Homeಮುಖಪುಟಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಜಾರ್ಖಂಡ್ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಮಿಲಿಟರಿಯ ಸಹಾಯ ಬೇಕಾಗಬಹುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಳಿವು ನೀಡಿದ್ದಾರೆ. ಸಾಂಕ್ರಾಮಿಕ ರೋಗದ ಹೊರತಾಗಿಯೂ ಜನರಲ್ಲಿ ಉಂಟಾಗಿರುವ ಭಯದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರಿಗೆ ಪತ್ರ ಬರೆಯುತ್ತೇವೆ. ಅವರ ಮಿಲಿಟರಿ ಶಕ್ತಿ ಮತ್ತು ಸೌಲಭ್ಯಗಳನ್ನು ನಮ್ಮ ರಾಜ್ಯದಲ್ಲಿ ಬಳಸಲು ನಾವು ಬಯಸುತ್ತೇವೆ” ಎಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದರು.

ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ 3,838 ಹೊಸ ಪ್ರಕರಣಗಳನ್ನು ಮತ್ತು 30 ಸಾವುಗಳನ್ನು ವರದಿ ಮಾಡಿದೆ.  ಇದರಿಂದ ಒಟ್ಟಾರೆ ರಾಜ್ಯದಲ್ಲಿ ಸುಮಾರು 1.6 ಲಕ್ಷ ಸೋಂಕಿತರು ವರದಿಯಾಗಿದ್ದರೆ, 1,400 ಕ್ಕೂ ಹೆಚ್ಚು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

“ನಾನು ಉಪಚುನಾವಣೆ ಕಾರ್ಯಕ್ರಮದಿಂದ ಈಗಷ್ಟೇ ಹಿಂದಿರುಗಿದ್ದೇನೆ. ಜನರು ಮಾಸ್ಕ್‌ಗಳನ್ನು ಧರಿಸುವುದಿಲ್ಲ, ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಇದನ್ನೆಲ್ಲಾ ನೋಡಿ ನಾನು ಬೆಚ್ಚಿಬಿದ್ದಿದ್ದೇನೆ.  ಜನರು ಸಂಪೂರ್ಣವಾಗಿ ಭಯವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಗಟ್ಟಿಯಾದ ಸಂದೇಶ ನೀಡುವ ಅಗತ್ಯವಿದೆ’’ ಎಂದು ಹೇಮಂತ್ ಸೊರೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಕೊರೊನಾ ನಿಯಮಗಳನ್ನು ಮೀರದಂತೆ, ಅವುಗಳನ್ನು ಅನುಸರಿಸುವಂತೆ ನಿರ್ದೇಶನಗಳನ್ನು ನೀಡುವಂತೆ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವುದು ಮತ್ತು ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದು ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಜಾರ್ಖಂಡ್‌ನಲ್ಲಿ ಸಾಕಷ್ಟು ಆಮ್ಲಜನಕ ಘಟಕಗಳಿವೆ ಆದರೂ, ಆರೋಗ್ಯ ರಕ್ಷಣಾ ವ್ಯವಸ್ಥೆಯು ಇನ್ನೂ ಕೊರತೆಯನ್ನು ಎದುರಿಸಬೇಕಾಗುತ್ತದೆ. ನಮಗೆ ಹೆಚ್ಚಿನ ರೆಮ್‌ಡೆಸಿವಿರ್ ಚುಚ್ಚುಮದ್ದುಗಳು ಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ದಂಡ ಹೆಚ್ಚಳದ ಬಗ್ಗೆ ಮಾತನಾಡಿರುವ ಅವರು, “ದಿನಕ್ಕೆ 200 ರೂಪಾಯಿ ಮಾತ್ರ ಗಳಿಸುವ ವ್ಯಕ್ತಿಯ ಮೇಲೆ ಮಾಸ್ಕ್ ಧರಿಸದಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸುವ ಮೂಲಕ ನಾವು ಏನು ಸಾಬೀತುಪಡಿಸುತ್ತಿದ್ದೇವೆ?” ಅವನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂಪಾಯಿ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...