Homeಚಳವಳಿಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗವು ನಮಗೆ ಹಲವು ಪಾಠಗಳನ್ನು ಕಲಿಸಿದೆ. ದೇಶದ ಆರೋಗ್ಯ ಪರಿಸ್ಥಿತಿ ಮತ್ತು ಕೋವಿಡ್‍ ಅಲ್ಲದ ಸಂದರ್ಭದಲ್ಲೂ ಸಾಮಾನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಅನೇಕ ಪಾಠಗಳನ್ನು ಕಲಿಯಲು ದಾರಿ ಮಾಡಿಕೊಟ್ಟಿದೆ. ಈಗ ಕಲ್ಯಾಣ ಕಾರ್ಯಕ್ರಮಗಳನ್ನು (welfare system) ಮರು ವಿನ್ಯಾಸಗೊಳಿಸುವ ಅಗತ್ಯ ಇದೆ ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಜೋಧ್‍ಪುರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಪ್ಲಿಮೆಂಟೇಶನ್ ರಿಸರ್ಚ್ ಆಯೋಜಿಸಿದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ದೇಶದ ಆರೋಗ್ಯ ಪರಿಸ್ಥಿತಿ, ಕಲ್ಯಾಣ ಕಾರ್ಯಕ್ರಮ ಮತ್ತು ಆರೋಗ್ಯ ವ್ಯವಸ್ಥೆಗಳ ಆರ್ಥಿಕ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು.

ಆರೋಗ್ಯ ಪರಿಸ್ಥಿತಿಯ ಆರ್ಥಿಕ ಅಂಶದ ಕುರಿತು ಮಾತನಾಡುತ್ತ, ‘ಭಾರತವು ಜೀವನಶೈಲಿ (ಲೈಫ್‍ಸ್ಟೈಲ್‍)  ಕಾಯಿಲೆಗಳಿಂದ ಬಳಲುತ್ತಿರುವ ದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಅವು ಸಾಂಕ್ರಾಮಿಕವಲ್ಲದ ಕಾಯಿಲೆಗಳು (ಎನ್‌ಸಿಡಿ). ಸಾಂಕ್ರಾಮಿಕ ರೋಗದ ಎರಡನೆಯ ಮತ್ತು ಮೊದಲ ಅಲೆಯಲ್ಲಿ ಅನೇಕ ಯುವಕರು ಸಾವನ್ನಪ್ಪಿದರು. ಆದರೆ ಅವರ ಆಗಿನ ಪರಿಸ್ಥಿತಿಗಳನ್ನು ಪತ್ತೆ ಮಾಡಿಲ್ಲ. ಯುವಕರಲ್ಲಿ ಇಂಥಹದ್ದು ಹೇಗೆ ಸಂಭವಿಸಿತು ಎಂದು ಪ್ರಶ್ನಿಸಿದ ಅವರು, ಸಾಂಕ್ರಾಮಿಕವಲ್ಲದ ಕಾಯಿಲೆಗಳ (ಎನ್‌ಸಿಡಿ) ಬಗ್ಗೆ ಜಾಗೃತಿ ಮೂಡಿಸುವುದು ಒಂದು ಪ್ರಮುಖ ಸವಾಲಾಗಿದೆ ಎಂದರು.

‘ದೇಶದ ಕಲ್ಯಾಣ ವ್ಯವಸ್ಥೆಯನ್ನು (ಸಾಮಾಜಿಕ ಕಲ್ಯಾಣ ಕಾರ್ಯಕ್ರಮ) ಸಾಂಕ್ರಾಮಿಕ ರೋಗ ಎದುರಿಸಲು ವಿನ್ಯಾಸಗೊಳಿಸಲಾಗಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಸಂದರ್ಭಗಳನ್ನು ಎದುರಿಸಲು ಕಲ್ಯಾಣ ಯೋಜನೆಗಳನ್ನು ಮರುವಿನ್ಯಾಸಗೊಳಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.

ದೇಶದ ಆರೋಗ್ಯ ವ್ಯವಸ್ಥೆಯ ವಿವಿಧ ಆಯಾಮಗಳ ಕುರಿತು ಮಾತನಾಡಿದ ಬ್ಯಾನರ್ಜಿ, ಯಾವುದೇ  ವೈದ್ಯಕೀಯ ಅರ್ಹತೆ ಇಲ್ಲದ ನಕಲಿ ವೈದ್ಯರ ಚಿಕಿತ್ಸೆ ಮತ್ತು ಸ್ಟಿರಾಯ್ಡ್ ಗಳ ವಿವೇಚನೆಯಿಲ್ಲದ ಬಳಕೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಒಂದು ಅಧ್ಯಯನವನ್ನು ಉಲ್ಲೇಖಿಸಿ, ಪಶ್ಚಿಮ ಬಂಗಾಳದಲ್ಲಿ, ಕಡಿಮೆ ತೂಕದ ಮಹಿಳೆಯರು ಮದುವೆ ಹೊತ್ತಿಗೆ ತೂಕ ಹೆಚ್ಚು ಮಾಡಿಕೊಳ್ಳಲು ಆಗಾಗ್ಗೆ ಸ್ಟಿರಾಯ್ಡ್‌ಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಈ ಸ್ಟಿರಾಯ್ಡ್ ಸ್ಥಳೀಯ ದಿನಸಿಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ (ಕ್ವಾಕ್) ಪರಿಪಾಠ ಸಂಪೂರ್ಣವಾಗಿ ಮುಕ್ತ ವಿದ್ಯಮಾನವೆಂದು ಹೇಳುವ ಬ್ಯಾನರ್ಜಿ, ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕಠಿಣ ಕಾನೂನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಆರೋಗ್ಯ ವ್ಯವಸ್ಥೆಯನ್ನು ಆರೋಗ್ಯ ವ್ಯವಸ್ಥೆಯಿಂದ ಹೊರಗುಳಿದವರು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಾಮಾನ್ಯ ಕಾಯಿಲೆಗಳಿಗೆ ಔಷಧಿಗಳನ್ನು ಅತಿಯಾಗಿ ಶಿಫಾರಸು ಮಾಡುವ ವಿಷಯವನ್ನೂ ಬ್ಯಾನರ್ಜಿ ಎತ್ತಿ ತೋರಿಸಿದರು. ವೈದ್ಯಕೀಯ ಕಡೆಗಿನ ಗ್ರಾಹಕ ಸಂಸ್ಕೃತಿಯನ್ನು ದೂರಿದ ಅವರು, ರೋಗನಿರೋಧಕತೆ ತರುವ ವಿಧಾನದ ಬದಲು, ರೋಗ ತಡೆಗಟ್ಟುವ ಅಭಿವೃದ್ಧಿಯ ಅಗತ್ಯವನ್ನು ಒತ್ತಿ ಹೇಳಿದರು.

ನಾವು ಔಷಧಿಗಳ ಬೇಡಿಕೆಗೆ ಒಡ್ಡಿಕೊಳ್ಳುತ್ತೇವೆ. ನಾವು ವೈದ್ಯರ ಬಳಿಗೆ ಹೋಗಿ ‘ನಮಗೆ ಏನನ್ನಾದರೂ ನೀಡಿ’ ಎಂದು ಕೇಳುತ್ತೇವೆ, ಅವರು ಔಷಧಿಗಳನ್ನು ಶಿಫಾರಸು ಮಾಡಲು ಇಷ್ಟವಿಲ್ಲದಿದ್ದಾಗಲೂ ಕೂಡ ನಾವು, ’ಏನನ್ನಾದರೂ ನೀಡಿ ಎನ್ನುತ್ತೇವೆ’ ಎಂದು ಬ್ಯಾನರ್ಜಿ ತಿಳಿಸಿದರು.

ಕಾಯಿಲೆ ತಡೆಗಟ್ಟುವಿಕೆಗಾಗಿ ಒಂದು ಸರಳ ವ್ಯವಸ್ಥೆಯನ್ನು ನಿರ್ಮಿಸುವ ಅವಶ್ಯಕತೆಯಿದೆ ಮತ್ತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....