Homeಮುಖಪುಟವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

- Advertisement -
- Advertisement -

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸಿ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದ ಪ್ರಾಧ್ಯಾಪಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಾಗ, ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಂವಿಧಾನದ 19(1) (ಎ) ವಿಧಿ ಖಾತರಿಪಡಿಸಿದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆ ಬಗ್ಗೆ ನಮ್ಮ ಪೊಲೀಸರಿಗೆ ಅರಿವು ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಅವರು ಸಂವೇದನಾಶೀಲರಾಗಬೇಕು. ಈ ಹೇಳಿಕೆಯು ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನೀಡಿದ ವಿಶಾಲ ತೀರ್ಪಿನ ಭಾಗವಾಗಿದೆ.

ವಿಶೇಷವಾಗಿ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವ ನಾಗರಿಕರ ಮೂಲಭೂತ ಹಕ್ಕನ್ನು ತೀರ್ಪಿನಲ್ಲಿ ಒತ್ತಿ ಹೇಳಲಾಗಿದೆ. ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ವಾಟ್ಸಾಪ್ ಸ್ಟೇಟಸ್ ಸಂದೇಶಗಳಿಗಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ  ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಈ ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ.

ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸುವ ವಾಟ್ಸಾಪ್ ಸ್ಟೇಟಸ್‌ ಬಗೆಗಿನ ಪ್ರಕರಣದಲ್ಲಿ ಜಾವೇದ್ ಅಹ್ಮದ್ ಹಜಾಮ್ ವಿರುದ್ಧ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು, ಸ್ಟೇಟಸ್‌ನಲ್ಲಿ ಆರ್ಟಿಕಲ್ 370ರ ರದ್ಧತಿಯನ್ನು ‘ಜಮ್ಮು ಮತ್ತು ಕಾಶ್ಮೀರಕ್ಕೆ ಕರಾಳ ದಿನ’ ಎಂದು ಬಣ್ಣಿಸಲಾಗಿತ್ತು. ಇಂತಹ ಸಂದೇಶಗಳು ವಿವಿಧ ಗುಂಪುಗಳ ನಡುವೆ ಅಶಾಂತಿಗೆ ಕಾರಣವಾಗುತ್ತದೆ ಎಂದು ಬಾಂಬೆ ಹೈಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಆದರೆ ಸರ್ವೋಚ್ಚ ನ್ಯಾಯಾಲಯವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಗುರುತಿಸಿದೆ ಮತ್ತು ಐಪಿಸಿಯ ಸೆಕ್ಷನ್ 153ಎ ಅಡಿಯಲ್ಲಿ ಪ್ರೊಫೆಸರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಮುಖ್ಯವಾಗಿ, ರಾಜ್ಯದ  ವಿರುದ್ಧದ ಪ್ರತಿ ಟೀಕೆ ಅಥವಾ ಪ್ರತಿಭಟನೆಯನ್ನು ಸೆಕ್ಷನ್ 153-ಎ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಿದರೆ, ಭಾರತದ ಸಂವಿಧಾನದ ಅತ್ಯಗತ್ಯ ಲಕ್ಷಣವಾದ ಪ್ರಜಾಪ್ರಭುತ್ವವು ಜೀವಂತವಾಗಿರುವುದಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ಪ್ರೊ.ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಇದನ್ನು ಓದಿ: ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...