Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...