Homeಅಂಕಣಗಳುಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

ಮರೀಚಿಕೆಯಾಗಿರುವ ಪೊಲೀಸ್ ಸುಧಾರಣೆ; ನಾಗರಿಕ ಸಮಾಜದ ಒಕ್ಕೊರಲಿನ ದನಿ ಬೇಕಿದೆ..

- Advertisement -
- Advertisement -

ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆದ ಒಂದು ಘಟನೆಯ ವಿಡಿಯೋ ದೊಡ್ಡಮಟ್ಟದಲ್ಲಿ ಸದ್ದು ಮಾಡಲೇ ಇಲ್ಲ. ಅದು ಜನರ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗದೇ ಇದ್ದರೂ ಒಂದು ಸಣ್ಣ ಅಫರ್ಮೆಟಿವ್ ಆಕ್ಷನ್‌ಗೆ ಎಡೆಮಾಡಿಕೊಟ್ಟಿದೆ. ಮಹಿಳೆಯೊಬ್ಬಳು ತನ್ನ ಮೇಲೆ ಕಲ್ಲು ಎಸೆದಳು ಎಂದು ಆರೋಪಿಸಿದ ಒಬ್ಬ ಟ್ರಾಫಿಕ್ ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್, ಆಕೆಗೆ ಒದೆಯುವ, ಜುಟ್ಟು ಹಿಡಿದು ಎಳೆಯುವ, ಅತಿ ಕೆಟ್ಟ ಬೈಗುಳಗಳನ್ನು ಬಳಸಿ ನಿಂದಿಸುವ ವಿಡಿಯೋ ಅದು. ಆ ಮಹಿಳೆ ಅಂಗವಿಕಲರಾಗಿದ್ದಾರೆ ಎಂಬುದನ್ನು ಕೂಡ ಲಕ್ಷಿಸದೆ ನಡೆಯುವ ಈ ದೌರ್ಜನ್ಯ ನಾಗರಿಕ ಸಮಾಜವೊಂದು ತಲೆತಗ್ಗಿಸಬೇಕಾದ ದುರಂತ ಎಂದೇ ಹೇಳಬಹುದು. ಆ ಮಹಿಳೆ ಒಂದು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು ಕೂಡ ಆತ ಮಾಡಿದ್ದು ಅತ್ಯಂತ ಹೀನಾಯವಾದ ಕೆಲಸ. ಇದು ಯಾವುದೋ ಒಂದು ಬಿಡಿ ಘಟನೆಯೇನಲ್ಲ. ಇಂತಹ ನೂರಾರು ಘಟನೆಗಳು ದೇಶದಾದ್ಯಂತ ನಡೆಯುತ್ತಲೇ ಇರುತ್ತವೆ!

ಅದಕ್ಕೂ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡದ ಕೊರಗ ಸಮುದಾಯದ ಒಂದು ಕುಟುಂಬದ ಮದುವೆ ಸಮಾರಂಭದಲ್ಲಿ ಡಿಜೆ ಹಾಕಿ ಸಂಭ್ರಮಿಸುತ್ತಿದ್ದಾಗ ಅವರ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಕರಣ ತುಸು ಆಕ್ರೋಶಕ್ಕೆ ಕಾರಣವಾಗಿತ್ತು. ಪೊಲೀಸರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಕೊರೊನಾ ಮೊದಲ ಲಾಕ್‌ಡೌನ್ ಸಮಯದಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಂತಾನ್‌ಕುಳಂ ಪೊಲೀಸರು ಜಯರಾಜ್-ಬೆನಿಕ್ಸ್ (ಅಪ್ಪ-ಮಗ) ಅವರನ್ನು ಅರೆಸ್ಟ್ ಮಾಡಿ, ಲಾಕ್‌ಅಪ್‌ನಲ್ಲಿ ನಡೆದ ಹಲ್ಲೆಯ ಕಾರಣಕ್ಕೆ ಅವರಿಬ್ಬರೂ ಮೃತರಾಗಿದ್ದರು. ಮದ್ರಾಸ್ ಹೈಕೋರ್ಟ್ ಆರೋಪಿತ ಪೊಲೀಸರ ವಿರುದ್ಧ ಸುಮೋಟೋ ದೂರು ದಾಖಲಿಸಿದ ಮೇಲಷ್ಟೇ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಈಗ ಸಿಬಿಐ ತನಿಖೆಯಾಗಿ ನ್ಯಾಯಾಲಯ ವಿಚಾರಣೆಯ ಹಂತದಲ್ಲಿದೆ. ಹೀಗೆ ಪೊಲೀಸರ ಹೈಹ್ಯಾಂಡೆಡ್‌ನೆಸ್ ತನಿಖೆಯಾಗುವ, ಮಾಡಿದ ತಪ್ಪಿಗೆ ಶಿಕ್ಷೆಯಾಗುವ ಪ್ರಕರಣಗಳು ವಿರಳಾತಿವಿರಳ. ಇನ್ನೂ ಈ ದೇಶದಲ್ಲಿ ಪೊಲೀಸಿಂಗ್ ಸುಧಾರಣೆ ಆಗಬೇಕೆಂಬ ಕೂಗಿಗೆ ಮನ್ನಣೆ ದೊರೆತದ್ದು ಇಲ್ಲವೇ ಇಲ್ಲ ಅನ್ನುವಷ್ಟು ಕಡಿಮೆ. ದೇಶದ ಬಹುಪಾಲು ಜನ ಸದ್ಯದ ಪೊಲೀಸ್ ವ್ಯವಸ್ಥೆಯಿಂದ ಒಂದಲ್ಲಾ ಒಂದು ರೀತಿಯಲ್ಲಿ ಉಪಟಳಕ್ಕೆ ಒಳಗಾಗಿದ್ದರೂ ಅದರ ಸುಧಾರಣೆಯ ವಿರುದ್ಧ ಒಂದು ಒಗ್ಗಟ್ಟಿನ ಧ್ವನಿ ಎದ್ದಿಲ್ಲ ಅಥವಾ ಅದು ಸಾಧ್ಯವಾಗದ ಹಾಗೆ ಇಂದಿನ ವ್ಯವಸ್ಥೆ ನೋಡಿಕೊಂಡು ಬಂದಿದೆ.

ಇಂಗ್ಲಿಷ್ ಪದಗಳಾದ Police, Polite, Politics – ಗ್ರೀಕ್ ಪದ polisನಿಂದ ಹುಟ್ಟಿರುವಂತವು. ಅಲ್ಲಿ ಅದಕ್ಕೆ ಅರ್ಥ ಸಿಟಿ ಅಥವಾ ನಗರ. ಇದರ ಲ್ಯಾಟಿನ್ ಸಮಾನಾರ್ಥಕ civitas. ಇದರಿಂದ ಹುಟ್ಟಿರುವುದು ಸಿವಿಲಟಿ, ಸಿವಿಕ್ ಇತ್ಯಾದಿ ಪದಗಳು. ಇದು ಸಿವಿಲೈಸೇಶನ್ ಅಥವಾ ನಾಗರಿಕತೆ ಪದಗಳ ಮೂಲ. ಬುಡಕಟ್ಟು ಸಮುದಾಯ ಜೀವನದಿಂದ ನಗರೀಕರಣದ ನಾಗರಿಕ ಜೀವನವನ್ನೂ ಅದು ಸೂಚಿಸುತ್ತದೆ. ಹೆಚ್ಚು ಕಡಿಮೆ ನಾಗರಿಕರನ್ನು ಹದ್ದುಬಸ್ತಿನಲ್ಲಿಡುವ ಪರಿಕಲ್ಪನೆಗಳಾಗಿ ಇವುಗಳು ಬದಲಾಗಿ ಹೋಗಿರುವುದು ಸೋಜಿಗ ಮತ್ತು ಅದೇ ಸಮಯದಲ್ಲಿ ದುರಂತದ್ದಾಗಿದೆ. ಕೆಲವು ದೇಶಗಳು ಇದಕ್ಕೆ ಸುಧಾರಣೆಯನ್ನು ಕಂಡುಕೊಳ್ಳಲು ಶ್ರಮಿಸುತ್ತಿದ್ದರೆ ಭಾರತದಲ್ಲಿ ಇವಿನ್ನೂ ನಾಗರಿಕರನ್ನು ಭಯಬೀತಿಗೊಳಿಸುವ ನಿಟ್ಟಿನಲ್ಲಿಯೇ ಇವೆ.

ವಸಾಹತು ಪ್ರಜ್ಞೆಯಿಂದ ಬಿಡಿಸಿಕೊಳ್ಳದ ಪೊಲೀಸ್ ವ್ಯವಸ್ಥೆ

ಬ್ರಿಟಿಷ್ ಆಡಳಿತದಲ್ಲಿ ಜಾರಿಯಾದ ಪೊಲೀಸ್ ವ್ಯವಸ್ಥೆ, ಅಂದಿನ ಸರ್ಕಾರದ ವಿರುದ್ಧ ಜಾರಿಯಲ್ಲಿದ್ದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಿ ಭಾರತೀಯರನ್ನು ಹದ್ದುಬಸ್ತಿನಲ್ಲಿಡುವುದಕ್ಕೆ ರೂಪುಗೊಂಡಿದ್ದು. ಇಂದಿಗೂ ಪೊಲೀಸ್ ವ್ಯವಸ್ಥೆ ಪ್ರಭುತ್ವದ ಆಜ್ಞೆಯನ್ನು ಪಾಲಿಸುವ, ನಾಗರಿಕರ ವಿಶಾಲ ಸಂಕಟಗಳಿಗೆ ಸ್ಪಂದಿಸದೆ ವಸಾಹತುಶಾಹಿ ಪಳೆಯುಳಿಕೆ ಕಾನೂನುಗಳನ್ನು ಪಾಲಿಸುವ ವ್ಯವಸ್ಥೆಯಾಗಿಯೇ ಉಳಿದುಕೊಂಡು ಬಂದಿದೆ. ಇನ್ನು ಅದರಲ್ಲಿನ ಶ್ರೇಣೀಕರಣ ಇದನ್ನೆಲ್ಲಾ ಪೊರೆಯುವಂಥದ್ದು.

ಭಾರತದಲ್ಲಿ ಸೆಡಿಶನ್ ಅಥವಾ ದೇಶದ್ರೋಹಿ ಕಾನೂನನ್ನು ಪರಿಚಯಿಸಿದ ಬ್ರಿಟಿಷ್ ಆಡಳಿತ ತನ್ನ ದೇಶದಲ್ಲಿ ಆ ಕಾನೂನನ್ನು ಇಲ್ಲವಾಗಿಸಿದೆ. ಇಲ್ಲಿ ದಮನಕಾರಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿದ ವಸಾಹತು ಬ್ರಿಟಿಷ್ ತನ್ನ ದೇಶದಲ್ಲಿ ಇದ್ದುದರಲ್ಲಿ ಜನಸ್ನೇಹಿ ಎನ್ನಲಾದ ಪೀಲಿಯನ್ ತತ್ತ್ವಗಳ ಮೇಲೆ ತನ್ನ ಪೊಲೀಸಿಂಗ್‌ಅನ್ನು ರೂಪಿಸಿಕೊಂಡಿದೆ. 1800ರಲ್ಲಿ ರಾಬರ್ಟ್ ಪೀಲ್ ಎಂಬ ಸರ್ಕಾರದ ಆಡಳಿತದಲ್ಲಿದ್ದ ವ್ಯಕ್ತಿ ನೀಡಿದ ತತ್ತ್ವಗಳ ಆಧಾರದಲ್ಲಿ, ಪೊಲೀಸರು ಸಮವಸ್ತ್ರ ಧರಿಸಿದ ನಾಗರಿಕರು ಎಂಬ ಅರ್ಥದಲ್ಲಿ ಅದು ಅಲ್ಲಿ ರೂಪುಗೊಂಡಿದೆ. ’ಪೊಲೀಸಿಂಗ್ ಬೈ ಕನ್ಸೆಂಟ್’ – ಒಪ್ಪಿಗೆಯ ಆಧಾರದಲ್ಲಿ ಪೊಲೀಸಿಂಗ್ ಎಂಬ ತತ್ತ್ವ ತನ್ನೆಲ್ಲಾ ಕಾನೂನು ಪಾಲನೆಯಲ್ಲಿ ನಾಗರಿಕರನ್ನು ಸಾಧ್ಯವಾದಷ್ಟು ತೊಡಗಿಸಿಕೊಳ್ಳಲು ಶ್ರಮಿಸುತ್ತದೆ. ಇಂತಹ ಸುಧಾರಣೆಗಳನ್ನು ಭಾರತದ ಪೊಲೀಸಿಂಗ್ ನಲ್ಲಿ ತೊಡಗಿಸಿಕೊಳ್ಳುವುದಕ್ಕೆ ಯಾವುದೇ ರಾಜಕೀಯ ನಾಯಕತ್ವವಾಗಲೀ ಮನಸ್ಸು ಮಾಡಿಲ್ಲ. ನಾಗರಿಕ ಸಮಾಜಕ್ಕೂ ಒತ್ತಡ ಹೇರಲು ಸಾಧ್ಯವಾಗಿಲ್ಲ.

ಕೋವಿಡ್ ಸಮಯದಲ್ಲಿ ಕಣ್ಣಿಗೆ ರಾಚಿದ ಕಾನೂನು ಪಾಲನೆಯ ಕ್ರೌರ್ಯ!

ಕೋವಿಡ್ ಮೊದಲ ಲಾಕ್‌ಡೌನ್ ಸಮಯದಲ್ಲಿ ಜನ ಜೀವನೋಪಾಯಗಳನ್ನು ಕಳೆದುಕೊಂಡು ಕಿಲೋಮೀಟರ್‌ಗಟ್ಟಲೆ ಹಸಿವಿನಿಂದ ನಡೆದು ಹೋಗಬೇಕಾದರೆ, ಅವರನ್ನು ಅಲ್ಲಲ್ಲಿ ತಡೆಗಟ್ಟಿ ಹೊಡೆಯುವ, ಕಿರುಕುಳ ನೀಡುವ ಪೊಲೀಸ್ ದೌರ್ಜನ್ಯಗಳ ವಿಡಿಯೋಗಳು ಒಂದರಮೇಲೊಂದರಂತೆ ಬಂದವು. ಅಲ್ಲಲ್ಲಿ ಜನರಿಗೆ ಸಹಾಯ ಮಾಡಿದ ಪೊಲೀಸ್ ವ್ಯಕ್ತಿಗಳು ಬಿಡಿಬಿಡಿಯಾಗಿ ಇರಲಿಲ್ಲವೆಂದಲ್ಲ. ಆದರೆ ಒಂದು ವ್ಯವಸ್ಥೆಯಾಗಿ ಬಡಜನರ, ದೀನರ ಬಗ್ಗೆ ಹೆಚ್ಚು ಸಂಯಮದಿಂದ, ಕರುಣೆಯಿಂದ ನಡೆದುಕೊಳ್ಳಬೇಕಿದ್ದ ಪೊಲೀಸ್ ವ್ಯವಸ್ಥೆಯ ಬಹುತೇಕ ಮಂದಿ ಹೀಗೆ ಒರಟಾಗಿ, ಹೃದಯಶೂನ್ಯವಾಗಿ ನಡೆದುಕೊಂಡಿದ್ದನ್ನು ಅರ್ಥ ಮಾಡಿಕೊಳ್ಳುವುದು ಹೇಗೆ?

ಹಾಗೆಯೇ, ಟ್ರಾಫಿಕ್ ಸುವ್ಯವಸ್ಥೆಯ ನೆಪದಲ್ಲಿ ಜನಸಾಮಾನ್ಯರಿಗೆ ಗೋಳು ಹೊಯ್ದುಕೊಳ್ಳುವ ದೂರುಗಳು ಸಾರ್ವಕಾಲಿಕ. ಇತ್ತೀಚೆಗೆ ಡೆಲಿವರಿ ಕೆಲಸ ಮಾಡುವ ಒಬ್ಬ ವ್ಯಕ್ತಿಯ ಬೈಕ್‌ಅನ್ನು ನಿರ್ದಾಕ್ಷಿಣ್ಯವಾಗಿ ಎಳೆದೊಯ್ಯುವ ಬೆಂಗಳೂರು ಟ್ರಾಫಿಕ್ ಪೊಲೀಸ್ ಮತ್ತು ಟೋಯಿಂಗ್ ಕಾಂಟ್ರ್ಯಾಕ್ಟ್ ನೌಕರರ ದುರ್ವರ್ತನೆಯ ವಿಡಿಯೋ ಮನಕಲಕುವಂತಿತ್ತು. ಇವೆಲ್ಲಾ, ಇರುವ ಬೆಟ್ಟದಷ್ಟು ಸಮಸ್ಯೆಗಳಲ್ಲಿ, ಪ್ರಕರಣಗಳಲ್ಲಿ ಕಾಣಿಸಿಕೊಳ್ಳುವ ಬೆರಳೆಣಿಕೆಯ ಸಂಗತಿಗಳಷ್ಟೇ.

ಯಾವುದೇ ಸಮಯದಲ್ಲಿ ಪೊಲೀಸರನ್ನು ಕಾಣಲು ಜನಸಾಮಾನ್ಯರು ಹಿಂಜರಿಯುವ ಪರಿಸ್ಥಿತಿ ಇಂದಿಗೂ ಸಾಮಾನ್ಯವಾದುದಲ್ಲವೇ? ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಕಾಣುತ್ತಿರುವ ಈ ಸಮಯದಲ್ಲಿಯೂ, ನಮ್ಮದೇ ಪೊಲೀಸ್ ವ್ಯವಸ್ಥೆಯನ್ನು ಕಂಡು ಜನ ಹೆದರುವ ಪರಿಸ್ಥಿತಿ ನಿರ್ಮಾಣವಾಗಿರುವುದೇಕೇ? 2006ರ ಪ್ರಕರಣದ ವಿಚಾರಣೆಯೊಂದರಲ್ಲಿ ಪೊಲೀಸ್ ವ್ಯವಸ್ಥೆಯ ಸುಧಾರಣೆಗೆ ಸುಪ್ರೀಂ ಕೋರ್ಟ್ ಕೆಲವು ನಿರ್ದೇಶನಗಳನ್ನು ನೀಡಿದ್ದರೂ ಅವುಗಳು ಜಾರಿಯಾಗಿರುವ ಉದಾಹರಣೆ ಯಾವ ರಾಜ್ಯದಲ್ಲಿಯೂ ಇಲ್ಲ.

ಇನ್ನು ಪ್ರಭುತ್ವಗಳು ಜನರ ಹೋರಾಟಗಳನ್ನು, ಪ್ರತಿಭಟನೆಗಳನ್ನು ನಿಯಂತ್ರಿಸಲು, ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡ ನೂರಾರು ಉದಾಹರಣೆಗಳಿವೆ. ಯಾವುದೇ ರಾಜಕೀಯ ಪಕ್ಷಕ್ಕೆ ನಿಷ್ಠೆ ತೋರದೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವಂತೆ, ಬಡಜನ, ದೀನ ದಲಿತರು ಮತ್ತು ಮಹಿಳೆಯರ ಜೊತೆಗೆ ವರ್ತಿಸುವಾಗ ಸೂಕ್ಷ್ಮತೆ ತೋರುವಂತೆ, ತಾವೂ ನಾಗರಿಕರೇ ಎಂಬ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ತರಬೇತು ನೀಡುವ ಮತ್ತು ಸಮಗ್ರ ಸುಧಾರಣೆಯನ್ನು ತರುವ ತುರ್ತು ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ.

ಕೆಲವೇ ದಿನಗಳ ಹಿಂದೆ ಅಂಗವಿಕಲ ಮಹಿಳೆಗೆ ಒದ್ದ, ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ, ನಾನುಗೌರಿ ಸೇರಿದಂತೆ ವಿವಿಧ ಜನಪರ ಮಾಧ್ಯಮಗಳು ಒತ್ತಡ ಹೇರಿದ ಮೇಲೆ, ಆ ಎಎಸ್‌ಐಅನ್ನು ಸಸ್ಪೆಂಡ್ ಮಾಡಲಾಗಿದೆ. ಅದಷ್ಟೇ ಸಾಕೇ? ಆತನ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಲ್ಲವೇ? ವಾಹನಗಳ ಟೋಯಿಂಗ್ ಅನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಆದರೆ ಅದು ಮುಂದೊಂದು ದಿನ ಬೇರೊಂದು ರೀತಿಯಲ್ಲಿ ಬರಬಹುದು. ಇದರ ಬದಲು ನಾಗರಿಕರಿಗೆ ಬೇಕಾದ ರೀತಿಯಲ್ಲಿ ಕಾನೂನು ಪಾಲನೆ ಮಾಡುವ, ನಾಗರಿಕರನ್ನು ಒಳಗೊಂಡಂತೆ ಪೊಲೀಸ್ ವ್ಯವಸ್ಥೆ ಸೃಷ್ಟಿಸಿಕೊಳ್ಳಲು ಸಮಗ್ರ ಸುಧಾರಣೆಯ ಅಗತ್ಯವಿದೆ. ಇದಕ್ಕಾಗಿ ನಾಗರಿಕ ಸಮಾಜ ತನಗಿರುವ ಪ್ರಭಾವವನ್ನು ಬಳಸಿ ಒತ್ತಡ ಹೇರಬೇಕಿದೆ.


ಇದನ್ನೂ ಓದಿ: ’ಪ್ರಾಮಾಣಿಕತೆ’ ಕುಚೋದ್ಯಕ್ಕೆ ಒಳಗಾಗುತ್ತಿರುವ ಕಾಲದಲ್ಲಿ ನೆನೆಯಬೇಕಿರುವ ಬಿ.ಜಿ ಹಾರ್ನಿಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....