Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...