Homeಚಳವಳಿಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗವು ನಮಗೆ ಹಲವು ಪಾಠಗಳನ್ನು ಕಲಿಸಿದೆ. ದೇಶದ ಆರೋಗ್ಯ ಪರಿಸ್ಥಿತಿ ಮತ್ತು ಕೋವಿಡ್‍ ಅಲ್ಲದ ಸಂದರ್ಭದಲ್ಲೂ ಸಾಮಾನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಅನೇಕ ಪಾಠಗಳನ್ನು ಕಲಿಯಲು ದಾರಿ ಮಾಡಿಕೊಟ್ಟಿದೆ. ಈಗ ಕಲ್ಯಾಣ ಕಾರ್ಯಕ್ರಮಗಳನ್ನು (welfare system) ಮರು ವಿನ್ಯಾಸಗೊಳಿಸುವ ಅಗತ್ಯ ಇದೆ ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಜೋಧ್‍ಪುರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಪ್ಲಿಮೆಂಟೇಶನ್ ರಿಸರ್ಚ್ ಆಯೋಜಿಸಿದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ದೇಶದ ಆರೋಗ್ಯ ಪರಿಸ್ಥಿತಿ, ಕಲ್ಯಾಣ ಕಾರ್ಯಕ್ರಮ ಮತ್ತು ಆರೋಗ್ಯ ವ್ಯವಸ್ಥೆಗಳ ಆರ್ಥಿಕ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು.

ಆರೋಗ್ಯ ಪರಿಸ್ಥಿತಿಯ ಆರ್ಥಿಕ ಅಂಶದ ಕುರಿತು ಮಾತನಾಡುತ್ತ, ‘ಭಾರತವು ಜೀವನಶೈಲಿ (ಲೈಫ್‍ಸ್ಟೈಲ್‍)  ಕಾಯಿಲೆಗಳಿಂದ ಬಳಲುತ್ತಿರುವ ದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಅವು ಸಾಂಕ್ರಾಮಿಕವಲ್ಲದ ಕಾಯಿಲೆಗಳು (ಎನ್‌ಸಿಡಿ). ಸಾಂಕ್ರಾಮಿಕ ರೋಗದ ಎರಡನೆಯ ಮತ್ತು ಮೊದಲ ಅಲೆಯಲ್ಲಿ ಅನೇಕ ಯುವಕರು ಸಾವನ್ನಪ್ಪಿದರು. ಆದರೆ ಅವರ ಆಗಿನ ಪರಿಸ್ಥಿತಿಗಳನ್ನು ಪತ್ತೆ ಮಾಡಿಲ್ಲ. ಯುವಕರಲ್ಲಿ ಇಂಥಹದ್ದು ಹೇಗೆ ಸಂಭವಿಸಿತು ಎಂದು ಪ್ರಶ್ನಿಸಿದ ಅವರು, ಸಾಂಕ್ರಾಮಿಕವಲ್ಲದ ಕಾಯಿಲೆಗಳ (ಎನ್‌ಸಿಡಿ) ಬಗ್ಗೆ ಜಾಗೃತಿ ಮೂಡಿಸುವುದು ಒಂದು ಪ್ರಮುಖ ಸವಾಲಾಗಿದೆ ಎಂದರು.

‘ದೇಶದ ಕಲ್ಯಾಣ ವ್ಯವಸ್ಥೆಯನ್ನು (ಸಾಮಾಜಿಕ ಕಲ್ಯಾಣ ಕಾರ್ಯಕ್ರಮ) ಸಾಂಕ್ರಾಮಿಕ ರೋಗ ಎದುರಿಸಲು ವಿನ್ಯಾಸಗೊಳಿಸಲಾಗಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಸಂದರ್ಭಗಳನ್ನು ಎದುರಿಸಲು ಕಲ್ಯಾಣ ಯೋಜನೆಗಳನ್ನು ಮರುವಿನ್ಯಾಸಗೊಳಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.

ದೇಶದ ಆರೋಗ್ಯ ವ್ಯವಸ್ಥೆಯ ವಿವಿಧ ಆಯಾಮಗಳ ಕುರಿತು ಮಾತನಾಡಿದ ಬ್ಯಾನರ್ಜಿ, ಯಾವುದೇ  ವೈದ್ಯಕೀಯ ಅರ್ಹತೆ ಇಲ್ಲದ ನಕಲಿ ವೈದ್ಯರ ಚಿಕಿತ್ಸೆ ಮತ್ತು ಸ್ಟಿರಾಯ್ಡ್ ಗಳ ವಿವೇಚನೆಯಿಲ್ಲದ ಬಳಕೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಒಂದು ಅಧ್ಯಯನವನ್ನು ಉಲ್ಲೇಖಿಸಿ, ಪಶ್ಚಿಮ ಬಂಗಾಳದಲ್ಲಿ, ಕಡಿಮೆ ತೂಕದ ಮಹಿಳೆಯರು ಮದುವೆ ಹೊತ್ತಿಗೆ ತೂಕ ಹೆಚ್ಚು ಮಾಡಿಕೊಳ್ಳಲು ಆಗಾಗ್ಗೆ ಸ್ಟಿರಾಯ್ಡ್‌ಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಈ ಸ್ಟಿರಾಯ್ಡ್ ಸ್ಥಳೀಯ ದಿನಸಿಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ (ಕ್ವಾಕ್) ಪರಿಪಾಠ ಸಂಪೂರ್ಣವಾಗಿ ಮುಕ್ತ ವಿದ್ಯಮಾನವೆಂದು ಹೇಳುವ ಬ್ಯಾನರ್ಜಿ, ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕಠಿಣ ಕಾನೂನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಆರೋಗ್ಯ ವ್ಯವಸ್ಥೆಯನ್ನು ಆರೋಗ್ಯ ವ್ಯವಸ್ಥೆಯಿಂದ ಹೊರಗುಳಿದವರು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಾಮಾನ್ಯ ಕಾಯಿಲೆಗಳಿಗೆ ಔಷಧಿಗಳನ್ನು ಅತಿಯಾಗಿ ಶಿಫಾರಸು ಮಾಡುವ ವಿಷಯವನ್ನೂ ಬ್ಯಾನರ್ಜಿ ಎತ್ತಿ ತೋರಿಸಿದರು. ವೈದ್ಯಕೀಯ ಕಡೆಗಿನ ಗ್ರಾಹಕ ಸಂಸ್ಕೃತಿಯನ್ನು ದೂರಿದ ಅವರು, ರೋಗನಿರೋಧಕತೆ ತರುವ ವಿಧಾನದ ಬದಲು, ರೋಗ ತಡೆಗಟ್ಟುವ ಅಭಿವೃದ್ಧಿಯ ಅಗತ್ಯವನ್ನು ಒತ್ತಿ ಹೇಳಿದರು.

ನಾವು ಔಷಧಿಗಳ ಬೇಡಿಕೆಗೆ ಒಡ್ಡಿಕೊಳ್ಳುತ್ತೇವೆ. ನಾವು ವೈದ್ಯರ ಬಳಿಗೆ ಹೋಗಿ ‘ನಮಗೆ ಏನನ್ನಾದರೂ ನೀಡಿ’ ಎಂದು ಕೇಳುತ್ತೇವೆ, ಅವರು ಔಷಧಿಗಳನ್ನು ಶಿಫಾರಸು ಮಾಡಲು ಇಷ್ಟವಿಲ್ಲದಿದ್ದಾಗಲೂ ಕೂಡ ನಾವು, ’ಏನನ್ನಾದರೂ ನೀಡಿ ಎನ್ನುತ್ತೇವೆ’ ಎಂದು ಬ್ಯಾನರ್ಜಿ ತಿಳಿಸಿದರು.

ಕಾಯಿಲೆ ತಡೆಗಟ್ಟುವಿಕೆಗಾಗಿ ಒಂದು ಸರಳ ವ್ಯವಸ್ಥೆಯನ್ನು ನಿರ್ಮಿಸುವ ಅವಶ್ಯಕತೆಯಿದೆ ಮತ್ತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...