Homeಮುಖಪುಟವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

- Advertisement -
- Advertisement -

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸಿ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದ ಪ್ರಾಧ್ಯಾಪಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಾಗ, ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಂವಿಧಾನದ 19(1) (ಎ) ವಿಧಿ ಖಾತರಿಪಡಿಸಿದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆ ಬಗ್ಗೆ ನಮ್ಮ ಪೊಲೀಸರಿಗೆ ಅರಿವು ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಅವರು ಸಂವೇದನಾಶೀಲರಾಗಬೇಕು. ಈ ಹೇಳಿಕೆಯು ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನೀಡಿದ ವಿಶಾಲ ತೀರ್ಪಿನ ಭಾಗವಾಗಿದೆ.

ವಿಶೇಷವಾಗಿ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವ ನಾಗರಿಕರ ಮೂಲಭೂತ ಹಕ್ಕನ್ನು ತೀರ್ಪಿನಲ್ಲಿ ಒತ್ತಿ ಹೇಳಲಾಗಿದೆ. ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ವಾಟ್ಸಾಪ್ ಸ್ಟೇಟಸ್ ಸಂದೇಶಗಳಿಗಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ  ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಈ ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ.

ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸುವ ವಾಟ್ಸಾಪ್ ಸ್ಟೇಟಸ್‌ ಬಗೆಗಿನ ಪ್ರಕರಣದಲ್ಲಿ ಜಾವೇದ್ ಅಹ್ಮದ್ ಹಜಾಮ್ ವಿರುದ್ಧ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು, ಸ್ಟೇಟಸ್‌ನಲ್ಲಿ ಆರ್ಟಿಕಲ್ 370ರ ರದ್ಧತಿಯನ್ನು ‘ಜಮ್ಮು ಮತ್ತು ಕಾಶ್ಮೀರಕ್ಕೆ ಕರಾಳ ದಿನ’ ಎಂದು ಬಣ್ಣಿಸಲಾಗಿತ್ತು. ಇಂತಹ ಸಂದೇಶಗಳು ವಿವಿಧ ಗುಂಪುಗಳ ನಡುವೆ ಅಶಾಂತಿಗೆ ಕಾರಣವಾಗುತ್ತದೆ ಎಂದು ಬಾಂಬೆ ಹೈಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಆದರೆ ಸರ್ವೋಚ್ಚ ನ್ಯಾಯಾಲಯವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಗುರುತಿಸಿದೆ ಮತ್ತು ಐಪಿಸಿಯ ಸೆಕ್ಷನ್ 153ಎ ಅಡಿಯಲ್ಲಿ ಪ್ರೊಫೆಸರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಮುಖ್ಯವಾಗಿ, ರಾಜ್ಯದ  ವಿರುದ್ಧದ ಪ್ರತಿ ಟೀಕೆ ಅಥವಾ ಪ್ರತಿಭಟನೆಯನ್ನು ಸೆಕ್ಷನ್ 153-ಎ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಿದರೆ, ಭಾರತದ ಸಂವಿಧಾನದ ಅತ್ಯಗತ್ಯ ಲಕ್ಷಣವಾದ ಪ್ರಜಾಪ್ರಭುತ್ವವು ಜೀವಂತವಾಗಿರುವುದಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ಪ್ರೊ.ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಇದನ್ನು ಓದಿ: ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...