Homeಕರ್ನಾಟಕನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸುವಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ.

- Advertisement -
- Advertisement -

ನೀವು ಸೈಕ್ಲಿಂಗ್ ಪ್ರಿಯರಾಗಿದ್ದು, ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ. ಈ ಪ್ರಕ್ರಿಯೆಯಲ್ಲಿ ಬೈಸಿಕಲ್ ಲೈನ್‌ಗಾಗಿ ಐಡಿಯಾಗಳನ್ನು ಜನರಿಂದಲೇ ಕ್ರೌಡ್‌ಸೋರ್ಸ್ ಆಗಿ ಪಡೆಯಲು DULT ಮುಂದಾಗಿದೆ.

ಕೇಂದ್ರ ಸರ್ಕಾರದ ಸೈಕಲ್ ಫಾರ್ ಚೇಂಜ್ ಅಭಿಯಾನದ ಭಾಗವಾಗಿ, ಈಗಾಗಲೆ ಬೆಂಗಳೂರಿನ ಹೊರ ವರ್ತುಲ ರಿಂಗ್ ರಸ್ತೆ (ಔಟರ್‌ ರಿಂಗ್‌ ರೋಡ್)ಯ ಸರ್ವಿಸ್ ರಸ್ತೆಯಲ್ಲಿ ಬೈಸಿಕಲ್ ಲೇನ್ ನಿರ್ಮಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದೆ.

“ನಾವು ಸೈಕ್ಲಿಂಗ್ ಲೇನ್‌ ನಿರ್ಮಿಸಲು ತಾತ್ಕಾಲಿಕವಾಗಿ ಒಆರ್‌ಆರ್‌ ಮತ್ತು ಓಲ್ಡ್ ಮದ್ರಾಸ್ ರಸ್ತೆಯನ್ನು ಕೈಗೆತ್ತಿಕೊಂಡಿದ್ದೇವೆ. ಸೈಕ್ಲಿಸ್ಟ್‌ಗಳು ವಿಭಿನ್ನ ಬೇಡಿಕೆಗಳನ್ನು ಹೊಂದಿರಬಹುದು ಮತ್ತು ಮುಖ್ಯ ರಸ್ತೆಗಳನ್ನು ಹೊರತುಪಡಿಸಿ ವಿಭಿನ್ನ ಮಾರ್ಗಗಳನ್ನು ಬಯಸುತ್ತಾರೆ. ಆದ್ದರಿಂದ ನಾವು ಅವರ ಅಭಿಪ್ರಾಯ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಅವರಿಂದಲೇ ವಿಚಾರವನ್ನು ಪಡೆಯಲು ನಿರ್ಧರಿಸಿದ್ದೇವೆ” ಎಂದು DULT ನಿರ್ದೇಶಕಿ ವಿ. ಮಂಜುಳಾ ಹೇಳಿದ್ದಾರೆ.

ಸೈಕ್ಲಿಂಗ್ ಉತ್ಸಾಹಿಗಳು ಅವರು ಪ್ರಯಾಣಿಸುವ ನಿರ್ದಿಷ್ಟ ಮಾರ್ಗವನ್ನು DULT ವೆಬ್‌ಸೈಟ್‌ನಲ್ಲಿ ಜಿಪಿಎಸ್ ದೃಶ್ಯೀಕರಣ ಸಾಧನದಲ್ಲಿ ತಿಳಿಸಬಹುದು. Google ಫಾರ್ಮ್‌ ಮೂಲಕ ಬಳಕೆದಾರರು ಹೆಚ್ಚುವರಿ ಮಾಹಿತಿಯನ್ನು ಒದಗಿಸಬಹುದಾಗಿದೆ.

DULT ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸುವವರು ತಮ್ಮ ಆದ್ಯತೆಗಳನ್ನು ORR ಅಥವಾ ಪೂರ್ವ ಬೆಂಗಳೂರು ರಸ್ತೆಗೆ ಸೀಮಿತವಾಗಿ ಅಭಿಪ್ರಾಯ ನೀಡಬೇಕಾಗಿಲ್ಲ. ಅವರು ಬೆಂಗಳೂರಿನ ಪೂರ್ತಿ ತಮಗೆ ಬೇಕಾದ ಸೈಕಲಿಂಗ್ ಲೇನ್‌ಗಳ ಬಗ್ಗೆ ಐಡಿಯಾಗಳನ್ನು ನೀಡಬಹುದು. ತಮ್ಮ ಅಭಿಪ್ರಾಯಗಳನ್ನು ನೀಡಲು ಆಗಸ್ಟ್ 14 ರವರೆಗೆ ಸಮಯವಿದೆ. ಭವಿಷ್ಯದ ಯೋಜನೆಗಳು ಸಾರ್ವಜನಿಕ ಬೇಡಿಕೆಯೊಂದಿಗೆ ಸಮನ್ವಯವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು, ನಗರದಾದ್ಯಂತ ಸೈಕ್ಲಿಂಗ್ ಲೇನ್‌ಗಳ ಆದ್ಯತೆಗಳನ್ನು ಅರ್ಥಮಾಡಿಕೊಳ್ಳಲು ಇಲಾಖೆ ಈ ಕ್ರಮ ಕೈಗೊಂಡಿದೆ.

“ಇದು ವ್ಯಾಪಕವಾದ ನೆಟ್‌ವರ್ಕ್‌ಗಳನ್ನು ನಿರ್ಮಿಸುವ ಯೋಜನೆಗಳನ್ನು ಹೆಚ್ಚಿಸಲು ನಮಗೆ ಸಹಾಯ ಮಾಡುತ್ತದೆ. ಯಶಸ್ವಿ ಮಾದರಿಯಿಂದ ಸೈಕ್ಲಿಂಗ್ ಮಾಡಲು ಅನೇಕರನ್ನು ಪ್ರೋತ್ಸಾಹಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮಂಜುಳಾರವರು ಹೇಳಿದ್ದಾರೆ.


ಓದಿ: ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ! 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....