Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...