Homeಕರ್ನಾಟಕನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸುವಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ.

- Advertisement -
- Advertisement -

ನೀವು ಸೈಕ್ಲಿಂಗ್ ಪ್ರಿಯರಾಗಿದ್ದು, ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ. ಈ ಪ್ರಕ್ರಿಯೆಯಲ್ಲಿ ಬೈಸಿಕಲ್ ಲೈನ್‌ಗಾಗಿ ಐಡಿಯಾಗಳನ್ನು ಜನರಿಂದಲೇ ಕ್ರೌಡ್‌ಸೋರ್ಸ್ ಆಗಿ ಪಡೆಯಲು DULT ಮುಂದಾಗಿದೆ.

ಕೇಂದ್ರ ಸರ್ಕಾರದ ಸೈಕಲ್ ಫಾರ್ ಚೇಂಜ್ ಅಭಿಯಾನದ ಭಾಗವಾಗಿ, ಈಗಾಗಲೆ ಬೆಂಗಳೂರಿನ ಹೊರ ವರ್ತುಲ ರಿಂಗ್ ರಸ್ತೆ (ಔಟರ್‌ ರಿಂಗ್‌ ರೋಡ್)ಯ ಸರ್ವಿಸ್ ರಸ್ತೆಯಲ್ಲಿ ಬೈಸಿಕಲ್ ಲೇನ್ ನಿರ್ಮಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದೆ.

“ನಾವು ಸೈಕ್ಲಿಂಗ್ ಲೇನ್‌ ನಿರ್ಮಿಸಲು ತಾತ್ಕಾಲಿಕವಾಗಿ ಒಆರ್‌ಆರ್‌ ಮತ್ತು ಓಲ್ಡ್ ಮದ್ರಾಸ್ ರಸ್ತೆಯನ್ನು ಕೈಗೆತ್ತಿಕೊಂಡಿದ್ದೇವೆ. ಸೈಕ್ಲಿಸ್ಟ್‌ಗಳು ವಿಭಿನ್ನ ಬೇಡಿಕೆಗಳನ್ನು ಹೊಂದಿರಬಹುದು ಮತ್ತು ಮುಖ್ಯ ರಸ್ತೆಗಳನ್ನು ಹೊರತುಪಡಿಸಿ ವಿಭಿನ್ನ ಮಾರ್ಗಗಳನ್ನು ಬಯಸುತ್ತಾರೆ. ಆದ್ದರಿಂದ ನಾವು ಅವರ ಅಭಿಪ್ರಾಯ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಅವರಿಂದಲೇ ವಿಚಾರವನ್ನು ಪಡೆಯಲು ನಿರ್ಧರಿಸಿದ್ದೇವೆ” ಎಂದು DULT ನಿರ್ದೇಶಕಿ ವಿ. ಮಂಜುಳಾ ಹೇಳಿದ್ದಾರೆ.

ಸೈಕ್ಲಿಂಗ್ ಉತ್ಸಾಹಿಗಳು ಅವರು ಪ್ರಯಾಣಿಸುವ ನಿರ್ದಿಷ್ಟ ಮಾರ್ಗವನ್ನು DULT ವೆಬ್‌ಸೈಟ್‌ನಲ್ಲಿ ಜಿಪಿಎಸ್ ದೃಶ್ಯೀಕರಣ ಸಾಧನದಲ್ಲಿ ತಿಳಿಸಬಹುದು. Google ಫಾರ್ಮ್‌ ಮೂಲಕ ಬಳಕೆದಾರರು ಹೆಚ್ಚುವರಿ ಮಾಹಿತಿಯನ್ನು ಒದಗಿಸಬಹುದಾಗಿದೆ.

DULT ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸುವವರು ತಮ್ಮ ಆದ್ಯತೆಗಳನ್ನು ORR ಅಥವಾ ಪೂರ್ವ ಬೆಂಗಳೂರು ರಸ್ತೆಗೆ ಸೀಮಿತವಾಗಿ ಅಭಿಪ್ರಾಯ ನೀಡಬೇಕಾಗಿಲ್ಲ. ಅವರು ಬೆಂಗಳೂರಿನ ಪೂರ್ತಿ ತಮಗೆ ಬೇಕಾದ ಸೈಕಲಿಂಗ್ ಲೇನ್‌ಗಳ ಬಗ್ಗೆ ಐಡಿಯಾಗಳನ್ನು ನೀಡಬಹುದು. ತಮ್ಮ ಅಭಿಪ್ರಾಯಗಳನ್ನು ನೀಡಲು ಆಗಸ್ಟ್ 14 ರವರೆಗೆ ಸಮಯವಿದೆ. ಭವಿಷ್ಯದ ಯೋಜನೆಗಳು ಸಾರ್ವಜನಿಕ ಬೇಡಿಕೆಯೊಂದಿಗೆ ಸಮನ್ವಯವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು, ನಗರದಾದ್ಯಂತ ಸೈಕ್ಲಿಂಗ್ ಲೇನ್‌ಗಳ ಆದ್ಯತೆಗಳನ್ನು ಅರ್ಥಮಾಡಿಕೊಳ್ಳಲು ಇಲಾಖೆ ಈ ಕ್ರಮ ಕೈಗೊಂಡಿದೆ.

“ಇದು ವ್ಯಾಪಕವಾದ ನೆಟ್‌ವರ್ಕ್‌ಗಳನ್ನು ನಿರ್ಮಿಸುವ ಯೋಜನೆಗಳನ್ನು ಹೆಚ್ಚಿಸಲು ನಮಗೆ ಸಹಾಯ ಮಾಡುತ್ತದೆ. ಯಶಸ್ವಿ ಮಾದರಿಯಿಂದ ಸೈಕ್ಲಿಂಗ್ ಮಾಡಲು ಅನೇಕರನ್ನು ಪ್ರೋತ್ಸಾಹಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮಂಜುಳಾರವರು ಹೇಳಿದ್ದಾರೆ.


ಓದಿ: ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ! 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...