹುದು. ಆ ಮಹಿಳೆ ಒಂದು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು ಕೂಡ ಆತ ಮಾಡಿದ್ದು ಅತ್ಯಂತ ಹೀನಾಯವಾದ ಕೆಲಸ. ಇದು ಯಾವುದೋ ಒಂದು ಬಿಡಿ ಘಟನೆಯೇನಲ್ಲ. ಇಂತಹ ನೂರಾರು ಘಟನೆಗಳು ದೇಶದಾದ್ಯಂತ ನಡೆಯುತ್ತಲೇ ಇರುತ್ತವೆ!

ಅದಕ್ಕೂ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡದ ಕೊರಗ ಸಮುದಾಯದ ಒಂದು ಕುಟುಂಬದ ಮದುವೆ ಸಮಾರಂಭದಲ್ಲಿ ಡಿಜೆ ಹಾಕಿ ಸಂಭ್ರಮಿಸುತ್ತಿದ್ದಾಗ ಅವರ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಕರಣ ತುಸು ಆಕ್ರೋಶಕ್ಕೆ ಕಾರಣವಾಗಿತ್ತು. ಪೊಲೀಸರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಕೊರೊನಾ ಮೊದಲ ಲಾಕ್‌ಡೌನ್ ಸಮಯದಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಂತಾನ್‌ಕುಳಂ ಪೊಲೀಸರು ಜಯರಾಜ್-ಬೆನಿಕ್ಸ್ (ಅಪ್ಪ-ಮಗ) ಅವರನ್ನು ಅರೆಸ್ಟ್ ಮಾಡಿ, ಲಾಕ್‌ಅಪ್‌ನಲ್ಲಿ ನಡೆದ ಹಲ್ಲೆಯ ಕಾರಣಕ್ಕೆ ಅವರಿಬ್ಬರೂ ಮೃತರಾಗಿದ್ದರು. ಮದ್ರಾಸ್ ಹೈಕೋರ್ಟ್ ಆರೋಪಿತ ಪೊಲೀಸರ ವಿರುದ್ಧ ಸುಮೋಟೋ ದೂರು ದಾಖಲಿಸಿದ ಮೇಲಷ್ಟೇ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಈಗ ಸಿಬಿಐ ತನಿಖೆಯಾಗಿ ನ್ಯಾಯಾಲಯ ವಿಚಾರಣೆಯ ಹಂತದಲ್ಲಿದೆ. ಹೀಗೆ ಪೊಲೀಸರ ಹೈಹ್ಯಾಂಡೆಡ್‌ನೆಸ್ ತನಿಖೆಯಾಗುವ, ಮಾಡಿದ ತಪ್ಪಿಗೆ ಶಿಕ್ಷೆಯಾಗುವ ಪ್ರಕರಣಗಳು ವಿರಳಾತಿವಿರಳ. ಇನ್ನೂ ಈ ದೇಶದಲ್ಲಿ ಪೊಲೀಸಿಂಗ್ ಸುಧಾರಣೆ ಆಗಬೇಕೆಂಬ ಕೂಗಿಗೆ ಮನ್ನಣೆ ದೊರೆತದ್ದು ಇಲ್ಲವೇ ಇಲ್ಲ ಅನ್ನುವಷ್ಟು ಕಡಿಮೆ. ದೇಶದ ಬಹುಪಾಲು ಜನ ಸದ್ಯದ ಪೊಲೀಸ್ ವ್ಯವಸ್ಥೆಯಿಂದ ಒಂದಲ್ಲಾ ಒಂದು ರೀತಿಯಲ್ಲಿ ಉಪಟಳಕ್ಕೆ ಒಳಗಾಗಿದ್ದರೂ ಅದರ ಸುಧಾರಣೆಯ ವಿರುದ್ಧ ಒಂದು ಒಗ್ಗಟ್ಟಿನ ಧ್ವನಿ ಎದ್ದಿಲ್ಲ ಅಥವಾ ಅದು ಸಾಧ್ಯವಾಗದ ಹಾಗೆ ಇಂದಿನ ವ್ಯವಸ್ಥೆ ನೋಡಿಕೊಂಡು ಬಂದಿದೆ.

ಇಂಗ್ಲಿಷ್ ಪದಗಳಾದ Police, Polite, Politics – ಗ್ರೀಕ್ ಪದ polisನಿಂದ ಹುಟ್ಟಿರುವಂತವು. ಅಲ್ಲಿ ಅದಕ್ಕೆ ಅರ್ಥ ಸಿಟಿ ಅಥವಾ ನಗರ. ಇದರ ಲ್ಯಾಟಿನ್ ಸಮಾನಾರ್ಥಕ civitas. ಇದರಿಂದ ಹುಟ್ಟಿರುವುದು ಸಿವಿಲಟಿ, ಸಿವಿಕ್ ಇತ್ಯಾದಿ ಪದಗಳು. ಇದು ಸಿವಿಲೈಸೇಶನ್ ಅಥವಾ ನಾಗರಿಕತೆ ಪದಗಳ ಮೂಲ. ಬುಡಕಟ್ಟು ಸಮುದಾಯ ಜೀವನದಿಂದ ನಗರೀಕರಣದ ನಾಗರಿಕ ಜೀವನವನ್ನೂ ಅದು ಸೂಚಿಸುತ್ತದೆ. ಹೆಚ್ಚು ಕಡಿಮೆ ನಾಗರಿಕರನ್ನು ಹದ್ದುಬಸ್ತಿನಲ್ಲಿಡುವ ಪರಿಕಲ್ಪನೆಗಳಾಗಿ ಇವುಗಳು ಬದಲಾಗಿ ಹೋಗಿರುವುದು ಸೋಜಿಗ ಮತ್ತು ಅದೇ ಸಮಯದಲ್ಲಿ ದುರಂತದ್ದಾಗಿದೆ. ಕೆಲವು ದೇಶಗಳು ಇದಕ್ಕೆ ಸುಧಾರಣೆಯನ್ನು ಕಂಡುಕೊಳ್ಳಲು ಶ್ರಮಿಸುತ್ತಿದ್ದರೆ ಭಾರತದಲ್ಲಿ ಇವಿನ್ನೂ ನಾಗರಿಕರನ್ನು ಭಯಬೀತಿಗೊಳಿಸುವ ನಿಟ್ಟಿನಲ್ಲಿಯೇ ಇವೆ.

ವಸಾಹತು ಪ್ರಜ್ಞೆಯಿಂದ ಬಿಡಿಸಿಕೊಳ್ಳದ ಪೊಲೀಸ್ ವ್ಯವಸ್ಥೆ

ಬ್ರಿಟಿಷ್ ಆಡಳಿತದಲ್ಲಿ ಜಾರಿಯಾದ ಪೊಲೀಸ್ ವ್ಯವಸ್ಥೆ, ಅಂದಿನ ಸರ್ಕಾರದ ವಿರುದ್ಧ ಜಾರಿಯಲ್ಲಿದ್ದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಿ ಭಾರತೀಯರನ್ನು ಹದ್ದುಬಸ್ತಿನಲ್ಲಿಡುವುದಕ್ಕೆ ರೂಪುಗೊಂಡಿದ್ದು. ಇಂದಿಗೂ ಪೊಲೀಸ್ ವ್ಯವಸ್ಥೆ ಪ್ರಭುತ್ವದ ಆಜ್ಞೆಯನ್ನು ಪಾಲಿಸುವ, ನಾಗರಿಕರ ವಿಶಾಲ ಸಂಕಟಗಳಿಗೆ ಸ್ಪಂದಿಸದೆ ವಸಾಹತುಶಾಹಿ ಪಳೆಯುಳಿಕೆ ಕಾನೂನುಗಳನ್ನು ಪಾಲಿಸುವ ವ್ಯವಸ್ಥೆಯಾಗಿಯೇ ಉಳಿದುಕೊಂಡು ಬಂದಿದೆ. ಇನ್ನು ಅದರಲ್ಲಿನ ಶ್ರೇಣೀಕರಣ ಇದನ್ನೆಲ್ಲಾ ಪೊರೆಯುವಂಥದ್ದು.

ಭಾರತದಲ್ಲಿ ಸೆಡಿಶನ್ ಅಥವಾ ದೇಶದ್ರೋಹಿ ಕಾನೂನನ್ನು ಪರಿಚಯಿಸಿದ ಬ್ರಿಟಿಷ್ ಆಡಳಿತ ತನ್ನ ದೇಶದಲ್ಲಿ ಆ ಕಾನೂನನ್ನು ಇಲ್ಲವಾಗಿಸಿದೆ. ಇಲ್ಲಿ ದಮನಕಾರಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿದ ವಸಾಹತು ಬ್ರಿಟಿಷ್ ತನ್ನ ದೇಶದಲ್ಲಿ ಇದ್ದುದರಲ್ಲಿ ಜನಸ್ನೇಹಿ ಎನ್ನಲಾದ ಪೀಲಿಯನ್ ತತ್ತ್ವಗಳ ಮೇಲೆ ತನ್ನ ಪೊಲೀಸಿಂಗ್‌ಅನ್ನು ರೂಪಿಸಿಕೊಂಡಿದೆ. 1800ರಲ್ಲಿ ರಾಬರ್ಟ್ ಪೀಲ್ ಎಂಬ ಸರ್ಕಾರದ ಆಡಳಿತದಲ್ಲಿದ್ದ ವ್ಯಕ್ತಿ ನೀಡಿದ ತತ್ತ್ವಗಳ ಆಧಾರದಲ್ಲಿ, ಪೊಲೀಸರು ಸಮವಸ್ತ್ರ ಧರಿಸಿದ ನಾಗರಿಕರು ಎಂಬ ಅರ್ಥದಲ್ಲಿ ಅದು ಅಲ್ಲಿ ರೂಪುಗೊಂಡಿದೆ. ’ಪೊಲೀಸಿಂಗ್ ಬೈ ಕನ್ಸೆಂಟ್’ – ಒಪ್ಪಿಗೆಯ ಆಧಾರದಲ್ಲಿ ಪೊಲೀಸಿಂಗ್ ಎಂಬ ತತ್ತ್ವ ತನ್ನೆಲ್ಲಾ ಕಾನೂನು ಪಾಲನೆಯಲ್ಲಿ ನಾಗರಿಕರನ್ನು ಸಾಧ್ಯವಾದಷ್ಟು ತೊಡಗಿಸಿಕೊಳ್ಳಲು ಶ್ರಮಿಸುತ್ತದೆ. ಇಂತಹ ಸುಧಾರಣೆಗಳನ್ನು ಭಾರತದ ಪೊಲೀಸಿಂಗ್ ನಲ್ಲಿ ತೊಡಗಿಸಿಕೊಳ್ಳುವುದಕ್ಕೆ ಯಾವುದೇ ರಾಜಕೀಯ ನಾಯಕತ್ವವಾಗಲೀ ಮನಸ್ಸು ಮಾಡಿಲ್ಲ. ನಾಗರಿಕ ಸಮಾಜಕ್ಕೂ ಒತ್ತಡ ಹೇರಲು ಸಾಧ್ಯವಾಗಿಲ್ಲ.

ಕೋವಿಡ್ ಸಮಯದಲ್ಲಿ ಕಣ್ಣಿಗೆ ರಾಚಿದ ಕಾನೂನು ಪಾಲನೆಯ ಕ್ರೌರ್ಯ!

ಕೋವಿಡ್ ಮೊದಲ ಲಾಕ್‌ಡೌನ್ ಸಮಯದಲ್ಲಿ ಜನ ಜೀವನೋಪಾಯಗಳನ್ನು ಕಳೆದುಕೊಂಡು ಕಿಲೋಮೀಟರ್‌ಗಟ್ಟಲೆ ಹಸಿವಿನಿಂದ ನಡೆದು ಹೋಗಬೇಕಾದರೆ, ಅವರನ್ನು ಅಲ್ಲಲ್ಲಿ ತಡೆಗಟ್ಟಿ ಹೊಡೆಯುವ, ಕಿರುಕುಳ ನೀಡುವ ಪೊಲೀಸ್ ದೌರ್ಜನ್ಯಗಳ ವಿಡಿಯೋಗಳು ಒಂದರಮೇಲೊಂದರಂತೆ ಬಂದವು. ಅಲ್ಲಲ್ಲಿ ಜನರಿಗೆ ಸಹಾಯ ಮಾಡಿದ ಪೊಲೀಸ್ ವ್ಯಕ್ತಿಗಳು ಬಿಡಿಬಿಡಿಯಾಗಿ ಇರಲಿಲ್ಲವೆಂದಲ್ಲ. ಆದರೆ ಒಂದು ವ್ಯವಸ್ಥೆಯಾಗಿ ಬಡಜನರ, ದೀನರ ಬಗ್ಗೆ ಹೆಚ್ಚು ಸಂಯಮದಿಂದ, ಕರುಣೆಯಿಂದ ನಡೆದುಕೊಳ್ಳಬೇಕಿದ್ದ ಪೊಲೀಸ್ ವ್ಯವಸ್ಥೆಯ ಬಹುತೇಕ ಮಂದಿ ಹೀಗೆ ಒರಟಾಗಿ, ಹೃದಯಶೂನ್ಯವಾಗಿ ನಡೆದುಕೊಂಡಿದ್ದನ್ನು ಅರ್ಥ ಮಾಡಿಕೊಳ್ಳುವುದು ಹೇಗೆ?

ಹಾಗೆಯೇ, ಟ್ರಾಫಿಕ್ ಸುವ್ಯವಸ್ಥೆಯ ನೆಪದಲ್ಲಿ ಜನಸಾಮಾನ್ಯರಿಗೆ ಗೋಳು ಹೊಯ್ದುಕೊಳ್ಳುವ ದೂರುಗಳು ಸಾರ್ವಕಾಲಿಕ. ಇತ್ತೀಚೆಗೆ ಡೆಲಿವರಿ ಕೆಲಸ ಮಾಡುವ ಒಬ್ಬ ವ್ಯಕ್ತಿಯ ಬೈಕ್‌ಅನ್ನು ನಿರ್ದಾಕ್ಷಿಣ್ಯವಾಗಿ ಎಳೆದೊಯ್ಯುವ ಬೆಂಗಳೂರು ಟ್ರಾಫಿಕ್ ಪೊಲೀಸ್ ಮತ್ತು ಟೋಯಿಂಗ್ ಕಾಂಟ್ರ್ಯಾಕ್ಟ್ ನೌಕರರ ದುರ್ವರ್ತನೆಯ ವಿಡಿಯೋ ಮನಕಲಕುವಂತಿತ್ತು. ಇವೆಲ್ಲಾ, ಇರುವ ಬೆಟ್ಟದಷ್ಟು ಸಮಸ್ಯೆಗಳಲ್ಲಿ, ಪ್ರಕರಣಗಳಲ್ಲಿ ಕಾಣಿಸಿಕೊಳ್ಳುವ ಬೆರಳೆಣಿಕೆಯ ಸಂಗತಿಗಳಷ್ಟೇ.

ಯಾವುದೇ ಸಮಯದಲ್ಲಿ ಪೊಲೀಸರನ್ನು ಕಾಣಲು ಜನಸಾಮಾನ್ಯರು ಹಿಂಜರಿಯುವ ಪರಿಸ್ಥಿತಿ ಇಂದಿಗೂ ಸಾಮಾನ್ಯವಾದುದಲ್ಲವೇ? ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಕಾಣುತ್ತಿರುವ ಈ ಸಮಯದಲ್ಲಿಯೂ, ನಮ್ಮದೇ ಪೊಲೀಸ್ ವ್ಯವಸ್ಥೆಯನ್ನು ಕಂಡು ಜನ ಹೆದರುವ ಪರಿಸ್ಥಿತಿ ನಿರ್ಮಾಣವಾಗಿರುವುದೇಕೇ? 2006ರ ಪ್ರಕರಣದ ವಿಚಾರಣೆಯೊಂದರಲ್ಲಿ ಪೊಲೀಸ್ ವ್ಯವಸ್ಥೆಯ ಸುಧಾರಣೆಗೆ ಸುಪ್ರೀಂ ಕೋರ್ಟ್ ಕೆಲವು ನಿರ್ದೇಶನಗಳನ್ನು ನೀಡಿದ್ದರೂ ಅವುಗಳು ಜಾರಿಯಾಗಿರುವ ಉದಾಹರಣೆ ಯಾವ ರಾಜ್ಯದಲ್ಲಿಯೂ ಇಲ್ಲ.

ಇನ್ನು ಪ್ರಭುತ್ವಗಳು ಜನರ ಹೋರಾಟಗಳನ್ನು, ಪ್ರತಿಭಟನೆಗಳನ್ನು ನಿಯಂತ್ರಿಸಲು, ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡ ನೂರಾರು ಉದಾಹರಣೆಗಳಿವೆ. ಯಾವುದೇ ರಾಜಕೀಯ ಪಕ್ಷಕ್ಕೆ ನಿಷ್ಠೆ ತೋರದೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವಂತೆ, ಬಡಜನ, ದೀನ ದಲಿತರು ಮತ್ತು ಮಹಿಳೆಯರ ಜೊತೆಗೆ ವರ್ತಿಸುವಾಗ ಸೂಕ್ಷ್ಮತೆ ತೋರುವಂತೆ, ತಾವೂ ನಾಗರಿಕರೇ ಎಂಬ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ತರಬೇತು ನೀಡುವ ಮತ್ತು ಸಮಗ್ರ ಸುಧಾರಣೆಯನ್ನು ತರುವ ತುರ್ತು ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ.

ಕೆಲವೇ ದಿನಗಳ ಹಿಂದೆ ಅಂಗವಿಕಲ ಮಹಿಳೆಗೆ ಒದ್ದ, ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ, ನಾನುಗೌರಿ ಸೇರಿದಂತೆ ವಿವಿಧ ಜನಪರ ಮಾಧ್ಯಮಗಳು ಒತ್ತಡ ಹೇರಿದ ಮೇಲೆ, ಆ ಎಎಸ್‌ಐಅನ್ನು ಸಸ್ಪೆಂಡ್ ಮಾಡಲಾಗಿದೆ. ಅದಷ್ಟೇ ಸಾಕೇ? ಆತನ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಲ್ಲವೇ? ವಾಹನಗಳ ಟೋಯಿಂಗ್ ಅನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಆದರೆ ಅದು ಮುಂದೊಂದು ದಿನ ಬೇರೊಂದು ರೀತಿಯಲ್ಲಿ ಬರಬಹುದು. ಇದರ ಬದಲು ನಾಗರಿಕರಿಗೆ ಬೇಕಾದ ರೀತಿಯಲ್ಲಿ ಕಾನೂನು ಪಾಲನೆ ಮಾಡುವ, ನಾಗರಿಕರನ್ನು ಒಳಗೊಂಡಂತೆ ಪೊಲೀಸ್ ವ್ಯವಸ್ಥೆ ಸೃಷ್ಟಿಸಿಕೊಳ್ಳಲು ಸಮಗ್ರ ಸುಧಾರಣೆಯ ಅಗತ್ಯವಿದೆ. ಇದಕ್ಕಾಗಿ ನಾಗರಿಕ ಸಮಾಜ ತನಗಿರುವ ಪ್ರಭಾವವನ್ನು ಬಳಸಿ ಒತ್ತಡ ಹೇರಬೇಕಿದೆ.


ಇದನ್ನೂ ಓದಿ: ’ಪ್ರಾಮಾಣಿಕತೆ’ ಕುಚೋದ್ಯಕ್ಕೆ ಒಳಗಾಗುತ್ತಿರುವ ಕಾಲದಲ್ಲಿ ನೆನೆಯಬೇಕಿರುವ ಬಿ.ಜಿ ಹಾರ್ನಿಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...