Homeಕರ್ನಾಟಕನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸುವಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ.

- Advertisement -
- Advertisement -

ನೀವು ಸೈಕ್ಲಿಂಗ್ ಪ್ರಿಯರಾಗಿದ್ದು, ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ. ಈ ಪ್ರಕ್ರಿಯೆಯಲ್ಲಿ ಬೈಸಿಕಲ್ ಲೈನ್‌ಗಾಗಿ ಐಡಿಯಾಗಳನ್ನು ಜನರಿಂದಲೇ ಕ್ರೌಡ್‌ಸೋರ್ಸ್ ಆಗಿ ಪಡೆಯಲು DULT ಮುಂದಾಗಿದೆ.

ಕೇಂದ್ರ ಸರ್ಕಾರದ ಸೈಕಲ್ ಫಾರ್ ಚೇಂಜ್ ಅಭಿಯಾನದ ಭಾಗವಾಗಿ, ಈಗಾಗಲೆ ಬೆಂಗಳೂರಿನ ಹೊರ ವರ್ತುಲ ರಿಂಗ್ ರಸ್ತೆ (ಔಟರ್‌ ರಿಂಗ್‌ ರೋಡ್)ಯ ಸರ್ವಿಸ್ ರಸ್ತೆಯಲ್ಲಿ ಬೈಸಿಕಲ್ ಲೇನ್ ನಿರ್ಮಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದೆ.

“ನಾವು ಸೈಕ್ಲಿಂಗ್ ಲೇನ್‌ ನಿರ್ಮಿಸಲು ತಾತ್ಕಾಲಿಕವಾಗಿ ಒಆರ್‌ಆರ್‌ ಮತ್ತು ಓಲ್ಡ್ ಮದ್ರಾಸ್ ರಸ್ತೆಯನ್ನು ಕೈಗೆತ್ತಿಕೊಂಡಿದ್ದೇವೆ. ಸೈಕ್ಲಿಸ್ಟ್‌ಗಳು ವಿಭಿನ್ನ ಬೇಡಿಕೆಗಳನ್ನು ಹೊಂದಿರಬಹುದು ಮತ್ತು ಮುಖ್ಯ ರಸ್ತೆಗಳನ್ನು ಹೊರತುಪಡಿಸಿ ವಿಭಿನ್ನ ಮಾರ್ಗಗಳನ್ನು ಬಯಸುತ್ತಾರೆ. ಆದ್ದರಿಂದ ನಾವು ಅವರ ಅಭಿಪ್ರಾಯ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಅವರಿಂದಲೇ ವಿಚಾರವನ್ನು ಪಡೆಯಲು ನಿರ್ಧರಿಸಿದ್ದೇವೆ” ಎಂದು DULT ನಿರ್ದೇಶಕಿ ವಿ. ಮಂಜುಳಾ ಹೇಳಿದ್ದಾರೆ.

ಸೈಕ್ಲಿಂಗ್ ಉತ್ಸಾಹಿಗಳು ಅವರು ಪ್ರಯಾಣಿಸುವ ನಿರ್ದಿಷ್ಟ ಮಾರ್ಗವನ್ನು DULT ವೆಬ್‌ಸೈಟ್‌ನಲ್ಲಿ ಜಿಪಿಎಸ್ ದೃಶ್ಯೀಕರಣ ಸಾಧನದಲ್ಲಿ ತಿಳಿಸಬಹುದು. Google ಫಾರ್ಮ್‌ ಮೂಲಕ ಬಳಕೆದಾರರು ಹೆಚ್ಚುವರಿ ಮಾಹಿತಿಯನ್ನು ಒದಗಿಸಬಹುದಾಗಿದೆ.

DULT ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸುವವರು ತಮ್ಮ ಆದ್ಯತೆಗಳನ್ನು ORR ಅಥವಾ ಪೂರ್ವ ಬೆಂಗಳೂರು ರಸ್ತೆಗೆ ಸೀಮಿತವಾಗಿ ಅಭಿಪ್ರಾಯ ನೀಡಬೇಕಾಗಿಲ್ಲ. ಅವರು ಬೆಂಗಳೂರಿನ ಪೂರ್ತಿ ತಮಗೆ ಬೇಕಾದ ಸೈಕಲಿಂಗ್ ಲೇನ್‌ಗಳ ಬಗ್ಗೆ ಐಡಿಯಾಗಳನ್ನು ನೀಡಬಹುದು. ತಮ್ಮ ಅಭಿಪ್ರಾಯಗಳನ್ನು ನೀಡಲು ಆಗಸ್ಟ್ 14 ರವರೆಗೆ ಸಮಯವಿದೆ. ಭವಿಷ್ಯದ ಯೋಜನೆಗಳು ಸಾರ್ವಜನಿಕ ಬೇಡಿಕೆಯೊಂದಿಗೆ ಸಮನ್ವಯವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು, ನಗರದಾದ್ಯಂತ ಸೈಕ್ಲಿಂಗ್ ಲೇನ್‌ಗಳ ಆದ್ಯತೆಗಳನ್ನು ಅರ್ಥಮಾಡಿಕೊಳ್ಳಲು ಇಲಾಖೆ ಈ ಕ್ರಮ ಕೈಗೊಂಡಿದೆ.

“ಇದು ವ್ಯಾಪಕವಾದ ನೆಟ್‌ವರ್ಕ್‌ಗಳನ್ನು ನಿರ್ಮಿಸುವ ಯೋಜನೆಗಳನ್ನು ಹೆಚ್ಚಿಸಲು ನಮಗೆ ಸಹಾಯ ಮಾಡುತ್ತದೆ. ಯಶಸ್ವಿ ಮಾದರಿಯಿಂದ ಸೈಕ್ಲಿಂಗ್ ಮಾಡಲು ಅನೇಕರನ್ನು ಪ್ರೋತ್ಸಾಹಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮಂಜುಳಾರವರು ಹೇಳಿದ್ದಾರೆ.


ಓದಿ: ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ! 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...