Homeಮುಖಪುಟವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

- Advertisement -
- Advertisement -

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸಿ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದ ಪ್ರಾಧ್ಯಾಪಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಾಗ, ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಂವಿಧಾನದ 19(1) (ಎ) ವಿಧಿ ಖಾತರಿಪಡಿಸಿದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆ ಬಗ್ಗೆ ನಮ್ಮ ಪೊಲೀಸರಿಗೆ ಅರಿವು ಮತ್ತು ಶಿಕ್ಷಣ ನೀಡುವ ಸಮಯ ಬಂದಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಅವರು ಸಂವೇದನಾಶೀಲರಾಗಬೇಕು. ಈ ಹೇಳಿಕೆಯು ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನೀಡಿದ ವಿಶಾಲ ತೀರ್ಪಿನ ಭಾಗವಾಗಿದೆ.

ವಿಶೇಷವಾಗಿ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವ ನಾಗರಿಕರ ಮೂಲಭೂತ ಹಕ್ಕನ್ನು ತೀರ್ಪಿನಲ್ಲಿ ಒತ್ತಿ ಹೇಳಲಾಗಿದೆ. ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ವಾಟ್ಸಾಪ್ ಸ್ಟೇಟಸ್ ಸಂದೇಶಗಳಿಗಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ  ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಜಾವೇದ್ ಅಹ್ಮದ್ ಹಜಾಮ್ ಅವರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಈ ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ.

ಆರ್ಟಿಕಲ್ 370ರ ರದ್ದತಿಯನ್ನು ಟೀಕಿಸುವ ವಾಟ್ಸಾಪ್ ಸ್ಟೇಟಸ್‌ ಬಗೆಗಿನ ಪ್ರಕರಣದಲ್ಲಿ ಜಾವೇದ್ ಅಹ್ಮದ್ ಹಜಾಮ್ ವಿರುದ್ಧ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು, ಸ್ಟೇಟಸ್‌ನಲ್ಲಿ ಆರ್ಟಿಕಲ್ 370ರ ರದ್ಧತಿಯನ್ನು ‘ಜಮ್ಮು ಮತ್ತು ಕಾಶ್ಮೀರಕ್ಕೆ ಕರಾಳ ದಿನ’ ಎಂದು ಬಣ್ಣಿಸಲಾಗಿತ್ತು. ಇಂತಹ ಸಂದೇಶಗಳು ವಿವಿಧ ಗುಂಪುಗಳ ನಡುವೆ ಅಶಾಂತಿಗೆ ಕಾರಣವಾಗುತ್ತದೆ ಎಂದು ಬಾಂಬೆ ಹೈಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಆದರೆ ಸರ್ವೋಚ್ಚ ನ್ಯಾಯಾಲಯವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಗುರುತಿಸಿದೆ ಮತ್ತು ಐಪಿಸಿಯ ಸೆಕ್ಷನ್ 153ಎ ಅಡಿಯಲ್ಲಿ ಪ್ರೊಫೆಸರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಮುಖ್ಯವಾಗಿ, ರಾಜ್ಯದ  ವಿರುದ್ಧದ ಪ್ರತಿ ಟೀಕೆ ಅಥವಾ ಪ್ರತಿಭಟನೆಯನ್ನು ಸೆಕ್ಷನ್ 153-ಎ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಿದರೆ, ಭಾರತದ ಸಂವಿಧಾನದ ಅತ್ಯಗತ್ಯ ಲಕ್ಷಣವಾದ ಪ್ರಜಾಪ್ರಭುತ್ವವು ಜೀವಂತವಾಗಿರುವುದಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ಪ್ರೊ.ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಇದನ್ನು ಓದಿ: ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...