Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...