Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...